Wednesday, September 16, 2026
Wednesday, September 16, 2026

CM Siddaramaiah ಕರ್ನಾಟಕಕ್ಕೆ ಕೇಂದ್ರದಿಂದ ನ್ಯಾಯಯುತ ತೆರಿಗೆ ಪಾಲು ದೊರೆತಿಲ್ಲ- ಸಿದ್ದರಾಮಯ್ಯ

Date:

CM Siddaramaiah ತೆರಿಗೆ ಪಾಲು ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಸಮಸ್ಯೆ ಸರಿಪಡಿಸಿ ಎಂದರೂ ನ್ಯಾಯ ದೊರೆತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಶಾಲಾ ಶಿಕ್ಷಣ ಇಲಾಖೆ ಬೆಂಗಳೂರಿನ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವದಲ್ಲಿ ಧ್ವಜಾರೋಹಣ ನಡೆಸಿ ಅವರು ಮಾತನಾಡಿದರು.
15ನೇ ಹಣಕಾಸು ಆಯೋಗ ರಾಜ್ಯಕ್ಕೆ ಅನ್ಯಾಯ ಮಾಡಿದೆ. ಅದನ್ನು ಸರಿಪಡಿಸಿ ಎಂದು ಹಲವು ಬಾರಿ ಕೇಳಿಕೊಂಡರೂ ನ್ಯಾಯ ದೊರೆತಿಲ್ಲ. ನ್ಯಾಯಯುತವಾದ ಪಾಲನ್ನು ಕೊಡಿ ಎಂದು ಕೇಳುವ ಶಕ್ತಿ ಬೆಳೆಸಿಕೊಂಡಾಗ ಮಾತ್ರ, ಇದೆಲ್ಲಾ ಪರಿಹಾರವಾಗುತ್ತದೆ. ರಾಜ್ಯದಿಂದ ಸಂಸತ್‌ಗೆ ಆಯ್ಕೆಯಾದವರು ಈ ಅನ್ಯಾಯದ ವಿರುದ್ದ ಧ್ವನಿ ಎತ್ತಬೇಕು ಎಂದರು.
CM Siddaramaiah ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ಅದನ್ನುಒಪ್ಪಿಕೊಂಡಿದ್ದೇವೆ. ಸಂವಿಧಾನವನ್ನೂ ಒಪ್ಪಿಕೊಂಡಿದ್ದೇವೆ. ಹಾಗೆಂದು ನಮಗೆ ಅನ್ಯಾಯವಾದಾಗ ಅದನ್ನು ಎದರಿಸದೆ ಇರಲಾಗದು. ನಮ್ಮ ಹಕ್ಕುಗಳ ರಕ್ಷಣೆಗಾಗಿ ಹೋರಾಟ ಮಾಡಲೇಬೇಕು. ಕರ್ನಾಟಕಕ್ಕೆ ದೊರೆಯಬೇಕಾದ ತೆರಿಗೆ ಪಾಲನ್ನು ಕೇಳಿದರೆ, ಅದಕ್ಕೆ ರಾಜಕೀಯ ಬೆರೆಸುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
ನಾವು 4 ಲಕ್ಷ ಕೋಟಿಗೂ ಹೆಚ್ಚು ತೆರಿಗೆ ಕೊಟ್ಟರೂ ಪಡೆಯುತ್ತಿರುವುದು ಕೇವಲ 50-60 ಸಾವಿರ ಕೋಟಿ ಮಾತ್ರ. ಅಂದರೆ, 1ರೂ.ಗೆ 14-15 ಪೈಸೆ ಮಾತ್ರ ನಮಗೆ ವಾಪಸ್ ಬರುತ್ತಿದೆ. ನಾವು ಮುಂದುವರೆದ ರಾಜ್ಯ ಎಂದು ತೆರಿಗೆ ಪಾಲಿನಲ್ಲಿ ಅನ್ಯಾಯ ಮಾಡುತ್ತಿದ್ದಾರೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...