Thursday, April 30, 2026
Thursday, April 30, 2026

Kittur Rani Chennamma ಕಿತ್ತೂರು ಉತ್ಸವ ಯಶಸ್ವಯಾಗಿ ನೆರವೇರಲಿ- ಎಸ್.ಎನ್.ಚನ್ನಬಸಪ್ಪ

Date:

Kittur Rani Chennamma ಈ ದೇಶದ ಸಂರಕ್ಷಣೆಗಾಗಿ ಹೋರಾಡಿದ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಅವರು ಬ್ರಿಟಿಷರ ವಿರುದ್ಧದ ವಿಜಯ ಸಾಧಿಸಿ 200 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಉತ್ಸವದ ಭಾಗವಾಗಿ ಹಮ್ಮಿಕೊಂಡಿರುವ “ಕಿತ್ತೂರು ವಿಜಯೋತ್ಸವ- ವಿಜಯ ಜ್ಯೋತಿ ಯಾತ್ರೆ”ಗೆ ಇಂದು ನಮ್ಮ ನಗರಕ್ಕೆ ಆಗಮಿಸಿದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಗೌರವ ಪೂರ್ವಕವಾಗಿ ಸ್ವಾಗತಿಸಿದರು.

Kittur Rani Chennamma ಕಿತ್ತೂರು ಸಂಸ್ಥಾನವು ಸ್ವಾತಂತ್ರ್ಯ ಹೋರಾಟ ಪ್ರಾರಂಭವಾಗುವ ಮೊದಲೇ ಬ್ರಿಟಿಷರ ವಿರುದ್ಧ ಯುದ್ಧ ಸಾರಿದ ಸಂಸ್ಥಾನ. ಆಂಗ್ಲರಿಗೆ ಕಪ್ಪ ಕೊಡಲು ಒಪ್ಪದೆ ಸ್ವಾಭಿಮಾನಕ್ಕಾಗಿ ಜೀವವನ್ನೇ ಪಣಕ್ಕಿಟ್ಟು ಹೋರಾಡಿದ ರಾಣಿ ಚೆನ್ನಮ್ಮ ಅವರ ಸಮರ್ಪಣೆ ಎಂದಿಗೂ ಮರೆಯಲಾಗದು. ಅವರಿಗೆ ಗೌರವ ಸಮರ್ಪಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಕಿತ್ತೂರು ಉತ್ಸವ ಯಶಸ್ವಿಯಾಗಿ ನೆರವೇರಲಿ ಎಂದು ಶುಭ ಹಾರೈಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Nalanda Chess Academy ನಳಂದಾಚೆಸ್ ಅಕಾಡೆಮಿಯಿಂದ ಚೆಸ್ ಬೇಸಿಕ್ ಸಮ್ಮರ್ ಕ್ಯಾಂಪ್

Nalanda Chess Academy ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯಲ್ಲಿರುವ ನಳಂದಾ ಚೆಸ್...

Government Industrial Training Institute ತೀರ್ಥಹಳ್ಳಿ ಐಟಿಐ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

Government Industrial Training Institute ತೀರ್ಥಹಳ್ಳಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯು...

Madhu Bangarappa ಹುಲಿಕಲ್ ಘಾಟ್ ಕುಸಿತ ಪ್ರಕರಣ: ಸಮಗ್ರ ವಿವರ ಪಡೆದು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ- ಮಧು ಬಂಗಾರಪ್ಪ

Madhu Bangarappa ಮಲೆನಾಡು ಮತ್ತು ಕರಾವಳಿಯನ್ನು ಸಂಪರ್ಕಿಸುವ ಪ್ರಮುಖ ಕೊಂಡಿಯಾಗಿರುವ ಹೊಸನಗರ...

ಏಪ್ರಿಲ್ 30. ಮಾಚೇನಹಳ್ಳಿ ಜಯಂತಿ ಗ್ರಾಮ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ, ಮೆಸ್ಕಾಂ ಪ್ರಕಟಣೆ

ಶಿವಮೊಗ್ಗ ಮಾಚೇನಹಳ್ಳಿ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರ ಮಾರ್ಗಗಳಲ್ಲಿ ರಸ್ತೆ ಅಗಲೀಕರಣ...