Wednesday, December 17, 2025
Wednesday, December 17, 2025

State Unorganized Workers Social Security Board ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯ ಆನ್‌ಲೈನ್ ಅರ್ಜಿ ಆಹ್ವಾನ

Date:

State Unorganized Workers Social Security Board ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ನೊಂದಾಯಿಸಿಕೊಳ್ಳಲು 20 ವರ್ಗಗಳ ಕಾರ್ಮಿಕರಿಗೆ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.
ಹಮಾಲರು, ಮನೆಗೆಲಸದವರು, ಚಿಂದಿ ಆಯುವವರು, ಟೈಲರ್‌ಗಳು, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು, ಭಟ್ಟಿಕಾರ್ಮಿಕರು, ಗಿಗ್ ಕಾರ್ಮಿಕರು, ಸಿನಿ ಕಾರ್ಮಿಕರು, ನೇಕಾರರು, ಬೀದಿ ಬದಿ ವ್ಯಾಪಾರಿಗಳು, ಹೋಟೆಲ್ ಕಾರ್ಮಿಕರು, ಫೋಟೋಗ್ರಾಫರ್‌ಗಳು, ಸ್ವತಂತ್ರ ಲೇಖನ ಬರಹಗಾರರು, ಕಲ್ಯಾಣ ಮಂಟಪ/ಸಭಾ ಭವನ/ಟೆಂಟ್/ಪೆಂಡಾಲ್ ಕೆಲಸ ನಿರ್ವಹಿಸುವ State Unorganized Workers Social Security Board ಎಲ್ಲಾ ಕಾರ್ಮಿಕರು, ಬೀಡಿ ಕಾರ್ಮಿಕರು ಮತ್ತು ಅಸಂಘಟಿತ ವಿಕಲಚೇತನ ಕಾರ್ಮಿಕರು, ಅಲೆಮಾರಿ ಪಂಗಡದ ಅಸಂಘಟಿತ ಕಾರ್ಮಿಕರು https://labour.ambedkarsahayahasta.in/api/Account/Login ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳುವ ಮೂಲಕ ಯೋಜನೆಯ ಪ್ರಯೋಜನ ಪಡೆದುಕೊಳ್ಳುವಂತೆ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಯೋಜನೆಯ ಸೌಲಭ್ಯ ಪಡೆಯಲು ಕರ್ನಾಟಕ ರಾಜ್ಯದ ನಿವಾಸಿಯಾಗಿದ್ದು, 18 ರಿಂದ 60 ವಯೋಮಾನದವರಾಗಿರಬೇಕು. ಆದಾಯ ತೆರಿಗೆ ಪಾವತಿದಾರರು ಹಾಗೂ ಇಎಸ್‌ಐ/ಪಿಎಫ್ ಸೌಲಭ್ಯ ಹೊಂದಿರಬಾರದು.
State Unorganized Workers Social Security Board ಅಪಘಾತದಿಂದ ಮರಣ ಹೊಂದಿದ್ದಲ್ಲಿ ರೂ. 1.00 ಲಕ್ಷ, ಅಪಘಾತದಲ್ಲಿ ಸಂಪೂರ್ಣ/ಶಾಶ್ವತ/ಬಾಗಶಃ ದುರ್ಬಲತೆ ಹೊಂದಿದ್ದಲ್ಲಿ ರೂ. 1.00 ಲಕ್ಷಗಳವರೆಗೆ , ಆಸ್ಪತ್ರೆ ವೆಚ್ಚ ಮರುಪಾವತಿ ಐವತ್ತು ಸಾವಿರ ರೂ.ಗಳವರೆಗೆ ಹಾಗೂ ಸಹಜ ಮರಣ ಮತ್ತು ಅಂತ್ಯಕ್ರಿಯೆ ವೆಚ್ಚಕ್ಕೆ ಹತ್ತು ಸಾವಿರ ರೂ.ಗಳ ಸೌಲಭ್ಯವನ್ನು ಈ ಯೋಜನೆಯಲ್ಲಿ ಪಡೆಯಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...