Thursday, August 6, 2026
Thursday, August 6, 2026

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

Date:

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ ಅವರು ತಮ್ಮ ಪತ್ನಿ ಹೆಸರಿನಲ್ಲಿ ಪಡೆದಿದ್ದ 14 ಸೈಟುಗಳನ್ನ ಹಿಂತಿರುಗಿಸುವ ನಿರ್ಧಾರ ಮಾಡಿದ್ದು, ನಾನು ತಪ್ಪೇ ಮಾಡಿಲ್ಲ ಎನ್ನುತ್ತಿದ್ದವರು ಈಗ ತಮ್ಮ ತಪ್ಪನ್ನ ಒಪ್ಪಿಕೊಂಡು ಸತ್ಯಕ್ಕೆ ಶರಣಾಗಿರುವುದು ನಮ್ಮ ಹೋರಾಟದ ಹಾದಿಯಲ್ಲಿ ಸಿಕ್ಕಿರುವ ಮತ್ತೊಂದು ಜಯ.

ಆದರೆ ಕದ್ದ ಮಾಲನ್ನು ಹಿಂತಿರುಗಿಸಿದ ಕೂಡಲೇ ಕಳ್ಳ ನಿರಪರಾಧಿ ಆಗಿಬಿಡುತ್ತಾನೆಯೇ? ಕದ್ದ ಮಾಲನ್ನು ವಾಪಸ್ಸು ಕೊಟ್ಟ ತಕ್ಷಣ ಕಳ್ಳತನ ಮಾಫಿ ಆಗಿಬಿಡುತ್ತದೆಯೇ?

‘ಕೆಟ್ಟ ಮೇಲೆ ಬುದ್ಧಿ ಬಂತು’ ಎಂಬಂತೆ ಈಗಲಾದರೂ ಸಿದ್ದರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ ಎನ್ನುವುದು ಸಮಾಧಾನಕರ ವಿಷಯ.

R. Ashok ಆದರೆ ‘ಅಡಿಕೆಗೆ ಹೋದ ಮಾನ, ಆನೆ ಕೊಟ್ಟರೂ ಬರುವುದಿಲ್ಲ’ ಸಿಎಂ ಸಿದ್ದರಾಮಯ್ಯನವರೇ. ತಾವು ತನಿಖೆ ಎದುರಿಸಲೇ ಬೇಕು. ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆಗಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಲೇ ಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ನಿರಂತರವಾಗಿ ಮುಂದುವರೆಯುತ್ತದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಸಿದ್ಧರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga News ಥಣ್ಣಗಾಗುತ್ತಿರುವ ಸಚಿವಾಕಾಂಕ್ಷಿತನ..…ಶಿವಕೌಶಲ

Shivamogga News ರಾಜಕೀಯದಲ್ಲಿ ಸ್ಥಿರತೆ ಯಾವತ್ತಿಗೂ ನಿರೀಕ್ಷಿಸಲಾಗದು ಎಂಬ ಮುತ್ಸದ್ದಿಗಳ ಮಾತಿದೆ....

DC Shivamogga ಮುಂದಿನ 61 ವಾರಗಳಿಗೆ ಜಾನುವಾರುಗಳ ಅಗತ್ಯ ಮೇವಿಗೆ ಕೊರತೆಯಿಲ್ಲ : ಪ್ರಭುಲಿಂಗ ಕವಳಿಕಟ್ಟಿ

DC Shivamogga ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಗಸ್ಟ್...