Monday, May 4, 2026
Monday, May 4, 2026

ಸ್ಕೂಟಿ ಸಹಿತ ಮಣ್ಣಿನಡಿ ಸಿಲುಕಿದ ಮಹಿಳೆಯ ಜೀವ ರಕ್ಷಿಸಿದ ರಿಕ್ಷಾ ಚಾಲಕ

Date:

ಮಣ್ಣು ತುಂಬಿದ ಲಾರಿ ಮಗುಚಿ ಬಿದ್ದಾಗ ಮಣ್ಣಿನಡಿಗೆ ಬಿದ್ದು ಮೇಲೇಳಲಾಗದೆ ಒದ್ದಾಡುತ್ತಿದ್ದ ಮಹಿಳೆಯನ್ನು ಸಮಾಜ ಸೇವಕ, ರಿಕ್ಷಾ ಚಾಲಕರೊಬ್ಬರು ಸಕಾಲದಲ್ಲಿ ರಕ್ಷಿಸಿದ್ದಾರೆ.
ಬೈಂದೂರು ತಾಲೂಕಿನ ನಾಗೂರು ಉಪ್ರಳ್ಳಿ ಒಳ ರಸ್ತೆಯ ತಿರುವಿನಲ್ಲಿ ಮಣ್ಣು ತುಂಬಿದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಒಂದು ಬದಿಗೆ ವಾಲಿ ಮಗುಚಿ ಬಿದ್ದಿತ್ತು. ಅದೇ ಸಂದರ್ಭದಲ್ಲಿ ಲಾರಿಯ ಪಕ್ಕದಲ್ಲೇ ಮಹಿಳೆ ಚಲಾಯಿಸುತ್ತಿದ್ದ ಸ್ಕೂಟಿಯೊಂದು ಸಾಗುತ್ತಿತ್ತು. ಈ ಸ್ಕೂಟಿಯ ಮೇಲೆ ಲಾರಿ ಮಗುಚಿ ಬಿದ್ದು, ಲಾರಿಯಲ್ಲಿದ್ದ ಮಣ್ಣಿನ ಅಡಿಯಲ್ಲಿ ಸ್ಕೂಟಿ ಸಮೇತ ಸವಾರೆ, ಸ್ಥಳೀಯ ನಿವಾಸಿ ಆರತಿ ಶೆಟ್ಟಿ ಸಿಲುಕಿಕೊಂಡರು. ಲಾರಿ ಚಾಲಕನಿಗೆ ಹೊರಬರಲು ಸಾಧ್ಯವಾಗದೆ ಕ್ಯಾಬಿನ್‌ ಒಳಗಡೆಯೇ ಸಿಲುಕಿಕೊಂಡಿದ್ದರು.
ಅದೇ ದಾರಿಯಾಗಿ ರಿಕ್ಷಾ ಚಲಾಯಿಸಿಕೊಂಡು ಹೋಗುತ್ತಿದ್ದ ಸಮಾಜ ಸೇವಕ ಕೋಡಿ ಅಶೋಕ್‌ ಪೂಜಾರಿ ಅವರ ಕಣ್ಣೆದುರೇ ಘಟನೆ ನಡೆದಿದ್ದು, ಏನು ಮಾಡಬೇಕೆಂದು ತೋಚದೇ ಸಹಾಯಕ್ಕಾಗಿ ಕೂಗಿಕೊಂಡರು. ಯಾರ ಸುಳಿವೂ ಕಾಣದಾಗ ಮಣ್ಣಿನಲ್ಲಿ ಮುಖ ಸಂಪೂರ್ಣ ಮುಚ್ಚಿ ಹೋಗಿದ್ದ ಮಹಿಳೆಯನ್ನು ಕೈಗಳಿಂದಲೇ ಮಣ್ಣನ್ನು ಅಗೆದು ತೆಗೆದು ಯುವತಿಯ ತಲೆಯನ್ನು ಮಣ್ಣಿನಿಂದ ಮೊದಲು ಮೇಲಕ್ಕೆತ್ತಿದರು.ಅನಂತರ ಬಂದ ಸ್ಥಳೀಯರ ಸಹಕಾರದಿಂದ ಲಾರಿಯ ಮಣ್ಣಿನಡಿಯಿಂದ ಮಹಿಳೆಯನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ಕಳುಹಿಸಲಾಯಿತು. ಬಳಿಕ ಸ್ಕೂಟಿಯನ್ನು ತೆರವುಗೊಳಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...