Friday, February 6, 2026
Friday, February 6, 2026

ದಾವಣಗೆರೆಯಲ್ಲಿ ಕಾಲೇಜಿಗೆ ನುಗ್ಗಿದ “ಭುಸ್ ನಾಗಪ್ಪ”

Date:

ನಾಗರಹಾವೊಂದು ಕಾಲೇಜಿನ ಅಡುಗೆ ಮನೆಯಲ್ಲಿನ ಪಾತ್ರೆಯಲ್ಲಿ ಅವಿತು ಕೂತಿದ್ದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆ ಹೊರವಲಯದ ಬಾಡಾ ಕ್ರಾಸ್ ಬಳಿಯ ಜೈನ್ ಕಾಲೇಜಿನಲ್ಲಿ ಹಾವು ಕಂಡುಬಂದಿದೆ.

ನಾಗರಹಾವನ್ನು ಕಂಡ ವಿದ್ಯಾರ್ಥಿಗಳು ಆತಂಕದಿಂದ ಹೊರಗೆ ಓಡಿ ಬಂದಿದ್ದರು. ಪಾತ್ರೆಯಲ್ಲಿ ಕೂತಿದ್ದ ಹಾವನ್ನು ನೋಡಿದ ಅಡುಗೆ ಸಿಬ್ಬಂದಿಯೂ ಕೂಡ ಕೆಲಕಾಲ ಭಯಭೀತರಾಗಿದ್ದರು.

ಬಳಿಕ ಕಾಲೇಜಿನ ಸಿಬ್ಬಂದಿ ಸ್ನೇಕ್ ಬಸವರಾಜ್ ಅವರಿಗೆ ಕರೆ ಮಾಡಿ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಸ್ನೇಕ್ ಬಸವರಾಜ್ ಹಾವನ್ನು ಸೆರೆಹಿಡಿದು ರಕ್ಷಿಸಿದ್ದಾರೆ. ನಾಲ್ಕು ಅಡಿ ಉದ್ದದ ನಾಗರಹಾವು ಇದಾಗಿದೆ. ಹಾವನ್ನು ಬಸವರಾಜ್ ರಕ್ಷಣೆ ಮಾಡಿದ ಬಳಿಕ ಕಾಲೇಜಿನ ಸಿಬ್ಬಂದಿ, ವಿದ್ಯಾರ್ಥಿಗಳು ನಿಟ್ಟುಸಿರು ಬಿಟ್ಟರು.

ದಾವಣಗೆರೆ ನಗರದ ಆರ್ಟಿಓ ಕಚೇರಿ ಬಳಿಯ ಮಲ್ಲೇಶಪ್ಪ ಎಂಬವರ ಮನೆಯಲ್ಲಿ ಕೂಡ ನಾಗರಹಾವು ಬೀಡುಬಿಟ್ಟಿತ್ತು. ಇಟ್ಟಿಗೆಗಳಲ್ಲಿ ಅವಿತುಕೊಂಡಿದ್ದ ನಾಗಪ್ಪನನ್ನು ಸ್ನೇಕ್ ಬಸವರಾಜ್ ಅವರೇ ರಕ್ಷಣೆ ಮಾಡಿದ್ದಾರೆ. ಒಂದೇ ದಿನ ಎರಡು ಹಾವುಗಳನ್ನು ರಕ್ಷಣೆ ಮಾಡುವಲ್ಲಿ ಬಸವರಾಜ್ ಯಶಸ್ವಿಯಾಗಿದ್ದಾರೆ.

ಹಾವುಗಳನ್ನು ಆನಗೋಡು ಕಾಡಿಗೆ ಬಿಡುವುದಾಗಿ ಬಸವರಾಜ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...