Wednesday, September 9, 2026
Wednesday, September 9, 2026

Shivamogga Police ಬಸ್ ಹತ್ತುವಾಗ ಮಹಿಳೆಯ ಆಭರಣ ಕಳವು ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Date:

Shivamogga Police ಶಿವಮೊಗ್ಗ ನಗರದ ಸರಕಾರಿ ಬಸ್ ನಿಲ್ದಾಣದಲ್ಲಿ ಮಹಿಳೆಯ ಚಿನ್ನಾಭರಣ ಕಳ್ಳತನ ಮಾಡಲಾಗಿದೆ.

ತಾಲೂಕಿನ ರಾಮೇನಕೊಪ್ಪದಲ್ಲಿರುವ ತವರು ಮನೆಗೆ ಬಂದಿದ್ದ 28 ವರ್ಷದ ಮಹಿಳೆ ಗಂಡನ ಮನೆಯಾದ ಶಿಕಾರಿಪುರದ ನೆಲವಾಗಿಲು ಗ್ರಾಮಕ್ಕೆ ವಾಪಾಸ್ ಆಗಲು ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ಧರ್ಮಸ್ಥಳ-ಹುಬ್ಬಳ್ಳಿ KSRTC ಬಸ್ ಹತ್ತಿದ್ದಾರೆ. ಎಂದಿನಂತೆ ಬಸ್ ಹತ್ತಲು ರಶ್ ಆಗಿದೆ.

Shivamogga Police ರಶ್ ನಲ್ಲೇ ಸೀಟು ಹಿಡಿಯಲು ಮುಂದಾದ ಮಹಿಳೆಯು ಸೀಟು ಹಿಡಿದ ನಂತರ ವ್ಯಾನಿಟಿ ಬ್ಯಾಗ್ ನಲ್ಲಿದ್ದ ಆಧಾರ್ ಕಾರ್ಡ್ ತೆಗೆಯಲು ಬ್ಯಾಗ್ ನೋಡಿಕೊಂಡಿದ್ದಾರೆ. ವ್ಯಾನಿಟಿ ಬ್ಯಾಗ್ ನ ಜಿಪ್ ಅರ್ಧ ತೆಗೆದಿರುವುದು ಗಮನಕ್ಕೆ ಬಂದಿದೆ. ವ್ಯಾನಿಟಿ ಬ್ಯಾಗ್ ಪರಿಶೀಲಿಸಿದಾಗ ಬ್ಯಾಗ್ ನಲ್ಲಿದ್ದ ಚಿನ್ನಾಭರಣ ಮತ್ತು ಹಲವು ಕಾರ್ಡ್ ಗಳು ಕಾಣೆಯಾಗಿವೆ.

20 ಸಾವಿರದ ಕರಿಮಣಿ ಮತ್ತು ತಾಳಿಗುಂಡು ಇರುವ ತಾಳಿ ಸರ, ಈಶ್ವರನ ಡಾಲರ್, ಕೆನೆರಾ ಮತ್ತು ಇಂಡಿಯನ್ ಬ್ಯಾಂಕ್‌ನ ಎಟಿಎಂ ಕಾರ್ಡ್, ಕೆಎಂವೈ ಕಾರ್ಡ್, ಪಾನ್ ಕಾರ್ಡ್ ಕಳುವಾಗಿದೆ ಎಂದು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಮಹಿಳೆ ದೂರು ದಾಖಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...