Monday, March 23, 2026
Monday, March 23, 2026

Kannada Rajyotsava ಬೇರೆ ಭಾಷೆ ಕಲಿತರೂ ನಮ್ಮ ಕನ್ನಡದ ಆತ್ಮಾಭಿಮಾನ ಬೇಕು- ವೈ.ಜಿ.ಪುಟ್ಟಸ್ವಾಮಿ

Date:

Kannada Rajyotsava ಕನ್ನಡ ನಾಡು, ನುಡಿ, ಜಲದ ವಿಷಯದಲ್ಲಿ ಪ್ರತಿಯೊಬ್ಬ ಕನ್ನಡಿಗರು ಒಗ್ಗಟ್ಟಾಗಿರಬೇಕು ಎಂದು ಹಿರಿಯ ವಕೀಲ ವೈ.ಜಿ. ಪುಟ್ಟಸ್ವಾಮಿ ಹೇಳಿದರು.

ವಿದ್ಯುತ್ ನಗರದ ಡಾ. ಪುನೀತ್ ರಾಜ್‌ಕುಮಾರ್ ವೃತ್ತದಲ್ಲಿ ಪುನೀತ್ ರಾಜ್‌ಕುಮಾರ್ ಅಭಿಮಾನಿ ಬಳಗದಿಂದ ಹಮ್ಮಿಕೊಂಡ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನಾಡಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ರಾಜ್ಯಕ್ಕೆ ಕರ್ನಾಟಕವೆಂದು ಮರುನಾಮಕರಣಗೊಂಡು ಐವತ್ತು ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ಸರ್ಕಾರ ಸುವರ್ಣ ಸಂಭ್ರಮವನ್ನು ಆಚರಿಸುತ್ತಿದೆ. ಸ್ವಾಭಿಮಾನದ ಕೆಚ್ಚೆದೆ ಇರುವ ಕನ್ನಡಿಗರ ಹೋರಾಟ ಚರಿತ್ರೆಯ ಪುಟದಲ್ಲಿ ದಾಖಲಾಗಿದೆ.

ಮನೆಗಳಲ್ಲಿ ಯಾವುದೇ ಭಾಷೆಯನ್ನು ಮಾತನಾಡಿದರೂ ಸಹ ವ್ಯವಹಾರಿಕವಾಗಿ ಕನ್ನಡವನ್ನು ಬಳಸಬೇಕು. ಇತರೆ ಭಾಷೆಗಳ ಬಗ್ಗೆ ಗೌರವ ನೀಡುವ ಜೊತೆಗೆ ಯಾವುದೇ ಭಾಷೆಯನ್ನು ಕಲಿತರು ಸಹ ನೆಲದ ಭಾಷೆ ಕನ್ನಡದ ಬಗ್ಗೆ ಆತ್ಮಾಭಿಮಾನ ಹೊಂದಿರಬೇಕು ಎಂದರು.

Kannada Rajyotsava ಕರುನಾಡಿನ ಜನತೆಯಿಂದ ಪ್ರೀತಿಯಿಂದ ಕರೆಯಲ್ಪಡುತ್ತಿದ್ದ ಡಾ. ಪುನೀತ್ ರಾಜ್‌ಕುಮಾರ್ ಅವರು ನಮ್ಮೆನ್ನೆಲ್ಲ ಅಗಲಿ ಮೂರು ವರ್ಷಗಳು ಗತಿಸಿದೆ. ಆದರೂ, ಅಭಿಮಾನಿಗಳಲ್ಲಿ ಕಿಂಚಿತ್ತು ಅಭಿಮಾನ ಕಡಿಮೆಯಾಗದಿರುವುದು ಕಾಣಬಹುದು. ಅಪ್ಪು ಹೆಸರಿನಲ್ಲಿ ಅನೇಕ ಸಾಮಾಜಿಕ ಕಾರ್ಯಗಳು ನಿರಂತರವಾಗಿ ನಡೆಯುತ್ತಿರುವುದೇ ಸಾಕ್ಷಿ. ನಾಡಿನಲ್ಲಿ ಮತ್ತೊಮ್ಮೆ ಪುನೀತ್ ರಾಜ್‌ಕುಮಾರ್ ಹುಟ್ಟಿಬರಲಿ ಎಂಬುದು ಕೋಟ್ಯಂತರ ಕನ್ನಡಿಗರ ಆಸೆಯೂ ಆಗಿದೆ ಎಂದರು.

ಈ ಸಂದರ್ಭದಲ್ಲಿ ಗ್ರಾಪಂ ಮಾಜಿ ಉಪಾಧ್ಯಕ್ಷ ಕೃಷ್ಣಮೂರ್ತಿ ಕೊಡಕಣಿ, ಉಪನ್ಯಾಸಕ ಎನ್.ಎಚ್. ಲಿಂಗೇಶ್, ಮಲ್ಲಿಕಾರ್ಜುನ ಟ್ರ್ಯಾಕ್ಟರ್, ಪುನೀತ್ ರಾಜ್‌ಕುಮಾರ್ ಅಭಿಮಾನಿ ಬಳಗದ ಎಸ್. ಹರೀಶ್, ಅರುಣ್, ನಟೇಶ್, ಆರ್. ಕೃಷ್ಣಮೂರ್ತಿ, ಮನೋಜ್, ಗಂಧರ್ವ, ಇಬ್ರಾಹಿಂ, ಸಂತೋಷ, ಪ್ರಭಾಕರ, ರಾಜಪ್ಪ, ರಾಜೀವ್, ಪ್ರವೀಣ್, ರಾಘವೇಂದ್ರ ಸೇರಿದಂತೆ ಇತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...

CM Siddaramaiah ಮೌಢ್ಯತೆ ವಿರುದ್ಧ ಸಿಡಿದೆದ್ದುಸಮಸಮಾಜದ ಕನಸು ಬಿತ್ತಿದ ಶರಣ ದೇವರ ದಾಸಿಂಯ್ಯ- ಸಿದ್ಧರಾಮಯ್ಯ

CM Siddaramaiah ಮೌಢ್ಯ, ಕಂದಾಚಾರಗಳ‌ ಹೆಸರಿನಲ್ಲಿ ತಳ ಸಮುದಾಯಗಳ ಜನರನ್ನು...