Thursday, May 28, 2026
Thursday, May 28, 2026

Department of Women and Child Development ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಸಾಂಸ್ಕೃತಿಕ ಚಟುವಟಿಕೆ ಸಹಕಾರಿ- ಬಿ.ಎಚ್.ಕೃಷ್ಣಪ್ಪ

Date:

Department of Women and Child Development ಮಕ್ಕಳ ವ್ಯಕ್ತಿತ್ವ ವಿಕಾಸನದಲ್ಲಿ ಸಾಂಸ್ಕೃತಿಕ ಚಟುವಟಿಕೆಗಳು ಸಹಕಾರಿಯಾಗಿವೆೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಬಿ.ಹೆಚ್ ಕೃಷ್ಣಪ್ಪ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಜ್ಯ ಬಾಲ ಭವನ ಸೊಸೈಟಿ ಬೆಂಗಳೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾ ಬಾಲ ಭವನ ಸಮಿತಿ, ಮುಖಾ-ಮುಖಿ ಎಸ್. ಟಿ ರಂಗತAಡ (ರಿ), ಇವರ ಸಂಯುಕ್ತ ಆಶ್ರಯದಲ್ಲಿ ದಸರಾ ಹಬ್ಬದ ಪ್ರಯುಕ್ತ ಸರ್ಕಾರಿ ಬಾಲ ಮಂದಿರದಲ್ಲಿ 06 ರಿಂದ 16 ವರ್ಷದ ಮಕ್ಕಳಿಗೆ ಅ. 8 ರಿಂದ 20 ರ ವರೆಗೆ ರಂಗ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಮಕ್ಕಳು ತಮ್ಮ ಸುತ್ತಮುತ್ತಲಿನ ಪರಿಸರವನ್ನು ಅತೀ ಸೂಕ್ಷö್ಮವಾಗಿ ಗಮನಿಸುತ್ತಾರೆ. ಅವರ ಬೆಳವಣಿಗೆಗೆ ಶಿಕ್ಷಣದ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗಳು, ವ್ಯಕ್ತಿತ್ವ ವಿಕಾಸನ ಶಿಬಿರ, ರಂಗ ಶಿಬಿರ ತರಬೇತಿಗಳು ಪ್ರಮುಖ ಪಾತ್ರವನ್ನು ನಿರ್ವಹಿಸುತ್ತವೆ. ಪ್ರತಿಯೊಬ್ಬರು ಈ ಶಿಬಿರದ ಉಪಯೋಗ ಪಡೆದುಕೊಳ್ಳಿ ಎಂದರು.
Department of Women and Child Development ರಂಗಾಯಣದ ಆಡಳಿತ ಅಧಿಕಾರಿ ಡಾ. ಶೈಲಜಾ ಮಾತನಾಡಿ, ಮಕ್ಕಳಲ್ಲಿ ಬಾಲ್ಯದಲ್ಲಿಯೇ ರಂಗ ಶಿಕ್ಷಣ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಕುರಿತು ಅರಿವು ಮೂಡಿಸಬೇಕು. ಮಕ್ಕಳು ಮುಂದೆ ಈ ಕ್ಷೇತ್ರದಲ್ಲಿ ಉತ್ತಮವಾದ ಭವಿಷ್ಯವನ್ನು ಕಂಡುಕೊಳ್ಳಲು ಸಾಕಷ್ಟು ಅವಕಾಶಗಳಿದೆ ಎಂದ ಅವರು ರಂಗ ತರಬೇತಿ, ರಂಗಭೂಮಿಯ ಉದ್ದೇಶ, ಪ್ರಾಮುಖ್ಯತೆ ಹಾಗೂ ರಂಗಾಯಣ ಸಂಸ್ಥೆಯ ಕಾರ್ಯ ಚಟುವಟಿಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ರಂಗಕರ್ಮಿ ಡಾ. ಸಾಸ್ವೇಹಳ್ಳಿ ಸತೀಶ್ ಅವರು ಮಕ್ಕಳಿಗೆ ರಂಗ ನಾಟಕ, ಜನಪದ ಗೀತೆ, ಭರತನಾಟ್ಯ, ನಮ್ಮ ಕಲೆ ಮತ್ತು ಸಂಸ್ಕೃತಿಯ ಕುರಿತು ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಶಶಿರೇಖಾ, ಮುಖಾ-ಮುಖಿ ಎಸ್.ಟಿ ರಂಗ ತಂಡದ ನಿರ್ದೇಶಕ ಮಂಜು ರಂಗಾಯಣ, ಶಿಬಿರ ನಿರ್ದೇಶಕ ಶಂಕರ್ ಕೆ., ಸರ್ಕಾರಿ ಬಾಲಕಿಯರ ಬಾಲ ಮಂದಿರ ಅಧೀಕ್ಷಕಿ ಜ್ಯೋತಿಕಲಾ, ಸರ್ಕಾರಿ ಬಾಲಕರ ಬಾಲ ಮಂದಿರ ಮತ್ತು ಬಾಲಕಿಯರ ಬಾಲ ಮಂದಿರದ ಮಕ್ಕಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ಸಿದ್ಧರಾಮಯ್ಯ ರಾಜೀನಾಮೆ? ಡಿ.ಕೆ.ಶಿವಕುಮಾರ್ ಗೆ ಸೀಎಂ ಪಟ್ಟ?.

Breaking News ನವದೆಹಲಿಯಲ್ಲಿ ರಾಜಕೀಯ ಚಟುವಟಿಕೆ ಬಿರುಸಾಗಿ ನಡೆದಿದೆ. ರಾಜ್ಯದ ಕಾಂಗ್ರೆಸ್...

Akashavani Bhadravati ಜೂನ್ 2. ಭದ್ರಾವತಿ ಆಕಾಶವಾಣಿಯಿಂದ” ಬಾನುಲಿ ಬರಹ ” ವಿಶೇಷ ಕಾರ್ಯಾಗಾರ

Akashavani Bhadravati ಭಾರತದ ಸಾರ್ವಜನಿಕ ಪ್ರಸಾರ ಸೇವೆ ಸಂಸ್ಥೆಯಾದ ಪ್ರಸಾರ ಭಾರತಿಯ...

JCI Institute ಯುವ ನಾಯಕತ್ವ ಬೆಳವಣಿಗೆಯಲ್ಲಿ ಜೆಸಿಐ ಸಂಸ್ಥೆ ಸದಾ ಮುಂಚೂಣಿಯಲ್ಲಿದೆ- ವಿಜಯಲಕ್ಷ್ಮಿ ಕಡಂಬ.

JCI Institute ಸ್ಥಳೀಯ ಸಮಾಜಮುಖಿ ಕಾರ್ಯಗಳಲ್ಲಿ ಹಾಗೂ ಯುವ ನಾಯಕತ್ವದ ಬೆಳವಣಿಗೆಯಲ್ಲಿ...