Wednesday, February 4, 2026
Wednesday, February 4, 2026

Mallikarjun Kharge ಪ್ರಚಾರ ಸಭೆಯಲ್ಲಿ ಖರ್ಗೆ ಕೊಂಚ ಅಸ್ವಸ್ಥ ನಂತರ ಚೇತರಿಕೆ

Date:

Mallikarjun Kharge ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡುವಾಗ ಅಸ್ವಸ್ಥರಾದ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಚೇತರಿಕೆ ಬಳಿಕ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. “ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ತೆಗೆದು ಹಾಕುವವರೆಗೂ ನಾನು ಸಾಯುವುದಿಲ್ಲ” ಎಂದು ಹೇಳಿದ್ದಾರೆ.
ವಿಧಾನಸಭಾ ಚುನಾವಣೆಯ ಮೂರನೇ ಮತ್ತು ಅಂತಿಮ ಹಂತದ ಪ್ರಚಾರದ ಕೊನೆಯ ದಿನದಂದು ಬೃಹತ್ ಸಭೆಯನ್ನು ಉದ್ದೇಶಿಸಿ ಮಾತನಾಡುವಾಗ ಖರ್ಗೆ ಅವರಿಗೆ ತಲೆ ಸುತ್ತುವ ಅನುಭವವಾಯಿತು. ಕೂಡಲೇ ಎಚ್ಚೆತ್ತುಕೊಂಡ ಅವರ ಭದ್ರತಾ ಸಿಬ್ಬಂದಿ ಮತ್ತು ಪಕ್ಷದ ಮುಖಂಡರು, ಖರ್ಗೆ ಅವರ ನೆರವಿಗೆ ಧಾವಿಸಿ ಅವರನ್ನು ಕುರ್ಚಿಗೆ ಕರೆದೊಯ್ದರು.
Mallikarjun Kharge ಕೆಲವು ನಿಮಿಷಗಳ ನಂತರ, ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, “ಕಾಶ್ಮೀರದ ರಾಜ್ಯ ಸ್ಥಾನಮಾನ ಮರುಸ್ಥಾಪಿಸಲು ನಾವು ಹೋರಾಡುತ್ತೇವೆ. ನನಗೆ 83 ವರ್ಷ, ನಾನು ಇಷ್ಟು ಬೇಗ ಸಾಯುವುದಿಲ್ಲ. ಪ್ರಧಾನಿ ನರೇಂದ್ರ ಮೋದಿಯನ್ನು ಅಧಿಕಾರದಿಂದ ತೆಗೆದುಹಾಕುವವರೆಗೂ ನಾನು ಜೀವಂತವಾಗಿರುತ್ತೇನೆ” ಎಂದರು.
ಮೂಲಗಳ ಪ್ರಕಾರ ಅವರಿಗೆ ರಕ್ತದೊತ್ತಡ ಕಡಿಮೆಯಾಗಿದೆ. ಅವರು ಹೆಚ್ಚು ಉತ್ತಮವಾಗಿದ್ದರೂ, ವೈದ್ಯರು ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...