Wednesday, May 6, 2026
Wednesday, May 6, 2026

Forest Department ಸಾಗರ ತಾಲ್ಲೂಕಿನಲ್ಲಿ ಅಕ್ರಮ ಅಕೇಶಿಯ ಮರ ಕಡಿತಲೆ. ಡಿಎಫ್ಓ ಮೋಹನ್ ಭೇಟಿ, ಪರಿಶೀಲನೆ

Date:

Forest Department ಸಾಗರ ತಾಲೂಕಿನ ಹೊಸಹಳ್ಳಿ, ಹಂಸಗಾರು ಮತ್ತು ಗಿಳಿಗಾರು ಗ್ರಾಮಗಳ ವ್ಯಾಪ್ತಿಯಲ್ಲಿ ಅಕ್ರಮವಾಗಿ ಅಕೇಶಿಯಾ ಮರಗಳ ಕಡಿತಲೆ ಮತ್ತು ಸಾಗಾಟದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಶಾಮೀಲಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಸಂಬಂಧ ಶಿವಮೊಗ್ಗ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮೂರು ದಿನಗಳ ಒಳಗಾಗಿ ತನಿಖೆ ನಡೆಸಿ ವರದಿ ನೀಡುವಂತೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
Forest Department ಈ ಕುರಿತು ಮಾತನಾಡಿದ ಡಿಎಫ್​ಒ ಮೋಹನ್, “ಅಕ್ರಮವಾಗಿ ಅಕೇಶಿಯಾ ಮರಗಳ ಕಡಿತಲೆ ಮತ್ತು ಸಾಗಣೆ ಸಂಬಂಧ ಗ್ರಾಮಸ್ಥರು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಗೆ ಪತ್ರ ಬರೆದ ಹಿನ್ನೆಲೆ ನಾನು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಘಟನೆ ಸಂಬಂಧ ತನಿಖೆ ನಡೆಸಿ ವರದಿ ನೀಡುವಂತೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ. ರೇಂಜರ್​ ಕೊಟ್ಟ ತನಿಖಾ ವರದಿಯನ್ನು ಉನ್ನತಾಧಿಕಾರಿಗಳ ಮೂಲಕ ಅರಣ್ಯ ಸಚಿವರಿಗೆ ತಲುಪಿಸಲಾಗುತ್ತದೆ” ಎಂದು ತಿಳಿಸಿದರು.
ಸ್ಥಳೀಯರಾದ ಹರ್ಷ ಮಾತನಾಡಿ, “ಹೊಸಹಳ್ಳಿ ಗ್ರಾಮದ ಸರ್ಕಾರಿ ಅಕೇಶಿಯಾ ನೆಡುತೋಪಿನಲ್ಲಿ ಐದಾರು ವರ್ಷಗಳಿಂದ ಅಕ್ರಮವಾಗಿ ಅಕೇಶಿಯಾ ಮರಗಳ ಕಡಿತಲೆ‌ ಮಾಡಲಾಗುತ್ತಿದೆ. ಈ ಕುರಿತು ಕ್ರಮ ಜರುಗಿಸಬೇಕಾದ ಅರಣ್ಯಾಧಿಕಾರಿಗಳೇ ಅಕ್ರಮದಲ್ಲಿ ಭಾಗಿಯಾಗಿದ್ದಾರೆ. ಹೀಗಾಗಿ ಅವರ ಮೇಲೆ ಕ್ರಮ ಜರುಗಿಸಬೇಕು ಹಾಗೂ ಅವರನ್ನು ಕೆಲಸದಿಂದ ವಜಾ ಮಾಡಬೇಕು” ಎಂದು ಆಗ್ರಹಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಹತ್ತು ಚಿನ್ನದ ಪದಕ ಮುಡಿಗೇರಿಸಿದ ಕುವೆಂಪು ವಿವಿಗೇ ಪ್ರಥಮ ವಿದ್ಯಾರ್ಥಿಎಂ.ಎ.(ಕನ್ನಡ) ವಿಭಾಗದ ಪ್ರತಿಭೆ, ಹೆಚ್.ಎಂ.ಅಭಿಷೇಕ್.

Kuvempu University ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಮೂಲಕ ಗಮನ...

Kuvempu university ಕುವೆಂಪು ವಿವಿಯಿಂದ ಗೌರಗ ಡಾಕ್ಟರೇಟ್ ಪಡೆದ ಮಹನಿಯರ ಮಾಹಿತಿ

Kuvempu university ಕುವೆಂಪು ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವದಲ್ಲಿ ನಾಡಿನ ಮೂವರು ಗಣ್ಯ...

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ,ದೇಶದವಾಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...