Tuesday, May 26, 2026
Tuesday, May 26, 2026

Gandhi Jayanthi ಗಾಂಧೀಜಿ & ಶಾಸ್ತ್ರೀಜಿ ನಮ್ಮೆಲ್ಲರ ಹೆಮ್ಮೆ- ಎನ್.ಎನ್.ಕಬ್ಬೂರ

Date:

Gandhi Jayanthi ಶಾಂತಿಯ ಹರಿಕಾರರಾದ ಮಹಾತ್ಮ ಗಾಂಧೀಜಿಯವರು ಇಡೀ ವಿಶ್ವಕ್ಕೆ ಅಹಿಂಸೆಯ ಪಾಠ ಹೇಳಿಕೊಟ್ಟು, ಅದರ ಮೂಲಕವೇ ಜಗತ್ತನ್ನು ಗೆದ್ದರು, ಅದೇ ರೀತಿ ಲಾಲ್ ಬಹದ್ದೂರ ಶಾಸ್ತ್ರಿಯವರು ಭಾರತೀಯ ಜನರಿಗೆ ದೇಶಪ್ರೇಮ ಹಾಗೂ ನೈತಿಕತೆ ಮಾರ್ಗದರ್ಶನ ಮಾಡಿದರು. ಅವರ ಜಯಂತಿಯ ಈ ದಿನದಂದು ಅವರು ಹಾಕಿಕೊಟ್ಟ ದಾರಿಯಲ್ಲಿ ನಾವು ನೀವೆಲ್ಲ ಸಾಗಬೇಕಾಗಿದೆ, ಈ ಇಬ್ಬರು ಮಹಾನ್ ನಾಯಕರು ನಮ್ಮೆಲ್ಲರ ಹೆಮ್ಮೆಯಾಗಿದ್ದಾರೆ” ಎಂದು ಶಿಕ್ಷಕ ಎನ್.ಎನ್.ಕಬ್ಬೂರ ತಮ್ಮ ಅಭಿಪ್ರಾಯ ಹಂಚಿಕೊಂಡರು.

ಪಟ್ಟಣದ ಸ.ಕಿ.ಪ್ರಾ ಕನ್ನಡ ಶಾಲೆ ನಂ-6 ರಲ್ಲಿ ಗಾಂಧಿ ಜಯಂತಿಯ ಅಂಗವಾಗಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಂತರ ಗಾಂಧೀಜಿ ಮತ್ತು ಶಾಸ್ತ್ರಿಜಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.

Gandhi Jayanthi ಮಕ್ಕಳು ಗಾಂಧೀಜಿ ಹಾಗೂ ಶಾಸ್ತ್ರಿಜಿಯವರ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಭಾಷಣಗಳ ಮೂಲಕ ಹಂಚಿಕೊಂಡರು, ಈ ವೇಳೆ ಶಿಕ್ಷಕಿ ಎಮ್.ಆರ್.ಫಂಡಿ ಮಕ್ಕಳಿಗೆ ಬುಕ್ ಹಾಗೂ ಪೆನ್ನುಗಳನ್ನು ಬಹುಮಾನವಾಗಿ ನೀಡಿದರು. ಅಂಗನವಾಡಿ ಕಾರ್ಯಕರ್ತೆಯರು, ಅಡುಗೆ ಸಿಬ್ಬಂದಿಯವರು, ಪಾಲಕ-ಪೋಷಕರು ಮತ್ತು ಮಕ್ಕಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

International Day for Biological Diversity ಪ್ಲಾಸ್ಟಿಕ್ ಹಾವಳಿ: ನಿತ್ಯ ಸಾವಿರಾರು ಜೀವಿಗಳುನಾಶ- ಡಾ.ನಾಗರಾಜ್ ಪರಿಸರ.

International Day for Biological Diversity ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆಯನ್ನು ಶಿವಮೊಗ್ಗದ...

Youth Hostel Association ಹಿಮಾಲಯ ಚಾರಣ: ಶಿವಮೊಗ್ಗದ ವಿಜೇಂದ್ರ ರಾವ್ & ಎಮ್.ಕೆ .ಜ್ಯೋತಿ ಅವರಿಗೆ ತಂಡಗಳ ನಾಯಕತ್ವ.

Youth Hostel Association ಶಿವಮೊಗ್ಗ ನಗರದ ಯೂತ್ ಹಾಸ್ಟೆಲ್ಸ್ ಅಸೋಸಿಯೇಷನ್ ಆಫ್ ಇಂಡಿಯಾ...

Diploma Admission ಸಹಕಾರ ಡಿಪ್ಲೊಮಾ ಕೋರ್ಸ್ ತರಬೇತಿಗೆ ಅರ್ಜಿ ಆಹ್ವಾನ.

Diploma Admission ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್‌ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಶಿವಮೊಗ್ಗ ಇವರ ವತಿಯಿಂದ...

High Court ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ. ಮೆಡಿಕಲ್ ಐಕಾನ್ಸ್ ಸೇವಾತಂಡದ ಆಗ್ರಹ.

High Court ಶಿವಮೊಗ್ಗದಲ್ಲಿಯೇ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ಮಾಡ ಬೇಕು ಎಂದು...