Tuesday, October 1, 2024
Tuesday, October 1, 2024

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

Date:

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ ಅವರು ತಮ್ಮ ಪತ್ನಿ ಹೆಸರಿನಲ್ಲಿ ಪಡೆದಿದ್ದ 14 ಸೈಟುಗಳನ್ನ ಹಿಂತಿರುಗಿಸುವ ನಿರ್ಧಾರ ಮಾಡಿದ್ದು, ನಾನು ತಪ್ಪೇ ಮಾಡಿಲ್ಲ ಎನ್ನುತ್ತಿದ್ದವರು ಈಗ ತಮ್ಮ ತಪ್ಪನ್ನ ಒಪ್ಪಿಕೊಂಡು ಸತ್ಯಕ್ಕೆ ಶರಣಾಗಿರುವುದು ನಮ್ಮ ಹೋರಾಟದ ಹಾದಿಯಲ್ಲಿ ಸಿಕ್ಕಿರುವ ಮತ್ತೊಂದು ಜಯ.

ಆದರೆ ಕದ್ದ ಮಾಲನ್ನು ಹಿಂತಿರುಗಿಸಿದ ಕೂಡಲೇ ಕಳ್ಳ ನಿರಪರಾಧಿ ಆಗಿಬಿಡುತ್ತಾನೆಯೇ? ಕದ್ದ ಮಾಲನ್ನು ವಾಪಸ್ಸು ಕೊಟ್ಟ ತಕ್ಷಣ ಕಳ್ಳತನ ಮಾಫಿ ಆಗಿಬಿಡುತ್ತದೆಯೇ?

‘ಕೆಟ್ಟ ಮೇಲೆ ಬುದ್ಧಿ ಬಂತು’ ಎಂಬಂತೆ ಈಗಲಾದರೂ ಸಿದ್ದರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ ಎನ್ನುವುದು ಸಮಾಧಾನಕರ ವಿಷಯ.

R. Ashok ಆದರೆ ‘ಅಡಿಕೆಗೆ ಹೋದ ಮಾನ, ಆನೆ ಕೊಟ್ಟರೂ ಬರುವುದಿಲ್ಲ’ ಸಿಎಂ ಸಿದ್ದರಾಮಯ್ಯನವರೇ. ತಾವು ತನಿಖೆ ಎದುರಿಸಲೇ ಬೇಕು. ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆಗಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಲೇ ಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ನಿರಂತರವಾಗಿ ಮುಂದುವರೆಯುತ್ತದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಸಿದ್ಧರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...

Gandhi Jayanti ಸಾಗರ ತಾಲ್ಲೂಕಿನಲ್ಲಿ ಯಶಸ್ವಿಯಾಗಿ ನಡೆದ ಸ್ವಚ್ಛತಾ ಹಿ ಸೇವಾ ಚಟುವಟಿಕೆ

Gandhi Jayanti ಭಾರತ ಸರ್ಕಾರದ, ಯುವ ವ್ಯವಹಾರ ಮತ್ತು ಕ್ರೀಡಾ...