Monday, August 3, 2026
Monday, August 3, 2026

Chamber Of Commerce Shivamogga ನಿರ್ಮಲ ತುಂಗಭದ್ರಾ ಅಭಿಯಾನಕ್ಕೆ ಸಹಕಾರ ನೀಡಲು ಮನವಿ

Date:

Chamber Of Commerce Shivamogga ನದಿಯ ಶುದ್ಧತೆ ಮತ್ತು ಪಾವಿತ್ರ್ಯತೆ ಕಾಪಾಡುವ ಉದ್ದೇಶದಿಂದ ನಿರ್ಮಲ ತುಂಗಾಭದ್ರಾ ಅಭಿಯಾನ ಶಿವಮೊಗ್ಗ ವತಿಯಿಂದ ನಡೆಸುತ್ತಿರುವ ಜಲಜಾಗೃತಿ, ಜನಜಾಗೃತಿ ಹಾಗೂ ಪಾದಾಯಾತ್ರೆಗೆ ಬೆಂಬಲ, ಸಹಕಾರ ನೀಡುವಂತೆ ಅಭಿಯಾನದ ಪದಾಧಿಕಾರಿಗಳು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಸೇರಿದಂತೆ ಆಡಳಿತ ಮಂಡಳಿಗೆ ಕೋರಿದರು.

ನಗರ, ಪಟ್ಟಣ, ಗ್ರಾಮಗಳಲ್ಲಿ ತ್ಯಾಜ್ಯ ನೀರು ನದಿಗೆ ನೇರವಾಗಿ ಸೇರದಂತೆ ಎಲ್ಲ ಕಡೆಗಳಲ್ಲಿ ತ್ಯಾಜ್ಯ ನೀರು ಶುದ್ಧೀಕರಣ ಘಟಕ ಸ್ಥಾಪನೆ ಮಾಡಲು ಒತ್ತಾಯಿಸುವುದು. ತುಂಗಾ, ಭದ್ರಾ ನದಿಗಳ ಪಾವಿತ್ರ್ಯತೆ ಕಾಪಾಡುವುದು. ನದಿಗಳಲ್ಲಿ ನೀರಿನ ಹರಿವು ಇರುವಂತೆ ಯೋಜನೆ ರೂಪಿಸಲು ಸರ್ಕಾರಕ್ಕೆ ಒತ್ತಾಯಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಶೃಂಗೇರಿಯಿಂದ ಕಿಷ್ಕಿಂದೆ ತನಕ ಪಾದಾಯಾತ್ರೆ ನಡೆಸಲಾಗುತ್ತಿದೆ ಎಂದು ಅಭಿಯಾನದ ಪದಾಧಿಕಾರಿಗಳು ತಿಳಿಸಿದರು.

ಜಲಚರ ಸಂತತಿಗಳ ನಾಶವಾಗುವುದನ್ನು ತಡೆಗಟ್ಟಲು ಕ್ರಮ ಕೈಗೊಳ್ಳಲು ಒತ್ತಾಯಿಸುವುದು. ನದಿ ನೀರಿನ ಗುಣಮಟ್ಟವನ್ನು ವೈಜ್ಞಾನಿಕವಾಗಿ ಪರೀಕ್ಷೆಗೆ ಒಳಪಡಿಸಬೇಕು. ಶುದ್ಧತೆಯಲ್ಲಿ ವ್ಯತ್ಯಯ ಕಂಡುಬಂದರೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸುವುದು. ಸಾರ್ವಜನಿಕರಲ್ಲಿ ಜಲ ಜಾಗೃತಿ ಮತ್ತು ಸ್ವಚ್ಛತೆ ಜಾಗೃತಿ ಮೂಡಿಸುವುದು. ತುಂಗಾಭದ್ರಾ ನದಿ ನೀರು ಕಲುಷಿತವಾಗುವುದನ್ನು ತಡೆಗಟ್ಟಲು ಕ್ರಮ ಕೈಗೊಳ್ಳಬೇಕು. ಪಶ್ಚಿಮಘಟ್ಟ ಅಧ್ಯಯನ ಕೇಂದ್ರ ಸ್ಥಾಪಿಸುವಂತೆ ಕೋರಿಕೆ ಸಲ್ಲಿಸುವುದು ಅಭಿಯಾನದ ಮುಖ್ಯ ಉದ್ದೇಶವಾಗಿದೆ ಎಂದರು.

Chamber Of Commerce Shivamogga ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್, ಉಪಾಧ್ಯಕ್ಷ ಜಿ.ವಿಜಯಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಜಂಟಿ ಕಾರ್ಯದರ್ಶಿ ಕೆ.ಎಸ್.ಸುಕುಮಾರ್, ಖಜಾಂಚಿ ಆರ್.ಮನೋಹರ, ರಮೇಶ್ ಹೆಗಡೆ, ನಿರ್ಮಲ ತುಂಗಾಭದ್ರಾ ಅಭಿಯಾನ ಶಿವಮೊಗ್ಗದ ಪ್ರೊ. ಬಿ.ಎಂ.ಕುಮಾರಸ್ವಾಮಿ, ಎಂ.ಶಂಕರ್, ತ್ಯಾಗರಾಜ್, ದಿನೇಶ್ ಶೇಠ್, ಬಾಲಕೃಷ್ಣನಾಯ್ಡು ಇತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...