Sunday, August 2, 2026
Sunday, August 2, 2026

Department of Youth Empowerment and Sports ಸೆ.23 ರಿಂದ 24 ವರೆಗೆ 2024-25 ನೇ ಸಾಲಿನ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ

Date:

Department of Youth Empowerment and Sports ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ 2024-25 ನೇ ಸಾಲಿನ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಸೆ.23 ಮತ್ತು 24 ರಂದು ಬೆಳಗ್ಗೆ 9:30ಕ್ಕೆ ನಗರದ ನೆಹರೂ ಕ್ರೀಡಾಂಗಣದಲ್ಲಿ ಏರ್ಪಡಿಸಿದೆ.
ಈ ಕ್ರೀಡಾಕೂಟದಲ್ಲಿ ಅಥ್ಲೇಟಿಕ್ಸ್, ವಾಲಿಬಾಲ್, ಫುಟ್‌ಬಾಲ್, ಖೋಖೋ, ಕಬಡ್ಡಿ, ಬ್ಯಾಸ್ಕೆಟ್‌ಬಾಲ್, ಕುಸ್ತಿ, ಬ್ಯಾಡ್ಮಿಂಟನ್, ಹಾಕಿ, ಹ್ಯಾಂಡ್‌ಬಾಲ್, ಟೇಬಲ್ ಟೆನ್ನಿಸ್, ಥ್ರೋಬಲ್, ಬಾಲ್ ಬ್ಯಾಡ್ಮಿಂಟನ್, ಯೋಗ ಮತ್ತು ಆಯ್ಕೆಯ ಕ್ರೀಡೆಗಳು ಟೆನ್ನಿಸ್, ನೆಟ್‌ಬಾಲ್, ಈಜು ಕ್ರೀಡೆಗಳನ್ನು ಆಯೋಜಿಸಿದ್ದು, ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿ ವೈಯುಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವೀತಿಯ ಹಾಗೂ ಗುಂಪು ಸ್ಪರ್ಧೆಗಳಲ್ಲಿ ಪ್ರಥಮಸ್ಥಾನ ಪಡೆದವರು ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆದಿರುತ್ತಾರೆ.
Department of Youth Empowerment and Sports ಅರ್ಹತೆ ಪಡೆದ ಕ್ರೀಡಾಪಟುಗಳು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಸೆ.೨೩ ರಂದು ಬೆಳಗ್ಗೆ 9:30 ರೊಳಗಾಗಿ ನೆಹರೂ ಕ್ರೀಡಾಂಗಣದಲ್ಲಿ ವರದಿ ಮಾಡಿಕೊಂಡು ಹೆಸರನ್ನು ನೋಂದಾಯಿಸಿಕೊಳ್ಳುವುದು. ತಾಲೂಕುಗಳಿಂದ ಭಾಗವಹಿಸುವ ತಾಲೂಕು ವಿಜೇತ ಕ್ರೀಡಾಪಟುಗಳಿಗೆ ಶಿವಮೊಗ್ಗಕ್ಕೆ ಬಂದುಹೋಗುವ ಸಾಮಾನ್ಯ ಪ್ರಯಾಣಭತ್ಯೆ ನೀಡಲಿದ್ದು ಮಧ್ಯಾಹ್ನದ ಉಪಹಾರದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಮಾಹಿತಿಗಾಗಿ ಇಲಾಖೆಯ ದೂ.ಸಂ.: 08182-223328ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...