Tuesday, May 5, 2026
Tuesday, May 5, 2026

Shivamogga Police ಬಸ್ ಹತ್ತುವಾಗ ಮಹಿಳೆಯ ಆಭರಣ ಕಳವು ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Date:

Shivamogga Police ಶಿವಮೊಗ್ಗ ನಗರದ ಸರಕಾರಿ ಬಸ್ ನಿಲ್ದಾಣದಲ್ಲಿ ಮಹಿಳೆಯ ಚಿನ್ನಾಭರಣ ಕಳ್ಳತನ ಮಾಡಲಾಗಿದೆ.

ತಾಲೂಕಿನ ರಾಮೇನಕೊಪ್ಪದಲ್ಲಿರುವ ತವರು ಮನೆಗೆ ಬಂದಿದ್ದ 28 ವರ್ಷದ ಮಹಿಳೆ ಗಂಡನ ಮನೆಯಾದ ಶಿಕಾರಿಪುರದ ನೆಲವಾಗಿಲು ಗ್ರಾಮಕ್ಕೆ ವಾಪಾಸ್ ಆಗಲು ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ಧರ್ಮಸ್ಥಳ-ಹುಬ್ಬಳ್ಳಿ KSRTC ಬಸ್ ಹತ್ತಿದ್ದಾರೆ. ಎಂದಿನಂತೆ ಬಸ್ ಹತ್ತಲು ರಶ್ ಆಗಿದೆ.

Shivamogga Police ರಶ್ ನಲ್ಲೇ ಸೀಟು ಹಿಡಿಯಲು ಮುಂದಾದ ಮಹಿಳೆಯು ಸೀಟು ಹಿಡಿದ ನಂತರ ವ್ಯಾನಿಟಿ ಬ್ಯಾಗ್ ನಲ್ಲಿದ್ದ ಆಧಾರ್ ಕಾರ್ಡ್ ತೆಗೆಯಲು ಬ್ಯಾಗ್ ನೋಡಿಕೊಂಡಿದ್ದಾರೆ. ವ್ಯಾನಿಟಿ ಬ್ಯಾಗ್ ನ ಜಿಪ್ ಅರ್ಧ ತೆಗೆದಿರುವುದು ಗಮನಕ್ಕೆ ಬಂದಿದೆ. ವ್ಯಾನಿಟಿ ಬ್ಯಾಗ್ ಪರಿಶೀಲಿಸಿದಾಗ ಬ್ಯಾಗ್ ನಲ್ಲಿದ್ದ ಚಿನ್ನಾಭರಣ ಮತ್ತು ಹಲವು ಕಾರ್ಡ್ ಗಳು ಕಾಣೆಯಾಗಿವೆ.

20 ಸಾವಿರದ ಕರಿಮಣಿ ಮತ್ತು ತಾಳಿಗುಂಡು ಇರುವ ತಾಳಿ ಸರ, ಈಶ್ವರನ ಡಾಲರ್, ಕೆನೆರಾ ಮತ್ತು ಇಂಡಿಯನ್ ಬ್ಯಾಂಕ್‌ನ ಎಟಿಎಂ ಕಾರ್ಡ್, ಕೆಎಂವೈ ಕಾರ್ಡ್, ಪಾನ್ ಕಾರ್ಡ್ ಕಳುವಾಗಿದೆ ಎಂದು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಮಹಿಳೆ ದೂರು ದಾಖಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

K. R. Periyakaruppan ಒಂದೇ ಒಂದು ಮತದ ಅಂತರದಲ್ಲಿ ಸೋತ (ಮಂತ್ರಿ) ಡಿಎಂಕೆ ಅಭ್ಯರ್ಥಿ ಪೆರಿಯಾಕರುಪ್ಪನ್.

ಒಂದು ಮತ ತಾನೆ. ಎಂಬ ನಿರ್ಲಕ್ಷ್ಯ ಬಹಳ ಅಭ್ಯರ್ಥಿಗಳಲ್ಲಿದೆ. ಆದರೆ ಆ...

Ballari News ಪಾರಾಗುವ ಬಗೆ ಹೇಗೆ?. ಬಳ್ಳಾರಿ ಜಿಲ್ಲಾ ವೈದ್ಯಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ನೀಡಿರುವ ಮಾಹಿತಿ ಎಲ್ಲರಿಗೂ ಅನ್ವಯ

Ballari News ಜಿಲ್ಲೆಯಾದ್ಯಂತ ದಿನದಿಂದ ದಿನಕ್ಕೆ ಬಿಸಿಲಿನ ಪ್ರಖರತೆ ಮತ್ತು ತೀವ್ರತೆ...

S.N. Channabasappa ಪಶುವೈದ್ಯಕೀಯ ಮತ್ತು‌ ಮೀನುಗಾರಿಕೆ ವಿಜ್ಞಾನ ವಿವಿಗಳ ನೌಕರರಿಗೆ ನೀಡುತ್ತಿರುವ ಎನ್ ಪಿ ಎ ಕಡಿತ: ಶಾಸಕ ಚೆನ್ನಿ ಅವರಿಂದ ಖಂಡನೆ

S.N. Channabasappa "ಕರ್ನಾಟಕ ಪಶು ವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ...

Summer ಬೇಸಿಗೆಯ ಬಿರುಬಿಸಿಲು!. ಜಾನುವಾರು ರಕ್ಷಣೆಗೆ ಪಶುವೈದ್ಯಕೀಯ ಕಾಲೇಜಿನ ತಜ್ಞರ ಮಾರ್ಗದರ್ಶನ – ಮಾಹಿತಿ ಇಲ್ಲಿದೆ.

Summer ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಮೇ ತಿಂಗಳಲ್ಲಿ ಬಿಸಿಲ ಧಗೆ ಹೆಚ್ಚಾಗುವ...