Friday, June 26, 2026
Friday, June 26, 2026

Dr. G. Parameshwar ಉಪ ಚುನಾವಣೆ ಕಾಂಗ್ರೆಸ್ ಗೇ ಗೆಲುವು. ವಕ್ಫ್ ಬೋರ್ಡ್ ಆಸ್ತಿ ವಿವಾದ ಪರಿಶೀಲನೆ, ಬೆಂಗಳೂರಿಗೆ ಶರಾವತಿ ಪ್ರಸ್ತಾಪ ಇಲ್ಲ- ಗೃಹಸಚಿವ ಡಾ.ಜಿ.ಪರಮೇಶ್ವರ್

Date:

Dr. G. Parameshwar ಮುಂಬರುವ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಪ ಚುನಾವಣೆಯಲ್ಲಿ ನಮ್ಮ ಹೈಕಮಾಂಡ್ ಅಭ್ಯರ್ಥಿಗಳನ್ನು ಹಾಕಿದ್ದಾರೆ. ಮೂರು ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ. ಬಿಜೆಪಿ- ಜೆಡಿಎಸ್ ಎನ್​ಡಿಎ ಅಂತ ಒಂದಾಗಿದ್ದರೂ ಸಹ ನಮ್ಮ ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ನಮ್ಮ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಯ ಮೂಲಕ ಜನಪರ ಕೆಲಸ ಮಾಡುತ್ತಿದೆ ಎಂದರು.
ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಾತನಾಡಿದರು.
ಶಿಗ್ಗಾವಿಯಲ್ಲಿ ಕಾಂಗ್ರೆಸ್ ಬಂಡಾಯದ ವಿಚಾರವಾಗಿ ಮಾತನಾಡಿ, ಶಿಗ್ಗಾವಿಯಲ್ಲಿ ಖಾದ್ರಿ ಅವರು ಹಿಂದೆ ಚುನಾವಣೆಗೆ ಸ್ಪರ್ಧೆ ಮಾಡಿದ್ದರು‌. ಈಗ ಅವರ ಮನವೊಲಿಸುವ ಕೆಲಸ ನಡೆಯುತ್ತಿದೆ. ಕಾಂಗ್ರೆಸ್​ನಲ್ಲಿ ಯಾವುದೇ ಗೊಂದಲವಿಲ್ಲ. ಶಿಗ್ಗಾವಿಯಲ್ಲೂ ಗೆಲ್ಲುತ್ತೇವೆ ಎಂದು ಹೇಳಿದರು.

ವಿಜಯಪುರದಲ್ಲಿ ವಕ್ಫ್ ಬೋರ್ಡ್ ರೈತರಿಗೆ ನೀಡುವ ನೋಟಿಸ್ ಕುರಿತು ರಾಜ್ಯ ಸರ್ಕಾರ ಪರಿಶೀಲನೆ ನಡೆಸಲಿದೆ ಎಂದು ಸಚಿವರು ತಿಳಿಸಿದರು.
Dr. G. Parameshwar ನೂತನ ಪೊಲೀಸ್ ಸಭಾಂಗಣ ಉದ್ಘಾಟಿಸಿದ ಗೃಹ ಸಚಿವ ಡಾ ಜಿ ಪರಮೇಶ್ವರ್
ಸಾಮಾಜಿಕ, ಆರ್ಥಿಕ ಗಣತಿ ಸಂಪುಟದಲ್ಲಿ ಮಂಡನೆ : ಆರ್ಥಿಕ, ಸಾಮಾಜಿಕ ಗಣತಿಯ ವರದಿಯನ್ನು ಮುಂದಿನ ಸಂಪುಟದಲ್ಲಿ ಮಂಡನೆ ಮಾಡಲಿದ್ದೇವೆ. ಸಂಪುಟದಲ್ಲಿ ವರದಿ ಮಂಡನೆಯಾದ ನಂತರ ಮುಂದೆ ಚರ್ಚೆ ನಡೆಯಲಿದೆ ಎಂದು ತಿಳಿಸಿದರು.

ವಿಮಾನ ನಿಲ್ದಾಣ ತಜ್ಞರ ವರದಿಯೇ ಅಂತಿಮ :

ಬೆಂಗಳೂರಿನಲ್ಲಿ ಮತ್ತೊಂದು ವಿಮಾನ ನಿಲ್ದಾಣ ನಿರ್ಮಾಣ ಇನ್ನೂ ಅಂತಿಮವಾಗಿಲ್ಲ. ವರದಿಯ ಆಧಾರದ ಮೇಲೆ ತೀರ್ಮಾನವಾಗಲಿದೆ. ಈ ಕುರಿತು ಡಿಜಿಸಿಎ ರವರು ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ನಾನು ತುಮಕೂರಿನಲ್ಲಿ ಮಾಡಬೇಕೆಂದು ಹೇಳುತ್ತೇನೆ. ಆದರೆ ತಜ್ಞರ ವರದಿಯೇ ಅಂತಿಮವಾಗಲಿದೆ ಎಂದು ಹೇಳಿದರು.

ಬೆಂಗಳೂರಿಗೆ ಶರಾವತಿ ನೀರು ಪ್ರಸ್ತಾಪ ಇಲ್ಲ :

ಶರಾವತಿ ನದಿ ನೀರು ಬೆಂಗಳೂರಿಗೆ ತೆಗೆದುಕೊಂಡು ಹೋಗುವ ಕುರಿತು ಹಿಂದೆ ನಾನು ಡಿಸಿಎಂ ಆದಾಗ ಚರ್ಚೆ ನಡೆಸಿದ್ದೆ. ಆದರೆ, ಅದರ ಕುರಿತು ಇನ್ನೂ ಅಂತಿಮವಾದ ತೀರ್ಮಾನವಾಗಿಲ್ಲ‌. ಅಂತಹ ಪ್ರಸ್ತಾಪ ಇನ್ನೂ ನಮ್ಮ ಮುಂದೆ ಇಲ್ಲ ಎಂದು ಸ್ಪಷ್ಟಪಡಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kodachadri Chits Pvt. Ltd ಗ್ರಾಹಕರೇ ಕೊಡಚಾದ್ರಿಚಿಟ್ಸ್ ನ ಹಿಂದಿರುವ ಶಕ್ತಿ- ಪರಶುರಾಮ್

Kodachadri Chits Pvt. Ltd ಕೊಡಚಾದ್ರಿ ಚಿಟ್ಸ್‌ನ ಯಶಸ್ಸಿನ ಹಿಂದಿನ ನಿಜವಾದ...

Rotary Club Shivamogga ಮಲೇರಿಯಾವನ್ನ ವೈಜ್ಞಾನಿಕ ಕ್ರಮಗಳಿಂದ ನಿರ್ಮೂಲನೆ ಮಾಡಲು ಸಾಧ್ಯ. ಈ ಕಾರ್ಯದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅನಿವಾರ್ಯ- ಡಾ.ಗುಡದಪ್ಪ ಕಸಬಿ

Rotary Club Shivamogga "ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳು ಉಲ್ಬಣಗೊಳ್ಳುವುದರಿಂದ ಸಾರ್ವಜನಿಕರಲ್ಲಿ...

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ...