Tuesday, March 24, 2026
Tuesday, March 24, 2026

Inner Wheel Club Shivamogga ಮಹಿಳೆಯರು ಸ್ವಾವಲಂಬಿಗಳಾಗಬೇಕು-ವೈಶಾಲಿ ಕುಡುವ

Date:

Inner Wheel Club Shivamogga ಸೇವಾ ಕಾರ್ಯಗಳಲ್ಲಿ ಇನ್ನರ್ ವೀಲ್ ಸಂಸ್ಥೆ ಮುಂಚೂಣಿಯಲ್ಲಿದೆ.
ಸ್ನೇಹ ಪ್ರೀತಿ ಸೇವೆಗಳ ಮುಖಾಂತರ ಜನಮಾನಸವನ್ನು ತಲುಪುತ್ತಿರುವ ಇನ್ನರ್ ವೀಲ್. ಪ್ರಪಂಚಾದ್ಯಂತ ಸೇವಾ ಕಾರ್ಯಗಳಲ್ಲಿ ಮುಂಚೂಣಿಯಲ್ಲಿದೆ ಎಂದು ಇನ್ನರ್ ವೀಲ್ ಜಿಲ್ಲಾ ಚೇರ್ಮನ್ ಶ್ರೀಮತಿ ವೈಶಾಲಿ
ಕುಡುವ ನುಡಿದರು. ಅವರು ಇನ್ನರ್ ವೀಲ್ ಕ್ಲಬ್ ಶಿವಮೊಗ್ಗ ಪೂರ್ವದ ಅಧಿಕೃತ ಬೇಟಿ ಸಂದರ್ಭದಲ್ಲಿ ಕ್ಲಬ್ಬಿನ ಚಟುವಟಿಕೆಗಳನ್ನು ಗಮನಿಸಿ ಅವರ ಮಾಡಿದ ಸೇವಾ ಕಾರ್ಯಗಳನ್ನು ಗುರುತಿಸಿ.ಈಗಾಗಲೇ ವೀಲ್ ಚೇರ್. ಬೆಂಚ್ ಡೆಸ್ಕ್. ಕಂಪ್ಯೂಟರ್ ನಲಿ ಕಲಿ.ಟೇಬಲ್ ಆರೋಗ್ಯ ಜಾಗೃತಿ ಕಾರ್ಯಕ್ರಮಗಳು ಹಲವಾರು ಸಮುದಾಯಗಳಲ್ಲಿ ಮಾಡಿರುವ ಸೇವೆಯನ್ನು ಕೊಂಡಾಡಿದರು. ಗೋವುಗಳು ಹಾಗೂ ಪ್ರಾಣಿಗಳ ಬಗ್ಗೆ ತಾವು ಮಾಡುತ್ತಿರುವ ಸೇವೆಯನ್ನು ವಿವರಿಸಿದರು. ಮಹಿಳೆಯರು ಸ್ವಾವಲಂಬಿಗಳಾಗಬೇಕು ತಮ್ಮ ಗಳಿಕೆಯಲ್ಲಿ ಸಮಾಜಕ್ಕೆ ಸ್ವಲ್ಪ ಅರ್ಪಿಸಬೇಕು .ನಾವು ಮಾಡುವ ಸೇವೆ ಎಂದು ಸದಾ ಶಾಶ್ವತ ಈಗಾಗಲೇ ಜಿಲ್ಲೆಯಲ್ಲಿ ಅತ್ಯಂತ ಪ್ರತಿಷ್ಠಿತ ಕ್ಲಬ್ ಗಳಲ್ಲಿ ಒಂದಾದ ಇನ್ನರ್ ವೀಲ್ ಕ್ಲಬ್ ಶಿವಮೊಗ್ಗ ಪೂರ್ವ ಸಂಸ್ಥೆ ಇನ್ನು ಅತಿ ಹೆಚ್ಚು ಎತ್ತರಕ್ಕೆ ಬೆಳೆದು ದೊಡ್ಡ ದೊಡ್ಡ ಸೇವಾ ಕಾರ್ಯಗಳನ್ನು ಮಾಡಲಿ ಎಂದು ಹಾರೈಸಿದರು
Inner Wheel Club Shivamogga ಇದೇ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ
ರೋಟರಿ ಮಾಜಿ ಸಹಾಯಕ ಗವರ್ನರ್. ಜಿ ವಿಜಯಕುಮಾರ್ ಅವರು ಕ್ಲಬ್ಬಿನ ಮುಖವಾಣಿ “ಉಷೆ” ಪತ್ರಿಕೆಯನ್ನು ಬಿಡುಗಡೆ ಮಾಡಿದರು. ಇನ್ನರ್ ವೀಲ್ ಸಂಸ್ಥೆ ಯವರು ಶಾಲೆಯಲ್ಲಿ ಆರ್ಥಿಕವಾಗಿ ಹಿಂದುಳಿದ ಬಡ ಮಕ್ಕಳನ್ನು ದತ್ತು ತೆಗೆದುಕೊಂಡು ಅವರಿಗೆ ವಿದ್ಯಾಭ್ಯಾಸ ಕೊಡುತ್ತಿರುವುದು ಒಂದು ಒಳ್ಳೆಯ ಮನಕುಲದ ಸೇವೆಯಾಗಿದೆ ಮಹಿಳೆಯರು ಯಾವುದೇ ಸೇವಾ ಕಾರ್ಯಗಳನ್ನು ಮಾಡಿದರು ಜನರನ್ನ ತಲುಪುತ್ತದೆ ಈ ನಿಟ್ಟಿನಲ್ಲಿ ಈಗಾಗಲೇ ಇನ್ನರ್ ವೀಲ್ ಕ್ಲಬ್ ಶಿವಮೊಗ್ಗ ಪೂರ್ವ ಸಂಸ್ಥೆಯವರು ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಉತ್ತಮವಾದ ಸೇವಾ ಕಾರ್ಯಗಳನ್ನು ಮಾಡುವುದರ ಮುಖಾಂತರ ತಮ್ಮ ಹೆಜ್ಜೆ ಗುರುತನ್ನು ಮೂಡಿಸಿದ್ದಾರೆ ಈ ಕಾರ್ಯಗಳಲ್ಲಿ ಸಹಕರಿಸಿದ ಎಲ್ಲಾ ದಾನಿಗಳಿಗೂ ಮತ್ತೊಮ್ಮೆ ಧನ್ಯವಾದಗಳು ಎಂದು ನುಡಿದರು. ಸಮಾರಂಭದಲ್ಲಿ ಕಾರ್ಯದರ್ಶಿ ಲತಾ ಸೋಮಶೇಖರ್. ಮಾಜಿ ಅಧ್ಯಕ್ಷರಾದ ಶ್ರೀಮತಿ ಬಿಂದು ವಿಜಯ ಕುಮಾರ್. ಇನ್ನರ್ ವೀಲ್ ಜಿಲ್ಲಾ ಉಪಾಧ್ಯಕ್ಷರಾದ ಶಬರಿ ಕಡಿದಾಳ್. ಮಧುರ ಮಹೇಶ್. ವಾಣಿ ಪ್ರವೀಣ್.. ವೀಣಾ ಸುರೇಶ್. ಗೀತಾ ಬಸವ ಕುಮಾರ್. ವಿಜಯಶ್ರೀ. ಇನ್ನರ್ ವೀಲ್ ಮಾಜಿ ಅಧ್ಯಕ್ಷರುಗಳು ಪದಾಧಿಕಾರಿಗಳು ಸದಸ್ಯರು. ಮಾಜಿ ಜಿಲ್ಲಾ ಚೇರ್ಮನ್ ಗಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...

CM Siddaramaiah ಮೌಢ್ಯತೆ ವಿರುದ್ಧ ಸಿಡಿದೆದ್ದುಸಮಸಮಾಜದ ಕನಸು ಬಿತ್ತಿದ ಶರಣ ದೇವರ ದಾಸಿಂಯ್ಯ- ಸಿದ್ಧರಾಮಯ್ಯ

CM Siddaramaiah ಮೌಢ್ಯ, ಕಂದಾಚಾರಗಳ‌ ಹೆಸರಿನಲ್ಲಿ ತಳ ಸಮುದಾಯಗಳ ಜನರನ್ನು...