Thursday, February 5, 2026
Thursday, February 5, 2026

Kannada Rajyotsava ಬೇರೆ ಭಾಷೆ ಕಲಿತರೂ ನಮ್ಮ ಕನ್ನಡದ ಆತ್ಮಾಭಿಮಾನ ಬೇಕು- ವೈ.ಜಿ.ಪುಟ್ಟಸ್ವಾಮಿ

Date:

Kannada Rajyotsava ಕನ್ನಡ ನಾಡು, ನುಡಿ, ಜಲದ ವಿಷಯದಲ್ಲಿ ಪ್ರತಿಯೊಬ್ಬ ಕನ್ನಡಿಗರು ಒಗ್ಗಟ್ಟಾಗಿರಬೇಕು ಎಂದು ಹಿರಿಯ ವಕೀಲ ವೈ.ಜಿ. ಪುಟ್ಟಸ್ವಾಮಿ ಹೇಳಿದರು.

ವಿದ್ಯುತ್ ನಗರದ ಡಾ. ಪುನೀತ್ ರಾಜ್‌ಕುಮಾರ್ ವೃತ್ತದಲ್ಲಿ ಪುನೀತ್ ರಾಜ್‌ಕುಮಾರ್ ಅಭಿಮಾನಿ ಬಳಗದಿಂದ ಹಮ್ಮಿಕೊಂಡ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನಾಡಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ರಾಜ್ಯಕ್ಕೆ ಕರ್ನಾಟಕವೆಂದು ಮರುನಾಮಕರಣಗೊಂಡು ಐವತ್ತು ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ಸರ್ಕಾರ ಸುವರ್ಣ ಸಂಭ್ರಮವನ್ನು ಆಚರಿಸುತ್ತಿದೆ. ಸ್ವಾಭಿಮಾನದ ಕೆಚ್ಚೆದೆ ಇರುವ ಕನ್ನಡಿಗರ ಹೋರಾಟ ಚರಿತ್ರೆಯ ಪುಟದಲ್ಲಿ ದಾಖಲಾಗಿದೆ.

ಮನೆಗಳಲ್ಲಿ ಯಾವುದೇ ಭಾಷೆಯನ್ನು ಮಾತನಾಡಿದರೂ ಸಹ ವ್ಯವಹಾರಿಕವಾಗಿ ಕನ್ನಡವನ್ನು ಬಳಸಬೇಕು. ಇತರೆ ಭಾಷೆಗಳ ಬಗ್ಗೆ ಗೌರವ ನೀಡುವ ಜೊತೆಗೆ ಯಾವುದೇ ಭಾಷೆಯನ್ನು ಕಲಿತರು ಸಹ ನೆಲದ ಭಾಷೆ ಕನ್ನಡದ ಬಗ್ಗೆ ಆತ್ಮಾಭಿಮಾನ ಹೊಂದಿರಬೇಕು ಎಂದರು.

Kannada Rajyotsava ಕರುನಾಡಿನ ಜನತೆಯಿಂದ ಪ್ರೀತಿಯಿಂದ ಕರೆಯಲ್ಪಡುತ್ತಿದ್ದ ಡಾ. ಪುನೀತ್ ರಾಜ್‌ಕುಮಾರ್ ಅವರು ನಮ್ಮೆನ್ನೆಲ್ಲ ಅಗಲಿ ಮೂರು ವರ್ಷಗಳು ಗತಿಸಿದೆ. ಆದರೂ, ಅಭಿಮಾನಿಗಳಲ್ಲಿ ಕಿಂಚಿತ್ತು ಅಭಿಮಾನ ಕಡಿಮೆಯಾಗದಿರುವುದು ಕಾಣಬಹುದು. ಅಪ್ಪು ಹೆಸರಿನಲ್ಲಿ ಅನೇಕ ಸಾಮಾಜಿಕ ಕಾರ್ಯಗಳು ನಿರಂತರವಾಗಿ ನಡೆಯುತ್ತಿರುವುದೇ ಸಾಕ್ಷಿ. ನಾಡಿನಲ್ಲಿ ಮತ್ತೊಮ್ಮೆ ಪುನೀತ್ ರಾಜ್‌ಕುಮಾರ್ ಹುಟ್ಟಿಬರಲಿ ಎಂಬುದು ಕೋಟ್ಯಂತರ ಕನ್ನಡಿಗರ ಆಸೆಯೂ ಆಗಿದೆ ಎಂದರು.

ಈ ಸಂದರ್ಭದಲ್ಲಿ ಗ್ರಾಪಂ ಮಾಜಿ ಉಪಾಧ್ಯಕ್ಷ ಕೃಷ್ಣಮೂರ್ತಿ ಕೊಡಕಣಿ, ಉಪನ್ಯಾಸಕ ಎನ್.ಎಚ್. ಲಿಂಗೇಶ್, ಮಲ್ಲಿಕಾರ್ಜುನ ಟ್ರ್ಯಾಕ್ಟರ್, ಪುನೀತ್ ರಾಜ್‌ಕುಮಾರ್ ಅಭಿಮಾನಿ ಬಳಗದ ಎಸ್. ಹರೀಶ್, ಅರುಣ್, ನಟೇಶ್, ಆರ್. ಕೃಷ್ಣಮೂರ್ತಿ, ಮನೋಜ್, ಗಂಧರ್ವ, ಇಬ್ರಾಹಿಂ, ಸಂತೋಷ, ಪ್ರಭಾಕರ, ರಾಜಪ್ಪ, ರಾಜೀವ್, ಪ್ರವೀಣ್, ರಾಘವೇಂದ್ರ ಸೇರಿದಂತೆ ಇತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...