Wednesday, December 17, 2025
Wednesday, December 17, 2025

Karnataka Janapada Academy 2023 ನೇ ವಾರ್ಷಿಕ ಜಾನಪದ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Date:

Karnataka Janapada Academy 30 ಜಿಲ್ಲೆಗಳ 30 ಕಲಾವಿದರಿಗೆ ವಾರ್ಷಿಕ ಗೌರವ, ಇಬ್ಬರಿಗೆ ಜಾನಪದ ತಜ್ಞ ಪ್ರಶಸ್ತಿ, ಐವರಿಗೆ ಪುಸ್ತಕ ಬಹುಮಾನವನ್ನು ಕರ್ನಾಟಕ ಜಾನಪದ ಅಕಾಡೆಮಿ ಪ್ರಕಟಿಸಿದೆ.

ವಾರ್ಷಿಕ ಗೌರವಕ್ಕೆ ಆಯ್ಕೆಯಾದವರು: ಬೆಂಗಳೂರು ನಗರ ಜಿಲ್ಲೆಯ ಕೆ.ಎಂ.ರಾಮಯ್ಯ (ಏಕತಾರಿ, ತಂಬೂರಿ), ಬೆಂಗಳೂರು ಗ್ರಾಮಾಂತರದ ಓಬಮ್ಮ (ಸೋಬಾನೆ), ರಾಮನಗರ ಜಿಲ್ಲೆ ರಂಗಯ್ಯ (ಪಟ ಕುಣಿತ), ಕೋಲಾರದ ತೋಪಣ್ಣ ಮಂಚಂಡಹಳ್ಳಿ (ಕೀಲುಕುದುರೆ), ಚಿಕ್ಕಬಳ್ಳಾಪುರದ ದೊಡ್ಡಕೂರ್ಲಪ್ಪ (ತಮಟೆ ವಾದನ), ತುಮಕೂರು ಜಿಲ್ಲೆಯ ಕದರಮ್ಮ (ಜನಪದ ಹಾಡು), Karnataka Janapada Academy ದಾವಣಗೆರೆ ಜಿಲ್ಲೆಯ ಕಾಟಮ್ಮ (ಕಥನ ಕಾವ್ಯ), ಚಿತ್ರದುರ್ಗದ ಸಿರಿಯಮ್ಮ (ಮಹಾಕಾವ್ಯ), ಶಿವಮೊಗ್ಗ ಜಿಲ್ಲೆ ಟೀಕಪ್ಪ (ಡೊಳ್ಳು ಕುಣಿತ), ಕೊಡಗು ಜಿಲ್ಲೆಯ ದೇವಕಿ ಕೆ.ಸಿ. (ಊರ್ಟಿಕೋಟ್‌), ಮಂಡ್ಯದ ಗುರುಬಸವಯ್ಯ (ತಂಬೂರಿಪದ), ಹಾಸನದ ವೀರಭದ್ರಯ್ಯ (ತತ್ವಪದ), ಚಿಕ್ಕಮಗಳೂರಿನ ನಾಗರಾಜಪ್ಪ ವೈ.ಪಿ. (ಕರಡಿಗೆ ಕಾವ್ಯ), ಮೈಸೂರಿನ ಗುರುಸಿದ್ದಯ್ಯ (ತಂಬೂರಿಪದ), ಉಡುಪಿಯ ಅಪ್ಪಿ (ಜನಪದ ಸೂಲಗಿತ್ತಿ), ದಕ್ಷಿಣ ಕನ್ನಡದ ಲೀಲಾವತಿ (ನಾಟಿವೈದ್ಯೆ), ಚಾಮರಾಜನಗರದ ಗೌರಮ್ಮ (ಸೋಬಾನೆಪದ), ಬೆಳಗಾವಿಯ ಶಿವನಪ್ಪ ಚಂದರಗಿ (ಡೊಳ್ಳುಕುಣಿತ), ಬಾಗಲಕೋಟೆಯ ಹನಮಂತ ವೆಂಕಪ್ಪ ಸುಗತೇಕರ (ಗೊಂದಳಿಪದ), ವಿಜಯಪುರದ ಇಮಾಂಬಿ ಇಮಾಮಸಾಬ (ತತ್ವಪದ), ಗದಗದ ಬಸಪ್ಪ ಹಡಗಲಿ (ಗೀಗೀ ಪದ), ಬಳ್ಳಾರಿಯ ದಳವಾಯಿ ಚಿತ್ತಪ್ಪ (ಜನಪದ ಮಹಾಕಾವ್ಯ), ಹಾವೇರಿಯ ಸಾವಕ್ಕಾ ಓಲೇಕಾರ (ಸೋಬಾನೆ, ಸಂಪ್ರಾದಯ ಪದ), ಉತ್ತರ ಕನ್ನಡದ ಈರಯ್ಯ ಮೊಗೇರ (ಕಾರಿನ್‌ಮನೆ ಕುಣಿತ, ಹೌಂದೇರಾಯನ ಕುಣಿತ), ಕಲಬುರಗಿ ಅಕ್ಕಮ್ಮ (ಸಂಪ್ರದಾಯ ಪದ), ಬೀದರ್‌ನ ಏಸಪ್ಪಾ (ಶಹನಾಯಿ), ರಾಯಚೂರಿನ ಶಾಂತಮ್ಮ (ಬುರ‍್ರಕಥೆ), ಕೊಪ್ಪಳದ ರೇವಣಪ್ಪ (ಡೊಳ್ಳಿನ ಹಾಡು, ಕುಣಿತ), ಧಾರವಾಡದ ರಾಮಪ್ಪ ಬಸವಂತಪ್ಪ ಮೂಲಗಿ (ಹಂತಿಪದ), ಯಾದಗಿರಿಯ ಅಮಯ್ಯಸ್ವಾಮಿ ಹಿರೇಮಠ (ಭಜನೆ) ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಪ್ರಶಸ್ತಿ ವಿಜೇತರು ತಜ್ಞ ಪ್ರಶಸ್ತಿ: ಜೀ.ಶಂ.ಪ ತಜ್ಞ ಪ್ರಶಸ್ತಿಗೆ ದಕ್ಷಿಣ ಕನ್ನಡದ ಕೆ. ಚಿನ್ನಪ್ಪ ಗೌಡ ಹಾಗೂ ಬಿ.ಎಸ್‌.ಗದ್ದಗಿಮಠ ತಜ್ಞ ಪ್ರಶಸ್ತಿಗೆ ವಿಜಯನಗರದ ಮಂಜುನಾಥ ಬೇವಿನಕಟ್ಟೆ ಅವರನ್ನು ಆಯ್ಕೆ ಮಾಡಲಾಗಿದೆ

Karnataka Janapada Academy ಪುಸ್ತಕ ಬಹುಮಾನ: 2022ರ ಸಾಲಿನಲ್ಲಿ ಬೆಂಗಳೂರು ಬಿ.ಎಸ್‌.ಸ್ವಾಮಿ ಅವರ “ಜಾನಪದ ಲೇಖನ ಗುಚ್ಚ”, ಬೆಂಗಳೂರು ಕುರುವ ಬಸವರಾಜು ಅವರ “ಭೌತಿಕ ವಸ್ತು ವಿಜ್ಞಾನ ಜಾನಪದ ಮತ್ತು ವಸ್ತು ಸಂಗ್ರಹಾಲಯಗಳ ಕುರಿತ ಲೇಖನಗಳು”, ನಾಗ ಎಚ್‌.ಹುಬ್ಳಿ ಜಾರ್ಖಂಡ್‌ ಅವರ “ಆದಿವಾಸಿ ಸಂಸ್ಕೃತಿ”, 2023ನೇ ಸಾಲಿನಲ್ಲಿ ಮೈಸೂರಿನ ವ.ನಂ.ಶಿವರಾಮು ಅವರ “ಜನಪದ–ಜಾನಪದ ಮತ್ತು ಕ್ಷೇತ್ರಕಾರ್ಯ” ಬೆಂಗಳೂರಿನ ವಿಜಯಶ್ರೀ ಸಬರದ ಅವರ “ಸಬರದ ಮತ್ತು ಜಾನಪದ” ಕೃತಿಗಳನ್ನು ಪುಸ್ತಕ ಬಹುಮಾನಕ್ಕೆ ಆಯ್ಕೆ ಮಾಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Madhu Bangappa ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ- ಮಧು ಬಂಗಾರಪ್ಪ

Madhu Bangappa ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ...