Monday, September 21, 2026
Monday, September 21, 2026

Chain Snatching ಬಸ್ ಪ್ರಯಾಣದಲ್ಲಿ ಚಿನ್ನಾಭರಣ ಕಳವು ಪ್ರಕರಣ

Date:

Chain Snatching ಬಂಗಾರದ ಕಿವಿರಿಂಗ್ ರಿಪೇರಿ ಮಾಡಿಸಲು ಬಜಾರ್ ಗೆ ಬಂದಿದ್ದ ಮಹಿಳೆ ಬಂಗಾರದ ಅಂಗಡಿ ಬಂದ್ ಮಾಡಿದ ಪರಿಣಾಮ ಬಸ್ ನಿಲ್ಧಾಣಕ್ಕೆ ಹೋಗಿ ಮನೆವಸ್ತುಗಳನ್ನು ಖರೀದಿಸಿ ಬಿಲ್ ನೀಡಲು ಮುಂದಾದಾಗ ಚಿನ್ನಾಭರಣ ಕಳೆದುಕೊಂಡಿರುವ ಘಟನೆ ನಡೆದಿದೆ‌.
ಹೊಸಳ್ಳಿಯ ನಿವಾಸಿಯ ಮಹಿಳೆ ತಮ್ಮ
ದೊಡ್ಡಮ್ಮನ ಮಗಳ ಜೊತೆ ಸೆ.21 ರಂದು ಬಟ್ಟೆ ಖರೀದಿ ಮಾಡಲು ಮತ್ತು ಬಂಗಾರದ ಕಿವಿರಿಂಗ್ ರಿಪೇರಿ ಹಾಗೂ ಮನೆ ಸಾಮಾನುಗಳನ್ನು ಖರೀದಿಸಲು ಊರಿನಿಂದ ಶಿವಮೊಗ್ಗಕ್ಕೆ ಬಂದಿದ್ದರು.
ಗಾಂಧಿಬಜಾರ್ ನಲ್ಲಿ ಬಟ್ಟೆ ಮತ್ತು ಮನೆ ಸಾಮಾನುಗಳನ್ನು ಖರೀದಿಸಿದ ನಂತರ ಕಿವಿರಿಂಗ್ ರಿಪೇರಿ ಮಾಡಿಸಲು ಅಂಗಡಿಗೆ ಹೋಗಿ ನೋಡಿದಾಗ ಅಂಗಡಿ ಬಂದ್ ಆಗಿದ್ದರಿಂದ ವಾಪಾಸ್ ಊರಿಗೆ ಹೋಗಲು ಶಿವಪ್ಪನಾಯಕ ಸರ್ಕಲ್ ನಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ನ್ನು ಹತ್ತಿ ಬಸ್ ಸ್ಟ್ಯಾಂಡ್ ಗೆ ಬಂದಿದ್ದಾರೆ.

Chain Snatching ಬಸ್ ಸ್ಟ್ಯಾಂಡ್ ನಲ್ಲಿ ಮದ್ಯಾಹ್ನ 04-30 ಗಂಟೆಗೆ ಸ್ಮಾರ್ಟ್ ಬಜಾರ್ ನಲ್ಲಿ ಸಾಮಾನುಗಳನ್ನು ಖರೀದಿಸಿದ ನಂತರ ಬಿಲ್ ಕೊಡಲು ಬ್ಯಾಗ್ ನಲ್ಲಿದ್ದ ಪರ್ಸ್ ನ್ನು ತೆಗೆಯಲು ಹೋದಾಗ ಬ್ಯಾಗಿನ ಜಿಪ್ ಅರ್ಧ ತೆರೆದಿದ್ದು, ತಕ್ಷಣ ಮಹಿಳೆಯು ಗಾಭರಿಯಾಗಿ ಬ್ಯಾಗ್ ನ್ನು ಚೆಕ್ ಮಾಡಿದಾಗ ಬ್ಯಾಗ್ ನಲ್ಲಿದ್ದ ಬಂಗಾರದ ಒಡವೆಗಳಿದ್ದ ಪರ್ಸ್ ಇರಲಿಲ್ಲ.
ಪರ್ಸ್ ನಲ್ಲಿ 1) 2010 ನೇ ಸಾಲಿನಲ್ಲಿ ಖರೀದಿಸಿ ಸುಮಾರು 6 ಗ್ರಾಂ 800 ಮೀಲಿ ತೂಕದ ಸುಮಾರು 25,000/-ರೂ ಬೆಲೆಬಾಳುವ ಬಂಗಾರದ ಸ್ನೇಕ್ ಚೈನ್ ಮತ್ತು 2) ಸುಮಾರು 3 ಗ್ರಾಂ 500 ಮೀಲಿ ತೂಕದ 12,000/ -ರೂ ಬೆಲೆಬಾಳುವ ಒಂದು ಜೊತೆ ಬಂಗಾರದ ಕಿವಿರಿಂಗ್ ಇದ್ದುದ್ದ ಪರ್ಸ್ ಕಳುವಾಗಿತ್ತು.
ಶಿವಪ್ಪನಾಯಕ ಸರ್ಕಲ್ ನಿಂದ ಬಸ್ ಸ್ಟ್ಯಾಂಡ್ ಗೆ ಬಸ್ ನಲ್ಲಿ ಬರುವಾಗ ಅವರ ಬ್ಯಾಗ್ ನ ಜಿಪ್ ನ್ನು ತೆಗೆದು ಬಂಗಾರದ ಒಡವೆಗಳಿದ್ದ ಪರ್ಸ್ ನ್ನು ಕಳ್ಳತನ ಮಾಡಿಕೊಂಡು ಹೋಗಿರುವ ಬಗ್ಗೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...