Wednesday, October 2, 2024
Wednesday, October 2, 2024

Eid Milad festival ಸೆ.22 ರಂದು ಈದ್ ಮಿಲಾದ್ ಮೆರವಣಿಗೆ ಪ್ರಯುಕ್ತ ಸಾರ್ವಜನಿಕ ವಾಹನ ಸಂಚಾರಕ್ಕೆ ತಾತ್ಕಾಲಿಕ ಬದಲಿ ಮಾರ್ಗ ಸೂಚನೆ

Date:

Eid Milad festival ದಿನಾಂಕ:22.9.2024ರಂದು ಶಿವಮೊಗ್ಗ ನಗರದಲ್ಲಿ ಮುಸ್ಲಿಂ ಬಾಂಧವರು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮೆರವಣಿಗೆಯು ಶಿವಮೊಗ್ಗ ನಗರದ ಗಾಂಧಿಬಜಾರ್ ಜಾಮೀಯ ಮಸೀದಿಯಿಂದ ಪ್ರಾರಂಭಗೊಂಡು ಗಾಂಧಿ ಬಜಾರ್ 2ನೇ ಕ್ರಾಸ್.ನಾಗಪ್ಪನ ಕೇರಿ,ಲಷ್ಕರ್ ಮೊಹಲ್ಲಾ ಮುಖ್ಯ ರಸ್ತೆಯ -ಓಲ್ಡ್ ಬಾರ್ ಲೈನ್ ರಸ್ತೆ – ಪೆನ್ದನ್ ಮೊಹಲ್ಲಾ-ಬಾಲ್ ರಾಜ್ ಅರಸ್ ರಸ್ತೆ-ಮಹಾವೀರ ಸರ್ಕಲ್-ಗೋಪಿ ಸರ್ಕಲ್- ನೆಹರು ರಸ್ತೆ- ಅಮೀರ್ ಅಹ್ಮದ್ ಸರ್ಕಲ್ ಮಾರ್ಗವಾಗಿ ಬಿಹೆಚ್ ರಸ್ತೆ -ಅಶೋಕ ಸರ್ಕಲ್-ಎನ್ ಟಿ ರಸ್ತೆ ಗುರುದೇವ ರಸ್ತೆ -ರ್ಕ್ಲಾಕ್ ಪೇಟೆ. ನೂರಾನಿ ಮಸೀದಿ ಕೆಆರ್ ಪುರಂ ರಸ್ತೆ ಮಾರ್ಗವಾಗಿ ಅಮೀರ್ ಅಹಮ್ಮದ್ ಸರ್ಕಲ್ ತಲುಪುತ್ತದೆ.

ಸದರಿ ಮೆರವಣಿಗೆ ಸಂದರ್ಭದಲ್ಲಿ ಸಂಚಾರ ಸುಗಮಗೊಳಿಸುವ ಸಲುವಾಗಿ ಈ ಕೆಳಕಂಡ ಸ್ಥಳಗಳಲ್ಲಿ ವಾಹನ ಸಂಚಾರ ನಿಷೇಧ.ನಿಲುಗಡೆ ಹಾಗೂ ವಾಹನಗಳ ಮಾರ್ಗ ಬದಲಾವಣೆ ಮಾಡಲು ತಾತ್ಕಾಲಿಕವಾಗಿ ಅಧಿಸೂಚನೆ ಹೊರಡಿಸಲಾಗಿದೆ.

Eid Milad festival ಭದ್ರಾವತಿ ಬೆಂಗಳೂರು,ಎನ್ ಆರ್ ಪುರ ಕಡೆಯಿಂದ ಬರುವ ಎಲ್ಲಾ ಭಾರಿ ವಾಹನ ಮತ್ತು ಎಲ್ಲಾ ಬಸ್ ಗಳು ಎಂ.ಆರ್ .ಎಸ್ ಸರ್ಕಲ್ ನಿಂದ ಬೈಪಾಸ್ ರಸ್ತೆ ಮುಖಾಂತರ ಹೋಗುವುದು.

  1. ಚಿತ್ರದುರ್ಗ ಹೊಳೆಹೊನ್ನೂರಿನಿಂದ ಬರುವ ಮತ್ತು ಹೋಗುವ ಎಲ್ಲಾ ಭಾರಿ ವಾಹನ ಮತ್ತು ಬಸ್ ಗಳು ಹೊಳೆಹೊನ್ನೂರು ಸರ್ಕಲ್.ಎಂ.ಆರ್.ಎಸ್ .ಸರ್ಕಲ್ ಮಾರ್ಗವಾಗಿ ಬೈಪಾಸ್ ರಸ್ತೆ ಮುಖಾಂತರ ಹೋಗುವುದು.
  2. ಹೊನ್ನಾಳಿ,ದಾವಣಗೆರೆಯಿಂದ ಬರುವ ಎಲ್ಲಾ ಭಾರಿ ವಾಹನ ಮತ್ತು ಬಸ್ ಗಳು ಸಂಗೊಳ್ಳಿ ರಾಯಣ್ಣ ಸರ್ಕಲ್ ಶಂಕರ ಮಠ ಸರ್ಕಲ್, ಹೊಳೆಹೊನ್ನೂರು ಸರ್ಕಲ್, ವಿದ್ಯಾನಗರ, ಎಂ. ಆರ್ ಎಸ್ ಸರ್ಕಲ್ ಮಾರ್ಗವಾಗಿ ಬೈಪಾಸ್ ರಸ್ತೆ ಮುಖಾಂತರ ಹೋಗುವುದು
  3. ಕೆ.ಎನ್.ಆರ್.ಟಿ.ಸಿ. ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಹೊನ್ನಾಳಿ, ಹರಿಹರ,ದಾವಣಗೆರೆಗೆ ಹೋಗುವ ಎಲ್ಲಾ ಬಸ್ ಗಳು ಮತ್ತು ಭಾರಿ ಸರಕು ವಾಹನಗಳು ಬೈಪಾಸ್ ಮುಖಾಂತರವಾಗಿ ಎಂಆರ್ ಎಸ್ ಸರ್ಕಲ್.
  4. ವಿದ್ಯಾನಗರ ಶಂಕರಮಠ ಸರ್ಕಲ್, ಸಂಗೊಳ್ಳಿರಾಯಣ್ಣ ಸರ್ಕಲ್ ಮುಖಾಂತರ ಹೋಗುವುದು.
  5. ಕೆ.ಎಸ್.ಆರ್.ಟಿ.ಸಿ. ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಬೆಂಗಳೂರು, ಭದ್ರಾವತಿ ಕಡೆಗೆ ಹೋಗುವ ಎ ವಾಹನಗಳು ಬೈಪಾಸ್ ರಸ್ತೆ ಎಂ.ಆರ್ .ಎಸ್ ಸರ್ಕಲ್ ಮುಖಾಂತರ ಹೋಗುವುದು.
  6. ಶಿಕಾರಿಪುರ ಸೊರಬ ಅನವಟ್ಟಿ, ಕಡೆಯಿಂದ ಶಿವಮೊಗ್ಗಕೆ ಬರುವ ಮತ್ತು ಹೊರ ಹೋಗುವ ಎಲ್ಲಾ ಬಸ್ ಗ ಮತ್ತು ಭಾರಿ ವಾಹನಗಳು ಉಷಾ ನರ್ಸಿಂಗ್ ಹೋಂ ಸರ್ಕಲ್.ಲಕ್ಷ್ಮೀ ಟಾಕೀಸ್ ಸರ್ಕಲ್ ಪೊಲೀಸ್ ಚೌಕಿ ಅಲ್ಕೋಳ ಸರ್ಕಲ್ ಮಾರ್ಗವಾಗಿ ಸಾಗರ ರಸ್ತೆಯಲ್ಲಿ ಸಂಚರಿಸುವುದು.

-:ವಾಹನಗಳ ಸಂಚಾರ ಮತ್ತು ನಿಲುಗಡೆ ನಿಷೇಧ :-

  1. ಲಷ್ಕರ್ ಮೊಹಲ್ಲಾ ರಸ್ತೆಯಲ್ಲಿ ಎಲ್ಲಾ ವಾಹನಗಳ ಸಂಚಾರ ನಿಷೇಧ ಮಾಡುವುದು.
  2. ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮೆರವಣಿಗೆ ಮಾರ್ಗವಾದ ಗಾಂಧಿಬಜಾರ್ ಜಾಮೀಯ ಮಸೀದಿಯಿ- ಗಾಂಧಿಬಜಾರ್ 2ನೇ ಕ್ರಾಸ್ ನಾಗಪ್ಪ ಕೇರಿ -ಲಷ್ಕರ್ ಮೊಹಲ್ಲಾ ಮುಖ್ಯ ರಸ್ತೆ- ಓಲ್ಡ್ ಬಾರ್ ಲೈನ್ ರಸ್ತೆ– ಮೊಹಲ್ಲಾ -ಬಾಲ್ ರಾಜ್ ಅರಸ್ ರಸ್ತೆ- ಮಹಾವೀರ್ ನರ್ಕಲ್ – ಗೋಪಿ ಸರ್ಕಲ್ -ನೆಹರು ರಸ್ತೆ ಅವ ಅಹ್ಮದ್ ಸರ್ಕಲ್- ಬಿ.ಹೆಚ್ ರಸ್ತೆ-ಅಶೋಕ ಸರ್ಕಲ್-ಎನ್ ಟಿ ರಸ್ತೆ-ಗುರುದೇವ ರಸ್ತೆ-ಕ್ಲಾರ್ಕಪೇಟೆ-ನರಾನಿ ಮಸೀದಿ -ಕೆ ಆರ್.ಪುರಂ. ರಸ್ತೆ ಮಾರ್ಗವಾಗಿ ಅಮೀರ್ ಅಹ್ಮದ್ ಸರ್ಕಲ್ ವರೆಗಿನ ಮೆರವಣಿಗೆ ಮಾರ್ಗದಲ್ಲಿ ಮತ್ತುಮಾರ್ಗದ ಸುತ್ತ ಮುತ್ತ 100 ಮೀಟರ್ ಅಂತರದಲ್ಲಿ ಎಲ್ಲಾ ವಾಹನಗಳ ಸಂಚಾರ ಮತ್ತು ವಾಹನ ನಿಷೇಧಿಸಲಾಗಿದೆ.
  3. ಈ ಎಲ್ಲಾ ಮಾರ್ಗ ಬದಲಾವಣೆಗಳು ಪೊಲೀಸ್ ವಾಹನಗಳು, ಅತಿಗಣ್ಯ ವ್ಯಕ್ತಿಗಳ ವಾಹನಗಳು ಅಂಬುಲೆನ್ಸ್ ಹಾಗೂ ಮೂಲಭೂತ ಸೌಕರ್ಯ ಒದಗಿಸುವ ವಾಹನಗಳನ್ನು ಅನುಕೂಲಕ್ಕೆ ತಕ್ಕಂತೆ ಹೊರತುಪಡಿಸಿರುತ್ತದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chamber Of Commerce ಗಾಂಧೀಜಿ & ಶಾಸ್ತ್ರೀಜಿ ಯುವಜನರಿಗೆ ಆದರ್ಶ- ಚಂದ್ರಶೇಖರಯ್ಯ

Chamber Of Commerce ಗಾಂಧೀಜಿ ಅವರ ತತ್ವ ಆದರ್ಶಗಳು ಎಲ್ಲರಿಗೂ ಮಾರ್ಗದರ್ಶನ...

Gangotri College ವಿದ್ಯಾರ್ಥಿಗಳು ಶಿಕ್ಷಣದ ಸಂಗಡ ಮಾನವೀಯ ಮೌಲ್ಯ ಬೆಳೆಸಿಕೊಳ್ಳಬೇಕು- ಶ್ರೀ ಚನ್ನಬಸವಶ್ರೀ

Gangotri College ಗ್ರಾಮೀಣ ಪ್ರದೇಶದ ಜನರ ಜೀವನ ಕ್ರಮ ಅರಿಯುವ ಜೊತೆಗೆ...

CM Siddharamaih ಸಿದ್ಧರಾಮಯ್ಯ ರಾಜಿನಾಮೆ ಬೇಡ.ಬೆಂಬಲಿಸಿ ಜನಜಾಥಾ-‘ಅಹಿಂದ’ ಮಹೇಶ್

CM Siddharamaih ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡುವುದು ಬೇಡ....