Monday, February 3, 2025
Monday, February 3, 2025

International Democracy Day ಡಾ.ಅಂಬೇಡ್ಕರ್ ದೊಡ್ಡ ತತ್ವಜ್ಞಾನಿ.ಅವರಿಲ್ಲದಿದ್ದರೆ ಈ ದೇಶ ಉಳಿಯುತ್ತಿರಲಿಲ್ಲ- ಪ್ರೊ.ಶರತ್ ಅನಂತಮೂರ್ತಿ

Date:

International Democracy Day ಪ್ರಜಾಪ್ರಭುತ್ವ’ ಆದರ್ಶವಾದ ಸಾರ್ವತ್ರಿಕ ಮೌಲ್ಯ – ಪ್ರೊ. ಶರತ್ ಅನಂತಮೂರ್ತಿ
ಮಾನವೀಯ ಮೌಲ್ಯಗಳ ನಿಧಿಯಾದ ಪ್ರಜಾಪ್ರಭುತ್ವ ವ್ಯವಸ್ಥೆ ಮಾನವರೆಲ್ಲರೂ ಒಂದೇ ಎಂಬುದನ್ನು ಸಾರುತ್ತದೆ. ಸರ್ವರೂ ಸಮಾನರು ಎಂಬ ಅರಿವೇ ಪ್ರಜಾಪ್ರಭುತ್ವದ ತಳಹದಿ. ಪ್ರಜಾಪ್ರಭುತ್ವವನ್ನು ವಿಶ್ವಸಂಸ್ಥೆ ಅತ್ಯಂತ ಶ್ರೇಷ್ಠ ಮೌಲ್ಯವೆಂದು ಪರಿಗಣಿಸಿದೆ. ಪ್ರಜಾಪ್ರಭುತ್ವ ಆದರ್ಶವಾದ ಸಾರ್ವತ್ರಿಕ ಮೌಲ್ಯವೆಂದು ಕುಲಪತಿಗಳಾದ ಪ್ರೊ. ಶರತ್ ಅನಂತಮೂರ್ತಿ ಅವರು ಅಭಿಪ್ರಾಯಪಟ್ಟರು. ಅವರು ಕುವೆಂಪು ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರದಲ್ಲಿ ಏರ್ಪಡಿಸಿದ್ದ ‘ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಂಬೇಡ್ಕರ್ ಬಹುದೊಡ್ಡ ತತ್ವಜ್ಞಾನಿ. ಅವರು ಇಲ್ಲದಿದ್ದರೆ ಈ ದೇಶ ಉಳಿಯುತ್ತಿರಲಿಲ್ಲ. ಅವರಿಂದ ರಚನೆಯಾದ ಸಂವಿಧಾನವೇ ಒಂದು ಕ್ರಾಂತಿಕಾರಕ ದಾಖಲೆ. ಆಧುನಿಕತೆಯನ್ನು ತಂದುಕೊಟ್ಟ ಮಹಾವ್ಯಕ್ತಿ. ಅಂಬೇಡ್ಕರ್ ಅವರ ‘ಜಾತಿವಿನಾಶ’ ಕೃತಿಯನ್ನು ಎಲ್ಲರೂ ಕಡ್ಡಾಯವಾಗಿ ಓದಬೇಕೆಂದು ತಿಳಿಸಿದರು. ತದನಂತರ ಭಾರತ ಸಂವಿಧಾನ ಪ್ರಸ್ತಾವನೆಯನ್ನು ಬೋಧಿಸಿದರು. ಕಾರ್ಯಕ್ರಮಕ್ಕೆ ಆಗಮಿಸಿದವರಿಗೆಲ್ಲ ನೆನಪಿನ ಕಾಣಿಕೆಯಾಗಿ ‘ಪೆನ್ನು’ಗಳನ್ನು ವಿತರಿಸಿದರು.
International Democracy Day ಶಿಕ್ಷಣ ನಿಕಾಯದ ಡೀನರು, ಶಿಕ್ಷಣ ವಿಭಾಗದ ಮುಖ್ಯಸ್ಥರು ಅದ ಪ್ರೊ. ಜಗನ್ನಾಥ್ ಕೆ. ಡಾಂಗೆ, ಅವರು ಉಪಸ್ಥಿತರಿದ್ದರು. ಡಾ. ಬಿ.ಅರ್. ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕರಾದ ಡಾ. ನೆಲ್ಲಿಕಟ್ಟೆ ಎಸ್. ಸಿದ್ದೇಶ್ ‘ಪ್ರಜಾಪ್ರಭುತ್ವ’ ವ್ಯವಸ್ಥೆ ಬೆಳೆದು ಬಂದ ಬಗೆಯನ್ನು ಪರಿಚಯಿಸಿ, ವಂದಿಸಿದರು. ಪಾಂಡುರವರು ಪ್ರಾರ್ಥಿಸಿದರು. ಸಂದೀಪ್ ಸ್ವಾಗತಿಸಿದರು. ಸಂಪತ್‌ಕುಮಾರ್ ಎಂ. ನಿರೂಪಿಸಿದರು. ಡಾ. ಗೋವಿಂದರಾಜ್, ಡಾ. ಎಂ. ರವಿಕುಮಾರ್, ಡಾ. ಎನ್.ಬಿ. ತಿಪ್ಪೇಸ್ವಾಮಿ, ಡಾ. ಅಶೋಕ್ ಲಮಾಣಿ, ಮೊದಲಾದ ಅಧ್ಯಾಪಕರು, ಅಧ್ಯಾಪಕೇತರ ನೌಕರರು, ಸಂಶೋಧಕರು, ವಿದ್ಯಾರ್ಥಿಗಳು ಭಾಗವಹಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y.Vijayendra ನಾನೇ ಮತ್ತೆ ರಾಜ್ಯ ಬಿಜೆಪಿ ಅಧ್ಯಕ್ಷ – ವಿಜಯೇಂದ್ರ ವಿಶ್ವಾಸ

B.Y.Vijayendra ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಒಂದು...

Rotary Club Shivamogga ರೋಟರಿ ಸಂಸ್ಥೆ ನಿರಂತರ ಸಮಾಜ ಮುಖಿಯಾಗಿದೆ- ಜಿ.ಕಿರಣ್ ಕುಮಾರ್

Rotary Club Shivamogga ರೋಟರಿ ಸಂಸ್ಥೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಹೆಚ್ಚಿನ ಸೇವಾ ಕಾರ್ಯಗಳನ್ನು...

Karnataka Media Academy ಡಿಸಿಎಂ.ಡಿ.ಕೆ. ಶಿವಕುಮಾರ್ ಅವರಿಂದ ಮಾಧ್ಯಮ ಅಕಾಡೆಮಿ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟನೆ

 Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಇಂದು‌ ಮಲ್ಲೇಶ್ವರಂ...

Malpe Beach ಅನಾಥ ಶವಗಳ ಸಂಸ್ಕಾರ ಮಾಡುವ‌ ಅಪ್ಪ ಮಗಳಿಗೆ ಸನ್ಮಾನ

Malpe Beach ಶಿವಮೊಗ್ಗ ನಗರದ ಡೆಡ್ ಬಾಡಿ ರವಿ ಹಾಗೂ ಮಕ್ಕಳಾದ...