Saturday, August 29, 2026
Saturday, August 29, 2026

Chamber Of Commerce ಗಾಂಧೀಜಿ & ಶಾಸ್ತ್ರೀಜಿ ಯುವಜನರಿಗೆ ಆದರ್ಶ- ಚಂದ್ರಶೇಖರಯ್ಯ

Date:

Chamber Of Commerce ಗಾಂಧೀಜಿ ಅವರ ತತ್ವ ಆದರ್ಶಗಳು ಎಲ್ಲರಿಗೂ ಮಾರ್ಗದರ್ಶನ ಎಂದು ಯೋಗ ಗುರು ಚಂದ್ರಶೇಖರಯ್ಯ ಅಭಿಪ್ರಾಯಪಟ್ಟರು.
ಶಿವಗಂಗಾ ಯೋಗ ಕೇಂದ್ರದ ಕೃಷಿನಗರ ಶಾಖೆಯಲ್ಲಿ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನದ ಆಚರಣೆಯಲ್ಲಿ ಮಾತನಾಡಿ, ರಾಷ್ಟ್ರಕ್ಕಾಗಿ ಸರ್ವಸ್ವವನ್ನು ತ್ಯಾಗ ಮಾಡಿ ಅಹಿಂಸಾ ಮಾರ್ಗದಲ್ಲಿ ಸ್ವಾತಂತ್ರ್ಯದ ಹೋರಾಟದಲ್ಲಿ ಭಾಗಿಯಾಗಿದ್ದರು. ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಯುವಜನರು ಅರಿತುಕೊಳ್ಳಬೇಕು ಎಂದು ತಿಳಿಸಿದರು.
ಲಾಲ್ ಬಹದ್ದೂರ್ ಶಾಸ್ತ್ರಿಜಿ ಅವರ ಪ್ರಾಮಾಣಿಕತೆ, ಸರಳ ಜೀವನಶೈಲಿ ಹಾಗೂ ದೂರದೃಷ್ಟಿಯ ಆಲೋಚನೆಗಳು ನಮಗೆಲ್ಲರಿಗೂ ದಾರಿದೀಪ ಎಂದರು.
Chamber Of Commerce ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್ ಮಾತನಾಡಿ, ಗಾಂಧೀಜಿ ಅವರು ಕಂಡ ರಾಮ ರಾಜ್ಯ, ಸ್ವಚ್ಛತೆಯ ಬಗ್ಗೆ ನಾವೆಲ್ಲರೂ ಶ್ರಮಿಸಬೇಕು. ಎಲ್ಲ ದೇಶಗಳಿಗಿಂತ ನಮ್ಮ ದೇಶ ಬಹಳ ವ್ಯವಸ್ಥಿತವಾಗಿ ಭದ್ರತೆ ಹಾಗೂ ಸುರಕ್ಷತೆಯಿಂದ ಕೂಡಿದೆ. ಇಂದು ನಮ್ಮ ಮಕ್ಕಳಿಗೆ ಸಂಸ್ಕಾರದ ಅರಿವು ಮೂಡಿಸಬೇಕಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಯೋಗ ಶಿಕ್ಷಕಿ ನಾಗರತ್ನಮ್ಮ ಚಂದ್ರಶೇಖರ್ ಲಾಲ್ ಬಹದ್ದೂರ್ ಶಾಸ್ತ್ರಿಜಿ ಬಗ್ಗೆ ಸವಿಸ್ತಾರವಾಗಿ ಮಾತನಾಡಿದರು. ಗಾಂಧೀಜಿ ಅವರ ಭಜನೆಗಳನ್ನ ಹಾಡುತ್ತ ಎಲ್ಲರಿಗೂ ಹೇಳಿಕೊಟ್ಟರು. ಇದೇ ಸಂದರ್ಭದಲ್ಲಿ ಯೋಗ ಬಂಧುಗಳಿಂದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಜಿ ಜಯಂತಿ ಕಾರ್ಯಕ್ರಮದಲ್ಲಿ ಯೋಗ ಶಿಬಿರಾರ್ಥಿಗಳಾದ ಜಯಣ್ಣ ಕೃಷ್ಣಮೂರ್ತಿ, ಚಿದಾನಂದ, ಸುಜಾತಾ, ಬಿಂದು ವಿಜಯ ಕುಮಾರ್ ಮತ್ತು ಯೋಗ ಶಿಬಿರಾರ್ಥಿಗಳು ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಜಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಮಾಡಿ ಗೌರವ ಸಲ್ಲಿಸಿದರು. ವಿನೋದಾ, ಶೋಭಾ, ಗಣೇಶ, ಮಂಜುನಾಥ್, ಚಿದಾನಂದ ಮೂರ್ತಿ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಶಿವಮೊಗ್ಗದಿಂದ ಆಂಧ್ರದ ಮಚಿಲಿಪಟ್ಣಂ ಗೆ ವಿಶೇಷ ರೈಲು – ಸಂಸದ ಬಿ.ವೈ‌ರಾಘವೇಂದ್ರ

B.Y. Raghavendra ಶಿವಮೊಗ್ಗ ಜನತೆಗೆ ಮತ್ತೊಂದು ವಿಶೇಷ ಸಿಹಿಸುದ್ದಿ ದೊರೆತಿದ್ದು, ಆಂಧ್ರ...

B.Y. Raghavendra ಕಸ್ತೂರಿ ರಂಗನ್ ವರದಿ ಕರಡು ಜಾರಿ ಬಗ್ಗೆ ಪಕ್ಷದ ಸಭೆಯಲ್ಲಿ ಸುದೀರ್ಘ ಚರ್ಚೆ- ಬಿ.ವೈ.ರಾಘವೇಂದ್ರ

B.Y. Raghavendra ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಶಿವಮೊಗ್ಗದಲ್ಲಿ...

Klive Special Article ಕರೆದರೆ ಬರಬಾರದೆ?ಶ್ರೀರಾಯರ ಆರಾಧನಾ ವಿಶೇಷ ಲೇಖನ.ಕರ್ತೃ: ಎನ್.ಜಯಭೀಮ ಜೊಯ್ಸ್, ಶಿವಮೊಗ್ಗ.

Klive Special Article “ಕರೆದರೆ ಬರಬಾರದೇ ಗುರು ರಾಘವೇಂದ್ರ/ವರ ಮಂತ್ರಾಲಯ ಪುರ...