Wednesday, December 17, 2025
Wednesday, December 17, 2025

High Court of Karnataka ಹರ್ಷ ಕೊಲೆ ಪ್ರಕರಣ. ಆರೋಪಿ ಸಲ್ಲಿಸಿದ್ದ ಅರ್ಜಿಗೊಳಿಸಿದ ಹೈಕೋರ್ಟ್ ವಿಭಾಗೀಯ ಪೀಠ

Date:

High Court of Karnataka ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ತನಿಖೆಯನ್ನು, ರಾಷ್ಟ್ರೀಯ ತನಿಖಾ ದಳಕ್ಕೆ ಒಪ್ಪಿಸಿದ್ದ ಕೇಂದ್ರ ಸರ್ಕಾರದ ಕ್ರಮ ಪ್ರಶ್ನಿಸಿ ಪ್ರಕರಣದ ಆರೋಪಿಯೋರ್ವ ಸಲ್ಲಿಸಿದ್ದ ಅರ್ಜಿಯನ್ನು, ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿ ತೀರ್ಪು ನೀಡಿದೆ.

ಪ್ರಕರಣದ ಆರೋಪಿಯಾದ ಎ.ರೋಷನ್ (27) ಎಂಬುವರು ಈ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಮತ್ತು ಜೆ.ಎಂ.ಖಾಜಿ ಅವರಿದ್ದ ವಿಭಾಗೀಯ ಪೀಠ ಕಾಯ್ದಿರಿಸಿದ್ದ ತೀರ್ಪನ್ನು, ಇದೇ 20 ರಂದು ಪ್ರಕಟಿಸಿತ್ತು.

ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸಿದ್ದ ಕೇಂದ್ರ ಸರ್ಕಾರದ ಕ್ರಮವನ್ನು ಎತ್ತಿ ಹಿಡಿದಿದೆ.
‘ಪ್ರಕರಣವನ್ನು ಎನ್ಐಎಗೆ ತನಿಖೆ ಒಪ್ಪಿಸಲು ಅನುಮತಿ ಪಡೆದಿಲ್ಲ. ಪ್ರಕರಣದಲ್ಲಿ ಯುಎಪಿಎ ಅಂತಹ ಗಂಭೀರ ಪ್ರಕರಣ ದಾಖಲಿಸಲು ಯಾವುದೇ ಆಧಾರವಿಲ್ಲ’ ಎಂದು ಆರೋಪಿ ಪರ ವಕೀಲರು ವಾದ ಮಂಡಿಸಿದ್ದರು.

High Court of Karnataka ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ್ದ ಅಡಿಷನಲ್ ಸಾಲಿಸಿಟರ್ ಜನರಲ್ ಅವರು, ‘ಸಮಾಜದಲ್ಲಿ ಭಯದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ ಕೊಲೆ ಮಾಡಲಾಗಿದೆ. ಸಾಕಷ್ಟು ಅಂಶಗಳನ್ನು ಪರಿಗಣಿಸಿ ಕೇಂದ್ರ ಸರ್ಕಾರ ಎನ್ಐಎ ತನಿಖೆಗೊಪ್ಪಿಸಿದೆ’ ಎಂದು ಪ್ರತಿವಾದ ಮಂಡಿಸಿದ್ದರು.

ವಾದ – ಪ್ರತಿವಾದ ಆಲಿಸಿದ ನ್ಯಾಯಪೀಠ, ಆರೋಪಿ ಅರ್ಜಿ ವಜಾಗೊಳಿಸಿ ತೀರ್ಪು ನೀಡಿದೆ.
ಕೊಲೆ ಪ್ರಕರಣ :
2022 ರ ಫೆಬ್ರವರಿ 20 ರಂದು
ಶಿವಮೊಗ್ಗದ ಭಾರತೀ ಕಾಲೋನಿ ಬಳಿ, ಹರ್ಷ (28) ಕೊಲೆ ನಡೆದಿತ್ತು. 2022 ರ ಮಾರ್ಚ್ 21 ರಂದು ಕೇಂದ್ರ ಸರ್ಕಾರವು ಪ್ರಕರಣದ ತನಿಖೆಯನ್ನು ಎನ್ಐಎ ತನಿಖೆಗೊಪ್ಪಿಸಿ ಆದೇಶ ಹೊರಡಿಸಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 18. ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಛೇರಿ,...

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...