Friday, March 20, 2026
Friday, March 20, 2026

Bharat Scouts and Guides Shivamogga ಸ್ಕೌಟ್ಸ್ & ಗೈಡ್ಸ್ ನಿಂದ ಉತ್ತಮ ವ್ಯಕ್ತಿತ್ವ ಹಾಗೂ ಕೌಶಲ್ಯ ವೃದ್ಧಿ- ಸಂಸದ ರಾಘವೇಂದ್ರ

Date:

Bharat Scouts and Guides Shivamogga ಶಿವಮೊಗ್ಗ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸ್ಕೌಟ್ ಮತ್ತು ಗೈಡ್ಸ್ ಸಹಕಾರಿ ಆಗುವುದರ ಜತೆಯಲ್ಲಿ ಕೌಶಲ್ಯ ವೃದ್ಧಿಸಿಕೊಳ್ಳಲು ನೆರವಾಗುತ್ತದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶಿವಮೊಗ್ಗ ಜಿಲ್ಲಾ ಸಂಸ್ಥೆ, ಸ್ಥಳೀಯ ಸಂಸ್ಥೆ ಮತ್ತು ಮಲ್ನಾಡ್ ಓಪನ್ ಗ್ರೂಪ್ ವತಿಯಿಂದ ಜಿಲ್ಲಾ ಸ್ಕೌಟ್ ಭವನದಲ್ಲಿ ಆಯೋಜಿಸಿದ್ದ ಜಂಬೂರೀ ಆನ್ ದಿ ಏರ್ ( ಜೋಟ ), ಜಂಬೂರೀ ಆನ್ ದಿ ಇಂಟರ್ನೆಟ್ ( ಜೋಟಿ ) ಕಾರ್ಯಕ್ರಮದಲ್ಲಿ ಭಾಗವಹಿಸಿ ಪದಾಧಿಕಾರಿಗಳು ಮತ್ತು ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು.
ಸ್ಕೌಟ್ಸ್, ಗೈಡ್ಸ್ ಸೇರಿಕೊಂಡರೆ ದೇಶಪ್ರೇಮ, ಸಾಮಾಜಿಕ ಬದ್ಧತೆ ಬೆಳೆಯುತ್ತದೆ. ಮುಂದಿನ ಜೀವನಕ್ಕೂ ಸಹಕಾರಿಯಾಗಲಿದೆ. ಸಂಸ್ಥೆಯ ಎಲ್ಲ ಚಟುವಟಿಕೆಗಳಿಗೆ ನನ್ನ ಸಹಕಾರ ಇರುತ್ತದೆ ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಮುಖ್ಯ ಆಯುಕ್ತ ಕೆ.ಪಿ.ಬಿಂದುಕುಮಾರ್ ಮಾತನಾಡಿ, ಸಂಸ್ಥೆಯ ಮುಂದಿನ ರಾಜ್ಯ ಮತ್ತು ಜಿಲ್ಲಾ ಮಟ್ಟದ ಕಾರ್ಯಾಚಟುವಟಿಕೆ ಬಗ್ಗೆ ಮಾಹಿತಿ ನೀಡಿದರು.
Bharat Scouts and Guides Shivamogga ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರನ್ನು ಸಂಸ್ಥೆ ವತಿಯಿಂದ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಹವ್ಯಾಸಿ ರೇಡಿಯೋದಲ್ಲಿ 12ನೇ ವಯಸ್ಸಿನಲ್ಲಿ ಪರವಾನಿಗೆ ಪಡೆದುಕೊಂಡು ಸಕ್ರಿಯವಾಗಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಸುಭಾಷ್ ಲಕ್ಷ್ಮಣನ್ ಅವರನ್ನು ಸಂಸ್ಥೆ ಮತ್ತು ಶಿವಮೊಗ್ಗ ಹವ್ಯಾಸಿ ರೇಡಿಯೋ ಕ್ಲಬ್ ಪರವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು. ಸ್ಕೈಪ್ ತಂತ್ರಾಂಶದ ಮೂಲಕ ಮಕ್ಕಳು ದೇಶ ವಿದೇಶದ ಸ್ಕೌಟ್ ಗೈಡ್ ಮಕ್ಕಳೊಂದಿದೆ ಸಂವಹನ ನಡೆಸಿ ಕಾರ್ಯಕ್ರಮ ಯಶಸ್ವಿಗೊಳಿಸಿಕೊಟ್ಟರು.
ಜಿಲ್ಲಾ ಆಯುಕ್ತ ( ರೋವರ್ ) ಕೆ.ರವಿ, ಕೇಂದ್ರ ಸ್ಥಾನಿಕ ಆಯುಕ್ತ ಜಿ.ವಿಜಯ್ ಕುಮಾರ್, ಆರ್.ರಾಘವೇಂದ್ರ, ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ರಾಜೇಶ್ ವಿ.ಅವಲಕ್ಕಿ, ಸಹಾಯಕ ಜಿಲ್ಲಾ ಆಯುಕ್ತ ಶ್ರೀನಿವಾಸ್ ವರ್ಮಾ, ಮಲ್ಲಿಕಾರ್ಜುನ ಕಾನೂರ್, ಸ್ಥಳೀಯ ಸಂಸ್ಥೆ ಸಹಕಾರ್ಯದರ್ಶಿ ಘನಶ್ಯಾಮ್ ಗಿರಿಮಾಜಿ, ಕಬ್ ಮಾಸ್ಟರ್ ಲೋಹಿತ್ ಪ್ರಸಾದ್ ಹೆಚ್. ವಿ. ಹಾಗೂ ವಿವಿಧ ಶಾಲೆ, ಕಾಲೇಜಿನ, ಮುಕ್ತದಳದ ಸದಸ್ಯರು, ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...