Thursday, March 19, 2026
Thursday, March 19, 2026

Youth Empowerment and Sports ಪರಿಶಿಷ್ಟ ಜಾತಿ‌ ಯುವಜನರ ಸ್ವಾವಲಂಬನೆಗೆ ತರಬೇತಿ ಶಿಬಿರ

Date:

Youth Empowerment and Sportsಯುವ ಸಬಲೀಕರಣ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಪರಿಶಿಷ್ಟ ಜಾತಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಯುವಜನರ ಸ್ವಾವಲಂಬನೆಗೆ ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ತರಬೇತಿ ಕಾರ್ಯಕ್ರಮ ಆಯೋಜಿಲಾಗಿದ್ದು, 40 ವರ್ಷದೊಳಗಿನ ಯುವಕ/ಯುವತಿಯರಿಂದ ಅರ್ಜಿ ಅಹ್ವಾನಿಸಿದೆ.
ಎಸ್.ಎಸ್.ಎಲ್.ಸಿ ಪಾಸ್/ಫೇಲ್ ಆದವರು ನವಂಬರ್ 07 ರಿಂದ 26ರ ವರೆಗೆ ನಡೆಯುವ 20 ದಿನಗಳ ಹೊಲಿಗೆ ತರಬೇತಿ ಶಿಬಿರಕ್ಕೆ ಮತ್ತು ದ್ವಿತೀಯ ಪಿ.ಯು.ಸಿ ಪಾಸ್/ಫೇಲ್ ಆದವರು ನವಂಬರ್ 15 ರಿಂದ 26 ರ ವರೆಗೆ ನಡೆಯುವ 12 ದಿನಗಳ ವಿಡಿಯೋಗ್ರಾಫಿ ತರಬೇತಿ ಶಿಬಿರಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಶಿಬಿರದಲ್ಲಿ ಭಾಗವಹಿಸುವ ಯುವಕ ಅಥವಾ ಯುವತಿಯರಿಗೆ ಊಟೋಪಹಾರ, Youth Empowerment and Sports ಪ್ರಮಾಣ ಪತ್ರ ಮತ್ತು ಹೊರ ಜಿಲ್ಲೆಗಳಿಂದ ಭಾಗವಹಿಸುವ ಯುವತಿಯರಿಗೆ ಸಾಮಾನ್ಯ ವಸತಿ ವ್ಯವಸ್ಥೆಯನ್ನು ನೀಡಲಾಗುವುದು.
ಆಸಕ್ತರು ಅರ್ಜಿ ನಮೂನೆಯನ್ನು ನಗರದ ನೆಹರು ಕ್ರೀಡಾಂಗದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ನ. 04 ರೊಳಗಾಗಿ ಸಲ್ಲಿಸುವಂತೆ ಸಹಾಯಕ ನಿರ್ದೇಶಕರು ಪ್ರಕಟಣೆ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...