Sunday, August 2, 2026
Sunday, August 2, 2026

Department of School Education and Literacy ನ. 14.ಪ್ರೌಢಶಾಲಾ ವಿದ್ಯಾರ್ಥಿಗಳ ರಾಜ್ಯಮಟ್ಟದ ಯುವ ಅಣಕು ಸಂಸತ್ ಸ್ಪರ್ಧೆಯ ಬಹುಮಾನ ವಿತರಣೆ

Date:

Department of School Education and Literacy ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆ ಇವರ ಸಹಯೋಗದೊಂದಿಗೆ ಆಯೋಜಿಸಲಾದ 2024-25 ನೇ ಸಾಲಿನ ಪ್ರೌಢಶಾಲಾ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಯುವ ಅಣಕು ಸಂಸತ್ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭವನ್ನು ನ.14 ರ ಮಧ್ಯಾಹ್ನ 2.30 ಕ್ಕೆ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ.
Department of School Education and Literacy ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪನವರ ಗೌರವ ಘನ ಉಪಸ್ಥಿತಿ ಇರಲಿದ್ದು ನ್ಯಾಯ ಮತ್ತು ಮಾನವ ಹಕ್ಕುಗಳ ಹಾಗೂ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರಾದ ಡಾ.ಹೆಚ್.ಕೆ.ಪಾಟೀಲ್ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಶಾಸಕರು ಹಾಗೂ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ದಿ ನಿಗಮ/ಲ್ಯಾಂಡ್ ಆರ್ಮಿ ಅಧ್ಯಕ್ಷರಾದ ಬಿ.ಕೆ.ಸಂಗಮೇಶ್ವರ್, ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತದ ಅಧ್ಯಕ್ಷರಾದ ಬಿ.ಕೆ.ಗೋಪಾಲಕೃಷ್ಣ ಬೇಳೂರು ಇವರ ಗೌರವ ಉಪಸ್ಥಿತಿ ಇರಲಿದೆ.
ಅಧ್ಯಕ್ಷತೆಯನ್ನು ಶಾಸಕರಾದ ಎಸ್.ಎನ್.ಚನ್ನಬಸಪ್ಪ ವಹಿಸಲಿದ್ದು, ಸಂಸದರು, ವಿಧಾನಸಭಾ, ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರದ ಅಧ್ಯಕ್ಷರು, ಅಧಿಕಾರಿಗಳು, ಜಿಲ್ಲಾಧಿಕಾರಿಗಳು, ಜಿ.ಪಂ.ಸಿಇಓ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಪಾಲಿಕೆ ಆಯುಕ್ತರು, ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಪಾಲ್ಗೊಳ್ಳುವರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...