Thursday, March 26, 2026
Thursday, March 26, 2026

Gandhi Jayanthi ಗಾಂಧೀಜಿ & ಶಾಸ್ತ್ರೀಜಿ ನಮ್ಮೆಲ್ಲರ ಹೆಮ್ಮೆ- ಎನ್.ಎನ್.ಕಬ್ಬೂರ

Date:

Gandhi Jayanthi ಶಾಂತಿಯ ಹರಿಕಾರರಾದ ಮಹಾತ್ಮ ಗಾಂಧೀಜಿಯವರು ಇಡೀ ವಿಶ್ವಕ್ಕೆ ಅಹಿಂಸೆಯ ಪಾಠ ಹೇಳಿಕೊಟ್ಟು, ಅದರ ಮೂಲಕವೇ ಜಗತ್ತನ್ನು ಗೆದ್ದರು, ಅದೇ ರೀತಿ ಲಾಲ್ ಬಹದ್ದೂರ ಶಾಸ್ತ್ರಿಯವರು ಭಾರತೀಯ ಜನರಿಗೆ ದೇಶಪ್ರೇಮ ಹಾಗೂ ನೈತಿಕತೆ ಮಾರ್ಗದರ್ಶನ ಮಾಡಿದರು. ಅವರ ಜಯಂತಿಯ ಈ ದಿನದಂದು ಅವರು ಹಾಕಿಕೊಟ್ಟ ದಾರಿಯಲ್ಲಿ ನಾವು ನೀವೆಲ್ಲ ಸಾಗಬೇಕಾಗಿದೆ, ಈ ಇಬ್ಬರು ಮಹಾನ್ ನಾಯಕರು ನಮ್ಮೆಲ್ಲರ ಹೆಮ್ಮೆಯಾಗಿದ್ದಾರೆ” ಎಂದು ಶಿಕ್ಷಕ ಎನ್.ಎನ್.ಕಬ್ಬೂರ ತಮ್ಮ ಅಭಿಪ್ರಾಯ ಹಂಚಿಕೊಂಡರು.

ಪಟ್ಟಣದ ಸ.ಕಿ.ಪ್ರಾ ಕನ್ನಡ ಶಾಲೆ ನಂ-6 ರಲ್ಲಿ ಗಾಂಧಿ ಜಯಂತಿಯ ಅಂಗವಾಗಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಂತರ ಗಾಂಧೀಜಿ ಮತ್ತು ಶಾಸ್ತ್ರಿಜಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.

Gandhi Jayanthi ಮಕ್ಕಳು ಗಾಂಧೀಜಿ ಹಾಗೂ ಶಾಸ್ತ್ರಿಜಿಯವರ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಭಾಷಣಗಳ ಮೂಲಕ ಹಂಚಿಕೊಂಡರು, ಈ ವೇಳೆ ಶಿಕ್ಷಕಿ ಎಮ್.ಆರ್.ಫಂಡಿ ಮಕ್ಕಳಿಗೆ ಬುಕ್ ಹಾಗೂ ಪೆನ್ನುಗಳನ್ನು ಬಹುಮಾನವಾಗಿ ನೀಡಿದರು. ಅಂಗನವಾಡಿ ಕಾರ್ಯಕರ್ತೆಯರು, ಅಡುಗೆ ಸಿಬ್ಬಂದಿಯವರು, ಪಾಲಕ-ಪೋಷಕರು ಮತ್ತು ಮಕ್ಕಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Water Tax ಶಿವಮೊಗ್ಗದ ವಿವಿಧೆಡೆ ನೀರಿನ ಕಂದಾಯ ಪಾವತಿ ಕೌಂಟರ್ ವ್ಯವಸ್ಥೆ.

Water Tax ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ...

Adichunchanagiri Mutt ಏಪ್ರಿಲ್1. ಸರಳ ಸಾಮೂಹಿಕ ವಿವಾಹ & ಹಿರಿಯ ಆದರ್ಶ ದಂಪತಿಗಳಿಗೆ ಸನ್ಮಾನ

Adichunchanagiri Mutt ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಪದ್ಮಭೂಷಣ ಶ್ರೀ...