Thursday, March 19, 2026
Thursday, March 19, 2026

Chamber of Commerce Shivamogga ಸವಾಲುಗಳನ್ನ ಎದುರಿಸಿ ಪತ್ರಿಕೆ ಈಗ ಜನಮಾನಸ ತಲುಪಿದೆ- ಕ್ರಾಂತಿ ದೀಪ ಮಂಜುನಾಥ್

Date:

Chamber of Commerce Shivamogga ಪತ್ರಿಕೋದ್ಯಮದಲ್ಲಿ ಅತ್ಯುನ್ನತ ಶ್ರೇಷ್ಠ ಪ್ರಶಸ್ತಿ ಪುಸ್ಕøತರಾದ ಹಾಗೂ ಮಧ್ಯ ಕರ್ನಾಟಕ ಮಲೆನಾಡು ಭಾಗದಲ್ಲಿ ಪ್ರಥಮ ಬಾರಿಗೆ ನೀಡಿದ ಪ್ರಶಸ್ತಿಗೆ ಭಾಜನರಾಗಿರುವ ಹಾಗೂ ವೃತ್ತಿಯ ಜೊತೆಗೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಕ್ರಾಂತಿದೀಪ ಎನ್.ಮಂಜುನಾಥ್‍ರವರಿಗೆ ನಗರದ ಸ್ನೇಹಮಹಿ ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಹರಿಸಲಾಯಿತು.

ಇದೇ ಸಂದರ್ಭದಲ್ಲಿ ಸ್ನೇಹಮಹಿ ಸಂಘದ ಅಧ್ಯಕ್ಷ ಎಸ್.ಚಿನ್ನಪ್ಪ ಮಾತನಾಡಿ, ನಮ್ಮ ಸoಘದ ವತಿಯಿಂದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಾಧಕರಿಗೆ ಸನ್ಮಾನ ಹಾಗೂ ರಾಜ್ಯ, ರಾಷ್ಟ್ರ ಮಟ್ಟದ ಕ್ರೀಡೆಗಳನ್ನು ಆಯೋಜನೆ ಮಾಡಿ ಹಲವಾರು ಸಮಾಜಮುಖಿ ಕಾರ್ಯಗಳನ್ನು ನಿರಂತರವಾಗಿ ಮಾಡುತ್ತಾ ಬಂದಿದ್ದೇವೆ ಎಂದು ನುಡಿದರು.

Chamber of Commerce Shivamogga ಇದೇ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯ್ ಕುಮಾರ್ ಮಾತನಾಡಿ, ಕ್ರಾಂತಿದೀಪ ಮಂಜಣ್ಣನವರು ಹಲವಾರು ಹೊಸ ಪತ್ರಕರ್ತರಿಗೆ ಅವಕಾಶ ಕಲ್ಪಿಸಿಕೊಟ್ಟು ಅವರ ಬೆಳವಣಿಗೆಗೆ ದಾರಿದೀಪವಾಗಿದ್ದಾರೆ. ಜೊತೆಗೆ ಕ್ರಾಂತಿದೀಪ ಪತ್ರಿಕೆ ಸಾಕಷ್ಟು ಹೋರಾಟಗಳ ಮೂಲಕ ಹಾಗು ಅಚ್ಚು ಮಳೆಯ ಮುದ್ರಣದಲ್ಲಿ ಪತ್ರಿಕೆ ಪ್ರಾರಂಭಿಸಿ ಇದನ್ನು ರಾಜ್ಯ ಮಟ್ಟದಲ್ಲಿ ತನ್ನ ಛಾಪನ್ನು ಮೂಡಿಸಿದೆ. ಈ ನಿಟ್ಟಿನಲ್ಲಿ ಮಂಜಣ್ಣನವರ ಸಾಧನೆ ಅವರ ಪತ್ರಿಕೆ ಇನ್ನೂ ಉನ್ನತಮಟ್ಟದಲ್ಲಿ ಬೆಳೆದು ಹೆಸರುಗಳಿಸಲಿ ಎಂದು ಹಾರೈಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಎನ್.ಮಂಜುನಾಥ್, ಪತ್ರಕಾ ರಂಗದಲ್ಲಿ ಅನೇಕ
ಸವಾಲುಗಳನ್ನು ಎದುರಿಸಿ, ಜನತೆಯ ಸಲಹೆ ಸಹಕಾರ ಆಶೀರ್ವಾದದಿಂದ ನಮ್ಮ ಪತ್ರಿಕೆ ಜನಮಾನಸವನ್ನು ತಲುಪುವಲ್ಲಿ ಯಶಸ್ವಿಯಾಗಿದೆ ಎಂದು ನುಡಿದರು.

ಈ ಸಂದರ್ಭದಲ್ಲಿ ರವಿಕುಮಾರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...