Sunday, August 2, 2026
Sunday, August 2, 2026

Department of Women and Child Development ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಸಾಂಸ್ಕೃತಿಕ ಚಟುವಟಿಕೆ ಸಹಕಾರಿ- ಬಿ.ಎಚ್.ಕೃಷ್ಣಪ್ಪ

Date:

Department of Women and Child Development ಮಕ್ಕಳ ವ್ಯಕ್ತಿತ್ವ ವಿಕಾಸನದಲ್ಲಿ ಸಾಂಸ್ಕೃತಿಕ ಚಟುವಟಿಕೆಗಳು ಸಹಕಾರಿಯಾಗಿವೆೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಬಿ.ಹೆಚ್ ಕೃಷ್ಣಪ್ಪ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಜ್ಯ ಬಾಲ ಭವನ ಸೊಸೈಟಿ ಬೆಂಗಳೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾ ಬಾಲ ಭವನ ಸಮಿತಿ, ಮುಖಾ-ಮುಖಿ ಎಸ್. ಟಿ ರಂಗತAಡ (ರಿ), ಇವರ ಸಂಯುಕ್ತ ಆಶ್ರಯದಲ್ಲಿ ದಸರಾ ಹಬ್ಬದ ಪ್ರಯುಕ್ತ ಸರ್ಕಾರಿ ಬಾಲ ಮಂದಿರದಲ್ಲಿ 06 ರಿಂದ 16 ವರ್ಷದ ಮಕ್ಕಳಿಗೆ ಅ. 8 ರಿಂದ 20 ರ ವರೆಗೆ ರಂಗ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಮಕ್ಕಳು ತಮ್ಮ ಸುತ್ತಮುತ್ತಲಿನ ಪರಿಸರವನ್ನು ಅತೀ ಸೂಕ್ಷö್ಮವಾಗಿ ಗಮನಿಸುತ್ತಾರೆ. ಅವರ ಬೆಳವಣಿಗೆಗೆ ಶಿಕ್ಷಣದ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗಳು, ವ್ಯಕ್ತಿತ್ವ ವಿಕಾಸನ ಶಿಬಿರ, ರಂಗ ಶಿಬಿರ ತರಬೇತಿಗಳು ಪ್ರಮುಖ ಪಾತ್ರವನ್ನು ನಿರ್ವಹಿಸುತ್ತವೆ. ಪ್ರತಿಯೊಬ್ಬರು ಈ ಶಿಬಿರದ ಉಪಯೋಗ ಪಡೆದುಕೊಳ್ಳಿ ಎಂದರು.
Department of Women and Child Development ರಂಗಾಯಣದ ಆಡಳಿತ ಅಧಿಕಾರಿ ಡಾ. ಶೈಲಜಾ ಮಾತನಾಡಿ, ಮಕ್ಕಳಲ್ಲಿ ಬಾಲ್ಯದಲ್ಲಿಯೇ ರಂಗ ಶಿಕ್ಷಣ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಕುರಿತು ಅರಿವು ಮೂಡಿಸಬೇಕು. ಮಕ್ಕಳು ಮುಂದೆ ಈ ಕ್ಷೇತ್ರದಲ್ಲಿ ಉತ್ತಮವಾದ ಭವಿಷ್ಯವನ್ನು ಕಂಡುಕೊಳ್ಳಲು ಸಾಕಷ್ಟು ಅವಕಾಶಗಳಿದೆ ಎಂದ ಅವರು ರಂಗ ತರಬೇತಿ, ರಂಗಭೂಮಿಯ ಉದ್ದೇಶ, ಪ್ರಾಮುಖ್ಯತೆ ಹಾಗೂ ರಂಗಾಯಣ ಸಂಸ್ಥೆಯ ಕಾರ್ಯ ಚಟುವಟಿಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ರಂಗಕರ್ಮಿ ಡಾ. ಸಾಸ್ವೇಹಳ್ಳಿ ಸತೀಶ್ ಅವರು ಮಕ್ಕಳಿಗೆ ರಂಗ ನಾಟಕ, ಜನಪದ ಗೀತೆ, ಭರತನಾಟ್ಯ, ನಮ್ಮ ಕಲೆ ಮತ್ತು ಸಂಸ್ಕೃತಿಯ ಕುರಿತು ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಶಶಿರೇಖಾ, ಮುಖಾ-ಮುಖಿ ಎಸ್.ಟಿ ರಂಗ ತಂಡದ ನಿರ್ದೇಶಕ ಮಂಜು ರಂಗಾಯಣ, ಶಿಬಿರ ನಿರ್ದೇಶಕ ಶಂಕರ್ ಕೆ., ಸರ್ಕಾರಿ ಬಾಲಕಿಯರ ಬಾಲ ಮಂದಿರ ಅಧೀಕ್ಷಕಿ ಜ್ಯೋತಿಕಲಾ, ಸರ್ಕಾರಿ ಬಾಲಕರ ಬಾಲ ಮಂದಿರ ಮತ್ತು ಬಾಲಕಿಯರ ಬಾಲ ಮಂದಿರದ ಮಕ್ಕಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...