Wednesday, October 2, 2024
Wednesday, October 2, 2024

Department of Youth Empowerment and Sports ಕ್ರೀಡೆಯಿಂದ ಉತ್ತಮ ವ್ಯಕ್ತಿತ್ವ ನಿರ್ಮಾಣ ಸಾಧ್ಯ- ಶಾಸಕ ಚನ್ನಬಸಪ್ಪ

Date:

Department of Youth Empowerment and Sports ಕ್ರೀಡೆಯಿಂದ ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಸಾಧ್ಯಬಎಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ತಿಳಿಸಿದರು.
ನೆಹರು ಕ್ರೀಡಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕಣರ ಮತ್ತು ಕ್ರೀಡಾ ಇಲಾಖೆ , ಸಾರ್ವಜನಿಕ ಶಿಕ್ಷಣ ಇಲಾಖೆ, ವಿವಿಧ ಕ್ರೀಡಾ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಶಿವಮೊಗ್ಗ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ 2024-25ನೇ ಸಾಲಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದಸರಾ ಕ್ರೀಡಾಕೂಟವನ್ನು ಯುವ ಸಬಲೀಕಣರ ಮತ್ತು ಕ್ರೀಡಾ ಇಲಾಖೆಯಿಂದ ಪ್ರತಿ ತಾಲೂಕು ಕೇಂದ್ರಗಳಲ್ಲಿ ನಡೆಸಲಾಗುತ್ತದೆ. ಗ್ರಾಮೀಣ ಪ್ರತಿಭೆಗಳನ್ನು ಗುರುತಿಸುವ ಪ್ರಯತ್ನ ಈ ಕ್ರೀಡಾಕೂಟದಲ್ಲಿ ನಡೆಯುತ್ತದೆ. ಪ್ರತಿಯೊಬ್ಬ ಕ್ರೀಡಾಪಟು ಕೂಡ ಉತ್ತಮವಾದ ಸಾಮರ್ಥ್ಯವನ್ನು ಹೊಂದಿದ್ದು ತಮ್ಮ ಪ್ರತಿಭೆಯನ್ನು ಅನಾವರಣ ಮಾಡಲು ಇದು ಒಂದು ಉತ್ತಮ ಅವಕಾಶವಾಗಿದೆ.
ಕ್ರೀಡೆಯು ಮನುಷ್ಯನ ವ್ಯಕ್ತಿತ್ವವನ್ನು ಬದಲಾವಣೆ ಮಾಡಲು ಸಹಕಾರಿಯಾಗಿದ್ದು ತಾಲೂಕು, ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸುವ ಮೂಲಕ ಮುಂದೆ ನಿಮ್ಮ ಸಾಧನೆ ಒಲಿಂಪಿಕ್ ಕ್ರೀಡೆಗಳಲ್ಲಿ ಸ್ಪರ್ಧಿಸಿ ದೇಶಕ್ಕೆ ಕೀರ್ತಿಯನ್ನು ತಂದುಕೊಡುವಂತೆ ಆಗಲಿ, ಅದಕ್ಕಾಗಿ ನಿಮ್ಮ ಪ್ರಯತ್ನ ನಿರಂತರವಾಗಿ ಇರಲಿ ಎಂದು ಹಾರೈಸಿದರು.
ವಿಧಾನಪರಿಷತ್ ಸದಸ್ಯರಾದ ಡಾ.ಧನಂಜಯ ಸರ್ಜಿ ಮಾತನಾಡಿ, ಪ್ರತಿಯೊಬ್ಬರ ಜೀವನದಲ್ಲಿ ಆತ್ಮವಿಶ್ವಾಸ ಅತ್ಯಂತ ಮುಖ್ಯವಾಗಿದೆ. ಅದು ಕ್ರೀಡೆಯಿಂದ ಸುಲಭವಾಗಿ ದೊರೆಯುತ್ತದೆ. ಕ್ರೀಡಾಪಟುಗಳು ಕ್ರೀಡೆಯಲ್ಲಿ ಎದುರಿಸುವ ಸವಾಲುಗಳನ್ನು ತಮ್ಮ ಜೀವನಲ್ಲಿ ಕೂಡ ಎಂತಹ ಕಷ್ಟಗಳು ಬಂದರೂ ಎದುರಿಸುವ ಸಾಮರ್ಥ್ಯವನ್ನು ಮೈಗೂಡಿಸಿಕೊಂಡಿರುತ್ತಾರೆ. ಕ್ರೀಡಾಪಟುಗಳು ಉತ್ತಮವಾಗಿ ಪ್ರದರ್ಶನ ನೀಡಬೇಕು. ಇಲ್ಲಿ ಸೋಲು ಗೆಲವು ಮುಖ್ಯವಲ್ಲ. ಎರಡನ್ನೂ ಸಮಾನವಾಗಿ ಸ್ವೀಕರಿಸಿ, ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳಬೇಕು ಎಂದರು.
Department of Youth Empowerment and Sports ವಿಧಾನಪರಿಷತ್ ಸದಸ್ಯರಾದ ಡಿ.ಎಸ್ ಅರುಣ್ ಅವರು ಮಾತನಾಡಿ, ವಿವಿಧ ತಾಲೂಕು ಕೇಂದ್ರಗಳಲ್ಲಿ 14 ಕ್ರೀಡೆಗಳಲ್ಲಿ ಜಯಗಳಿಸಿ ಇಂದು ನಡೆಯುತ್ತಿರುವ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಗಮಿಸಿದ ಎಲ್ಲಾ ಕ್ರೀಡಾಪಟುಗಳು ಉತ್ತಮವಾದ ಪ್ರದರ್ಶನವನ್ನು ನೀಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಮುಂದಿನ ದಿನಗಳಲ್ಲಿ ರಾಷ್ಟ್ರವನ್ನು ಪ್ರತಿನಿಧಿಸುವಂತೆ ನಿಮ್ಮ ಶ್ರಮ ಇರಲಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರೇಖ್ಯಾನಾಯ್ಕ್, ವಿವಿಧ ಕ್ರೀಡಾ ಸಂಘ ಸಂಸ್ಥೆಗಳು, ಪದಾಧಿಕಾರಿಗಳು, ಕ್ರೀಡಾಪಟುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...