Wednesday, October 2, 2024
Wednesday, October 2, 2024

Klive Special Article ಕನ್ನಡದ ನೆಲದಲ್ಲಿ ಗಾಂಧೀಜಿಯ ಹೆಜ್ಜೆಗಳು ಲೇ: ರಘು.ಆರ್.

Date:

Klive Special Article ಕರ್ನಾಟಕದಲ್ಲಿ ಮಹಾತ್ಮ ಗಾಂಧಿಜಿ ಅವರ ಅತ್ಯಂತ ಅವಿಸ್ಮರಣಿಯ ಘಟನೆಗಳು ನಡೆದಿದೆ. ರಾಷ್ಟçಪಿತ ಮಹಾತ್ಮ ಗಾಂಧಿಜಿ ಅವರು ತಮ್ಮ ಶಾಂತಿ, ಸತ್ಯ,ಅಹಿಂಸೆಗಳ ಮೂಲಕ ದೇಶದಲ್ಲಿ ಸ್ವಾತಂತ್ರö್ಯ ಚಳುವಳಿಗೆ ಹೊಸ ರೂಪವನ್ನು ನೀಡಿದವರು. ಕರ್ನಾಟಕದಲ್ಲಿ ಅವರ ಬ್ರಿಟೀಷರೇ ಭಾರತ ಬಿಟ್ಟು ತೊಲಗಿ ಎನ್ನುವ ಘೊಷಣೆಯ ಪ್ರಭಾವದಿಂದ ಇಡೀ ದೇಶದಲ್ಲಿ ಮೊದಲು ಸ್ವಾತಂತ್ರö್ಯವನ್ನು ಘೋಷಿಸಿಗೊಂಡ ಗ್ರಾಮ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಈಸೂರು ಗ್ರಾಮ, ಶಿವಪುರ ದ್ವಜ ಸತ್ಯಗ್ರಹ ಅಂಕೋಲ ಉಪ್ಪಿನ ಸತ್ಯಗ್ರಹ, ಅಸಹಕಾರ ಚಳುವಳಿ, ಹೀಗೆ ಗಾಂಧಿಜೀ ಅವರ ಜೀವನ ಆದರ್ಶಗಳು ಕನ್ನಡದ ನೆಲದಲ್ಲಿ ಅಚ್ಚಳಿಯಾಗಿ ಬೆರೂರಿದ್ದು ಕರ್ನಾಟಕಕ್ಕೆ ಅವರು ಅನೇಕ ಬಾರಿ ಬಂದು ಹೋಗಿದ್ದಾರೆ. ಗಾಂಧಿಜೀ ಅವರ ಜಯಂತಿಯ ಪ್ರಯುಕ್ತ ಅವರು ಈ ನೆಲದಲ್ಲಿ ನಡೆದಾಡಿದ ದಿನಗಳನ್ನು ನೆನೆಯೊಣ.
ಕರುನಾಡಿನಲ್ಲಿ ಗಾಂಧಿಯ ಹೆಜ್ಜೆ ಗುರುತು:
Klive Special Article 1915ರಲ್ಲಿ ಗಾಂಧೀಜಿ ಆಫ್ರೀಕಾದಿಂದ ಭಾರತಕ್ಕೆ ಮರಳಿದ ಮೇಲೆ ತನ್ನ ಗುರುಗಳಾದ ಗೋಪಾಲಕೃಷ್ಣ ಗೋಖಲೆಯವರ ಸೂಚನೆ ಮೇರೆಗೆ ದೇಶ ಪರ್ಯಟನೆ ಹೊರಟರು. 1915ರ ಮೇ 8ರಂದು ಬೆಂಗಳೂರಿಗೆ ಪತ್ನಿ ಜೊತೆ ಬಂದ ಗಾಂಧೀಜಿ ಗೋಖಲೆ ಸಾರ್ವಜನಿಕ ವಿಚಾರ ಸಂಸ್ಥೆಯಲ್ಲಿ ಗೋಪಾಕೃಷ್ಣ ಗೋಖಲೆಯವರ ಭಾವಚಿತ್ರ ಅನಾವರಣ ಮಾಡಿದರು. ಗಾಂಧೀಜಿ ಅವರು ಕರುನಾಡಿಗೆ ಮೊದಲು ಭೇಟಿ ನೀಡಲು ಹಿರಿಯ ಸಾಹಿತಿ ಡಿ.ವಿ.ಗುಂಡಪ್ಪ ಅವರ ಪ್ರಯತ್ನವಿದೆ ಎಂದು ಉಲ್ಲೇಖವಿದೆ. 1915 ಮಾತ್ರವಲ್ಲ 1920, 1927, 1934, 1936ರಲ್ಲಿ ಕೂಡ ಹಲವು ಬಾರಿ ಗಾಂಧೀಜಿ ಬೆಂಗಳೂರಿಗೆ ಬಂದಿದ್ದಾರೆ.
ಗಾAಧಿಜಿ ಅಧ್ಯಕ್ಷತೆಯಲ್ಲಿ ನಡೆದ ಏಕೈಕ ಅಧಿವೇಶನ:
ಗಾಂಧೀ ಅಧ್ಯಕ್ಷತೆಯಲ್ಲಿ ಏಕೈಕ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನ ಬೆಳಗಾವಿಯಲ್ಲಿ 1924, ಡಿಸೆಂಬರ್ 20 ರಂದು ನಡೆಯಿತು. ಇದು 39ನೇ ಕಾಂಗ್ರೇಸ್ ಅಧಿವೇಶನವಾಗಿದ್ದು 26 ಮತ್ತು 27ರಂದು ನಡೆಯಲಿದ್ದ ಅಧಿವೇಶನಕ್ಕೆ ಆರು ದಿನ ಮೊದಲೇ ಆಗಮಿಸಿದ್ದರು. ಸಭೆಗಳಲ್ಲಿ ಮಹಾರಾಷ್ಟ್ರ, ಮೈಸೂರು ಪ್ರಾಂತ್ಯಗಳಿAದ ಬಂದ ಜನರನ್ನು ಉದ್ದೇಶಿಸಿ ಮಾತನಾಡಿದರು. ಅಧಿವೇಶನದಲ್ಲಿ 10 ನಿಮಿಷಗಳ ಅಧ್ಯಕ್ಷೀಯ ಭಾಷಣದಲ್ಲಿ ದೇಶ ಬಾಂಧವರಲ್ಲಿ ಒಗ್ಗಟ್ಟು, ಸ್ಥಳೀಯ ಭಾಷೆಯ ಮಹತ್ವ, ಅಸ್ಪೃಶ್ಯತೆ, ಸ್ವರಾಜ್ಯ ಕುರಿತು ಮಾತನಾಡಿದರು. ಯಾರದೇ ಮನೆಯಲ್ಲಿ ವಾಸ್ತವ್ಯ ಹೂಡದೆ ವ್ಯಾಕ್ಸಿನ್ ಡಿಪೋ ಮೈದಾನದಲ್ಲಿ ಗಾಂಧಿ ಟೆಂಟ್ ಹಾಕಿಕೊಂಡಿದ್ದರು.
ಅನಾರೋಗ್ಯದ ನಿಮಿತ್ತ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿರುವ ನಂದಿ ಬೆಟ್ಟಕ್ಕೆ ಎರಡು ಬಾರಿ ಭೇಟಿ ನೀಡಿರುವ ಬಗ್ಗೆ ಉಲ್ಲೇಖವಿದೆ. ಮೊದಲ ಬಾರಿ 1927ರಲ್ಲಿ 45 ದಿನಗಳ ಕಾಲ ಮತ್ತು 1936 ರಲ್ಲಿ 20ಗಳ ನಂದಿಬೆಟ್ಟದಲ್ಲಿ ತಂಗಿ ಆರೋಗ್ಯ ವೃದ್ಧಿಸಿಕೊಂಡಿದ್ದರು.
1934ರಲ್ಲಿ ದೊಡ್ಡ ಬಳ್ಳಾಪುರಕ್ಕೆ ಬಂದಿದ್ದ ಗಾಂಧೀಜಿ ಅಲ್ಲಿ ನೆರೆದಿದ್ದ 25 ಸಾವಿರದಷ್ಟು ಜನರಿಗೆ ದೇಶಪ್ರೇಮದ ಪಾಠ ಮಾಡಿದ್ದರು.
1921 , ಅಕ್ಟೋಬರ್ 10 ರಂದು ಅಸಹಕಾರ ಚಳುವಳಿಯ ಪ್ರಚಾರಕ್ಕೆಂದು ಗಾಂಧಿ ಬಳ್ಳಾರಿಗೆ ರೈಲಿನಲ್ಲಿ ಬಂದಿದ್ದರು.
ವಿಜಯಪುರ (ಆಗಿನ ಬಿಜಾಪುರ)ಕ್ಕೆ ಕಾಂಗ್ರೆಸ್ ನ 17 ಸಮಾವೇಶಕ್ಕೆಂದು 1918, ಮೇ 5ರಂದು ಬಂದಿದ್ದರು ಅದಾದ ಬಳಿಕ ಎರಡನೇ ಬಾರಿ 1921, ಮೇ 28ರಂದು ಗುಮ್ಮಟ ನಗರಿಗೆ ಬಂದಿದ್ದರು.
ಮೈಸೂರಿಗೆ ಗಾಂಧೀಜಿ ಮೊದಲು ಭೇಟಿಕೊಟ್ಟಿದ್ದು, 1927ರಲ್ಲಿ, ಇದಾದ ಬಳಿಕ 1934ರಲ್ಲಿ ಮತ್ತೊಮ್ಮೆ ಸಾಂಸ್ಕೃತಿಕ ನಗರಿಗೆ ಗಾಂಧೀಜಿ ಭೇಟಿ ಕೊಟ್ಟಿದ್ದರು.
1927ರ ಅಗಸ್ಟ್ ನಲ್ಲಿ ಚಿಕ್ಕಮಗಳೂರಿನಗೆ ಬಂದಿದ್ದ ಗಾಂಧಿ, ಅಲ್ಲಿನ ಜಿಲ್ಲಾಧಿಕಾರಿ ಪ್ರಾಂಗಣದಲ್ಲಿ ಸಭೆ ನಡೆಸಿದ್ದಾರೆ.
ಕೇರಳ ಮಾರ್ಗವಾಗಿ ಬಂದಿದ್ದ ಗಾಂಧಿ ಕೊಡಗಿಗೆ ಭೇಟಿಕೊಟ್ಟಿದ್ದರು. 1934ರ ಫೆಬ್ರವರಿ 22ರಂದು ಪೊನ್ನಂಪೇಟೆಗೆ ಬಂದಿದ್ದ ಅವರು ಅಲ್ಲಿನ ರಾಮಕೃಷ್ಣ ಆಶ್ರಮದಲ್ಲಿ ತಂಗಿದ್ದರು.
1934 ಮಾರ್ಚ್ 1ರಂದು ಚಿತ್ರದುರ್ಗ, ಶಿರಸಿ ಮೂಲಕ ಹಾವೇರಿಗೆ ಬಂದಿದ್ದರು.
1934 ಮಾರ್ಚ್ 2 ರಂದು ದಾವಣಗೆರೆ ಬಂದ ಗಾಂಧಿ , ಅಲ್ಲಿ ಸ್ವಾತಂತ್ರ‍್ಯ ಹೋರಾಟಗಾರರಿಗೆ ಸ್ಫೂರ್ತಿ ತುಂಬಿದರು. ಅಲ್ಲಿಂದ ಬಳ್ಳಾರಿ , ಹುಬ್ಬಳ್ಳಿಗೆ ಭೇಟಿ ನೀಡಿದರು.
1934ರಲ್ಲಿ ಮಹಾತ್ಮ ಗಾಂಧೀಜಿಯವರು ಪುತ್ತೂರಿಗೆ ಆಗಮಿಸಿದ್ದರು. ಅಲ್ಲಿ ಅಶ್ವತ್ಥ ಮರದ ಕೆಳಗೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ನೆನಪಿನಲ್ಲಿ ಕಟ್ಟೆ ಕಟ್ಟಲಾಗಿದೆ. ಮಡಿಕೇರಿಯಿಂದ ಸುಳ್ಯ ರಸ್ತೆಯ ಮೂಲಕ ಪುತ್ತೂರಿಗೆ ಕಾಲ್ನಡಿಗೆಯಲ್ಲಿ ಬಂದು ಬಳಿಕ ಮಂಗಳೂರು ತೆರಳಿದರು ಎಂಬುದು ವಿಶೇಷ.
ಮಹಾತ್ಮಾ ಗಾಂಧೀಜಿ ಅವರು ಉಡುಪಿ ಜಿಲ್ಲೆಗೆ ಬಂದದ್ದು ಕೇವಲ ಒಂದು ಬಾರಿ, ಅದು 1934ರ ಫೆ.25ರಂದು. ಗಾಂಧಿಜಿ ಅವರು 1915 ರಿಂದ 1936 ರವರೆಗೆ ಅನೇಕ ಬಾರಿ ಕರ್ನಾಟಕ್ಕೆ ಭೇಟಿ ನೀಡಿದ್ದಾರೆ. ಅನೇಕ ಸಂಘಟನೆಗಳ ಹೋರಾಟ ಸಭೆ ಸಮಾರಂಭಗಳಲ್ಲಿ ಅವರು ಭಾಗವಹಿಸಿದ್ದಾರೆ.
ಮಹತ್ಮ ಗಾಂಧಿಜೀ ಅವರು ಈ ದೇಶಕಂಡ ಮಹಾನ್ ವ್ಯಕ್ತಿ ಒಂದು ಹಿಡಿ ಉಪ್ಪು, ಅಸಹಕಾರ,ಸತ್ಯ ನಿಷ್ಠೆ, ಸತ್ಯಗ್ರಹದ ಮೂಲಕ ಬ್ರಿಟೀಷರ ವಿರುದ್ದ ಭಾರತಮಾತೆಯ ಮುಕ್ತಿಗಾಗಿ ಶ್ರಮಿಸಿದ ಬರಿಗೈ ಸಂತ, ಅವರ ಹೋರಾಟದ ಹಾದಿ ಜೀವನ ಪದ್ಧತಿ ಇಂದು ಜಗತ್ತು ಗೌರವಿಸುತ್ತಿದೆ.
-ರಘು ಆರ್.ಅಪ್ರೆಂಟಿಸ್
ವಾರ್ತಾ ಇಲಾಖೆ ಶಿವಮೊಗ್ಗ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಹೆಣ್ಣುಮಕ್ಕಳಿಗೆ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರ ದ ಮಹತ್ವ ಯೋಜನೆ- ಭಾರದ್ವಾಜ್

Rotary Shivamogga ದೇಶದ ಏಳಿಗೆಗಾಗಿ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಮಹತ್ವದ ಕಾರ್ಯ...

Gandhi Jayanthi ಗಾಂಧೀಜಿ ಅವರಲ್ಲದೇ ಅನೇಕರ ಹೋರಾಟದ ಫಲ, ಸ್ವಾತಂತ್ರ್ಯ. ಅದನ್ನ ಉಳಿಸಿಕೊಳ್ಳಬೇಕು- ಮಧು ಬಂಗಾರಪ್ಪ

Gandhi Jayanthi ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ...

Shivamogga Dasara ಶಿವಮೊಗ್ಗ ದಸರಾ ಉತ್ಸವಕ್ಕೆ ಕ್ಷಣಗಣನೆ

Shivamogga Dasara ರಾಜ್ಯದ ಎರಡನೇ ಅತಿ ದೊಡ್ಡ ದಸರಾ ಮಹೋತ್ಸವ ‘ಶಿವಮೊಗ್ಗ...

Chaudeshwari Temple ಶಿವಮೊಗ್ಗ ಚಾಲುಕ್ಯನಗರದ ಶ್ರೀಚೌಡೇಶ್ವರಿ ದೇಗುಲದಲ್ಲಿ ನವರಾತ್ರಿ ಉತ್ಸವ

Chaudeshwari Temple ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ನವರಾತ್ರಿಯ...