Sunday, December 7, 2025
Sunday, December 7, 2025

Rotary Club Shivamogga ಅಭಿವೃದ್ಧಿಯು ಸಬಲೀಕರಣ,ಮಾನವ ಹಕ್ಕುಗಳು, ನ್ಯಾಯ.& ಸಾಮೂಹಿಕ ಕ್ರಿಯಾ ತತ್ವ ಆಧರಿಸಿದೆ- ಪ್ರೊ.ಕುಮಾರಸ್ವಾಮಿ

Date:

Rotary Club Shivamogga ಸಮುದಾಯದ ಅಭಿವೃದ್ಧಿ ಕಾರ್ಯಕ್ರಮಗಳು ಸಾಮಾಜಿಕ ಒಗ್ಗಟ್ಟು ಹಾಗೂ ಆರ್ಥಿಕ ಉನ್ನತಿ ಸಾಧಿಸುತ್ತದೆ ಎಂದು ನಿವೃತ್ತ ಪ್ರಾಚಾರ್ಯ ಪ್ರೊ. ಬಿ.ಎಂ.ಕುಮಾರಸ್ವಾಮಿ ಹೇಳಿದರು.
ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಆಯೋಜಿಸಿದ್ದ ಆರ್ಥಿಕ ಮತ್ತು ಸಮುದಾಯ ಅಭಿವೃದ್ಧಿ ವಿಚಾರ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿ, ಸಮುದಾಯದ ಮೂಲ ಅಂಶಗಳನ್ನು ಅರ್ಥ ಮಾಡಿಕೊಳ್ಳುವುದು ಬಹು ಮುಖ್ಯ ಎಂದು ತಿಳಿಸಿದರು.
ಸಮುದಾಯದ ಅಭಿವೃದ್ಧಿಯು ಸಬಲೀಕರಣ, ಮಾನವ ಹಕ್ಕುಗಳು ಸೇರ್ಪಡೆ, ಸಾಮಾಜಿಕ ನ್ಯಾಯ, ಸ್ವನಿರ್ಣಯ ಮತ್ತು ಸಾಮೂಹಿಕ ಕ್ರಿಯೆಗಳ ತತ್ವಗಳನ್ನು ಆಧರಿಸಿದೆ ಎಂದರು.
Rotary Club Shivamogga ಸಹಾಯಕ ಗವರ್ನರ್ ಸುರೇಶ್ ಮಾತನಾಡಿ, ಸಮುದಾಯದಲ್ಲಿ ಬದಲಾವಣೆ ಮಾಡಲು ಅಗತ್ಯವಿರುವ ಕೌಶಲ್ಯಗಳೊಂದಿಗೆ ಸಬಲೀಕರಣಗೊಳಿಸಲು ಪ್ರಯತ್ನಿಸುವುದು ಮುಖ್ಯ ಉದ್ದೇಶ ಎಂದು ಹೇಳಿದರು.
ರೋಟರಿ ವಲಯ 11ರ ಸಹಾಯಕ ಗವರ್ನರ್, ಏಳು ಕ್ಲಬ್ ಅಧ್ಯಕ್ಷರು ಮತ್ತು ಕಾರ್ಯದರ್ಶಿ, ವಲಯ ಲೆಫ್ಟಿನೆಂಟ್, ವಲಯ ತರಬೇತುದಾರ, ವಲಯ ಸಂಯೋಜಕರು ಭಾಗವಹಿಸಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಕಿರಣ್ ಕುಮಾರ್ ಜಿ ಮಾತನಾಡಿ, ಸಂಸ್ಥೆಯು ನಿರಂತರವಾಗಿ ಸಮಾಜಮುಖಿ ಸೇವಾ ಕಾರ್ಯಗಳನ್ನು ನಡೆಸುತ್ತಿದ್ದು, ಸಾಮಾಜಿಕ ಚಟುವಟಿಕೆಗಳ ಜತೆಯಲ್ಲಿ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕೆಪಿಎಲ್ ಸ್ವಾಮಿ, ಮಂಜುನಾಥ್ ರಾವ್ ಕದಂ, ರಾಧಾಕೃಷ್ಣ, ಸಂತೋಷ್ ಹಾಗೂ ಈಶ್ವರ ಬಿವಿ, ರವಿ ಕೋಟೋಜಿ, ಚುಡಾಮಣಿ ಪವಾರ್, ಜಿಎನ್ ಪ್ರಕಾಶ್, ಜಿ.ವಿಜಯಕುಮಾರ್, ವಸಂತ ಹೋಬಳಿದಾರ್, ರೋಟರಿಯ ಎಲ್ಲ ಪದಾಧಿಕಾರಿಗಳು ಹಾಗೂ ಪ್ರಮುಖರು, ಸದಸ್ಯರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...