Thursday, October 3, 2024
Thursday, October 3, 2024

ಅಕ್ರಮ ಕಟ್ಟಡ ತಪಾಸಣೆ ನಡೆಸಿ ಕಾನೂನು ಕ್ರಮ

Date:

ಕರ್ನಾಟಕ ಮುನ್ಸಿಪಲ್ ಕಾಯ್ದೆ -1976ರ ಅಡಿ ಸಹಾಯಕ ಇಂಜಿನಿಯರ್ ಗಳು, ಕಾರ್ಯಪಾಲಕ ಇಂಜಿನಿಯರ್ ಗಳು, ತಮ್ಮ ವ್ಯಾಪ್ತಿಯಲ್ಲಿ ಅನಧಿಕೃತ ಅಥವಾ ಅಕ್ರಮ ಕಟ್ಟಡಗಳ ತಪಾಸಣೆ ನಡೆಸಬೇಕು. ಒಂದು ವೇಳೆ ಅಂತಹ ಕಟ್ಟಡಗಳು ಕಂಡುಬಂದರೆ ತಡಮಾಡದೆ ಕಾನೂನು ಪ್ರಕಾರ ಕ್ರಮ ಜರುಗಿಸಬೇಕು ಎಂದು ನ್ಯಾಯಪೀಠ ಸೂಚಿಸಿದೆ.
ಶಿವಮೊಗ್ಗದ ಕೆ.ಎಸ್. ಈಶ್ವರಪ್ಪ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಪ್ರಕಟಿಸಿದ್ದು, ಅರ್ಜಿದಾರರಿಗೆ 50 ಸಾವಿರ ರೂಪಾಯಿ ದಂಡ ವಿಧಿಸಿದೆ.
ಕ್ರಮ ಕೈಗೊಳ್ಳುವಲ್ಲಿ ವಿಫಲವಾದರೆ ಹಾಗೂ ತಮ್ಮ ಕರ್ತವ್ಯದಲ್ಲಿ ಲೋಪ ಎಸಗಿದರೆ ಅಂತಹ ಅಧಿಕಾರಿಗಳ ವಿರುದ್ಧ ಪಾಲಿಕೆಗಳ ಆಯುಕ್ತರು ಇಲಾಖಾ ವಿಚಾರಣೆ ನಡೆಸಬೇಕು. ತಪ್ಪೆಸಗಿರುವುದು ಕಂಡುಬಂದರೆ ಅವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದು ತಿಳಿಸಿದೆ.
ಸಾಮಾನ್ಯ ಜನರು ಅಕ್ರಮ ಅಥವಾ ಅನಧಿಕೃತ ಕಟ್ಟಡಗಳನ್ನು ನಿರ್ಮಿಸುವ ಸಂದರ್ಭದಲ್ಲಿ ಅಧಿಕಾರಿಗಳು ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಲಾಭ ಪಡೆಯುತ್ತಾರೆ. ಇದರಿಂದ ಜನರೂ ವಂಚನೆಗೆ ಒಳಗಾಗುತ್ತಾರೆ ಎಂದು ನ್ಯಾಯಮೂರ್ತಿಗಳಾದ ಎಂ. ನಾಗಪ್ರಸನ್ನ ಅವರು ತಿಳಿಸಿದ್ದಾರೆ.
ಅಕ್ರಮ ಅಥವಾ ಅನಧಿಕೃತ ಕಟ್ಟಡಗಳ ವಿರುದ್ಧ ಕಾನೂನು ಕ್ರಮ ಜರುಗಿಸದೇ ನಿರ್ಲಕ್ಷ ತೋರುವ ಅಧಿಕಾರಿಗಳ ವಿರುದ್ಧ ಇಲಾಖಾ ವಿಚಾರಣೆ ನಡೆಸಿ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟ್, ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರಿಗೆ ಕಟ್ಟುನಿಟ್ಟಿನ ಆದೇಶ ಮಾಡಿದೆ.
ಅರ್ಜಿದಾರರು ದಂಡದ ಮೊತ್ತವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಜಮೆ ಮಾಡಬೇಕು. ಅರ್ಜಿದಾರರ ವಿರುದ್ಧ ಕೈಗೊಂಡಿರುವ ಕ್ರಮವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಬೇಕು ಎಂದು ನ್ಯಾಯಪೀಠ ಮಹಾನಗರ ಪಾಲಿಕೆಗೆ ಆದೇಶಿಸಿದೆ.

ಅಕ್ರಮ ಕಟ್ಟಡ ತೆರವಿಗೆ ಶಿವಮೊಗ್ಗ ಮಹಾನಗರ ಪಾಲಿಕೆ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಈಶ್ವರಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.


Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Dasara ಶಿವಮೊಗ್ಗ ಚಲನಚಿತ್ರ ದಸರಾ ಚಾಲನೆಗೆ ಹಿರಿಯ ನಟಿ ಉಮಾಶ್ರೀ ಆಗಮನ

Shivamogga Dasara ಶಿವಮೊಗ್ಗ ಮಹಾ ನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿರುವ...

Navaratri Festival ಬಂಗಾರಮಕ್ಕಿಯಲ್ಲಿ ಶರನ್ನವರಾತ್ರಿ ಉತ್ಸವ

Navaratri Festival ಬಂಗಾರಮಕ್ಕಿಯ ಹೇಮಪುರ ಮಹಾಪೀಠದ ಶ್ರೀ ವಿಶ್ವ ವೀರಾಂಜನೇಯ...

Klive Special Article ನವರಾತ್ರಿಯ ಮೊದಲ ದಿನ. ಶೈಲಪುತ್ರಿ ದೇವಿರೂಪ ಆರಾಧನೆ

ಲೇ; ಎನ್.ಜಯಭೀಮ ಜೊಯಿಸ್. ಶಿವಮೊಗ್ಗ Navaratri Festival ವಂದೇ ವಾಂಛಿತ ಲಾಭಾಯಚಂದ್ರಾರ್ಧಕೃತಶೇಖರಂ/ವೃಷಾರೂಢಂ...

Gandhi Jayanthi ನಗರದ ರೋವರ್ಸ್ ಕ್ಲಬ್ ನಲ್ಲಿ ಗಾಂಧಿ ಜಯಂತಿ ಆಚರಣೆ

Gandhi Jayanthi ನಗರದ ರೋವರ್ಸ್ ಕ್ಲಬ್ ಆವರಣದಲ್ಲಿ ಮಹಾತ್ಮ ಗಾಂಧೀಜಿಯವರ...