Monday, September 30, 2024
Monday, September 30, 2024

Sahyadri Arts College ಭಾಷೆಗೆ ನಮ್ಮೆಲ್ಲರನ್ನೂ ಪೊರೆಯುವ ಶಕ್ತಿ ಇದೆ – ಸತೀಶ ಜವರೇಗೌಡ

Date:

Sahyadri Arts College ಕನ್ನಡ ಭಾಷೆಗೆ ಮನಸ್ಸುಗಳನ್ನು ಬೆಸೆಯುವ ಶಕ್ತಿಯಿದೆ ಎಂದು ಸಾಹಿತಿ ಹಾಗೂ ಸಂಸ್ಕೃತಿ ಚಿಂತಕ ಟಿ.ಸತೀಶ್ ಜವರೇಗೌಡ ಹೇಳಿದರು.
ಅವರು ಹಾಸನದ ಮಾಣಿಕ್ಯ ಪ್ರಕಾಶನದ ವತಿಯಿಂದ ಸಹ್ಯಾದ್ರಿ ಕಲಾ ಕಾಲೇಜಿನ ಜಯಚಾಮರಾಜೇಂದ್ರ ಒಡೆಯರ್ ಸಭಾಂಗಣದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ 8ನೇ ಕವಿಕಾವ್ಯ ಸಂಭ್ರಮ ಹಾಗೂ ಜನ್ನಕಾವ್ಯ ಪರೀಕ್ಷೆ ಮತ್ತು ದತ್ತಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
Sahyadri Arts College ಭಾಷೆಗೆ ನಮ್ಮೆಲ್ಲರನ್ನು ಪೊರೆಯುವ ಶಕ್ತಿಯಿದೆ, ಅದೊಂದು ಜೀವತಂತು. ವರ್ತಮಾನದ ತಲ್ಲಣದ ಈ ಸಂದರ್ಭದಲ್ಲಿ ವಿಕೃತಗಳೇ ವಿಜೃಂಭಿಸಿರುವಾಗ ಸಾಹಿತ್ಯದ ಮೂಲಕ ಸಾಮರಸ್ಯವನ್ನು ಬೆಸೆಯಬೇಕಾಗಿದೆ. ಸಾಹಿತ್ಯಕ್ಕೆ ತನ್ನದೇ ಆದ ಶಕ್ತಿಯಿದೆ. ಹಲವು ಕ್ರಾಂತಿಗಳ ಹಿಂದೆ ಸಾಹಿತ್ಯದ ಪ್ರೇರಕ ಶಕ್ತಿ ಇರುತ್ತದೆ. ಭಾಷೆ ಭಾವೈಕ್ಯತೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ ಎಂದರು.
ಸಾಹಿತ್ಯದ ವಿಕೇಂದ್ರಿಕರಣದ ಬದಲು ಜಾತಿಯತೆ, ಧರ್ಮಾಂಧತೆ ವಿಕೇಂದ್ರಿಕರಣವಾಗುತ್ತಿದೆ. ಇದನ್ನೆಲ್ಲ ದಮನ ಮಾಡಲು ಸಾಹಿತ್ಯವೇ ಮದ್ದಾಗುತ್ತದೆ ಕೂಡ, ಸಾಹಿತ್ಯದ ಜವಬ್ದಾರಿ ಕೂಡ ಹೆಚ್ಚಿದೆ. ಒಗ್ಗಟ್ಟನ್ನು ಬೆಸೆಯುವ ಸಾಮಾಜದ ಸಾಮರಸ್ಯವನ್ನು ಹೆಚ್ಚಿಸುವಂತೆ ಸಾಹಿತ್ಯವಿರಬೇಕು ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Yaduveer Wadiyar ಶಿವಮೊಗ್ಗ ಹಬ್ಬ ಯಶಸ್ವಿಗೊಳಿಸಿ- ಸಂಸದ ಯದುವೀರ್

Yaduveer Wadiyar ಪ್ರವಾಸೋದ್ಯಮ ಹಾಗೂ ಜಿಲ್ಲೆಯ ಉದ್ಯಮಿಗಳ ಪ್ರೋತ್ಸಾಹಿಸುವ ದೃಷ್ಟಿಯಿಂದ...

Shivamogga Cycle Club ಸೈಕಲ್ ಅಭ್ಯಾಸವು ಜನಸಾಮಾನ್ಯರ ವ್ಯಾಯಾಮಶಾಲೆ- ಎನ್.ಗೋಪಿನಾಥ್

Shivamogga Cycle Club ಸೈಕಲ್ ಅಭ್ಯಾಸ ಮಾಡುವುದರಿಂದ ಹೃದಯ ಸಂಬಂಧಿ...

Mysore Dasara ಹಿರಿಯ ಸಾಹಿತಿ ಹಂಪನಾ ಅವರಿಂದ ದಸರಾ ಉದ್ಘಾಟನೆ- ಸಿದ್ಧರಾಮಯ್ಯ

Mysore Dasara ಸಾಹಿತಿ ಹಂ.ಪ. ನಾಗರಾಜಯ್ಯ ಅವರಿಂದ ಈ ಬಾರಿಯ ದಸರಾ...

Shivamogga Railway ರೈಲ್ವೆ ನಿಲ್ದಾಣದಲ್ಲಿ ಹೆಲ್ಪ್ ಡೆಸ್ಕ್ ಇತ್ಯಾದಿ ಸೇವೆ ಆರಂಭಿಸಲು ನಾಗರೀಕ ಸಂಘದ ಮನವಿ

Shivamogga Railway ರೈಲ್ವೆ ನಿಲ್ದಾಣದಲ್ಲಿ ಶಿವಮೊಗ್ಗ ಜಿಲ್ಲಾ ಪ್ರವಾಸಿ ತಾಣ,...