Thursday, March 19, 2026
Thursday, March 19, 2026

VISL Bhadravati ಭದ್ರಾವತಿ ವಿಐಎಸ್ ಎಲ್ ನಲ್ಲಿ ಜಾಗೃತಾ ತಿಳುವಳಿಕೆ ಸಪ್ತಾಹ

Date:

VISL Bhadravati ಕೇಂದ್ರ ಜಾಗೃತಾ ಆಯೋಗ ಮತ್ತು ಸೈಲ್ ಕಾಪೋರೇಟ್ ವಿಜಿಲೆನ್ಸ್ನ ನಿರ್ದೇಶನದಂತೆ ಈ ವರ್ಷದ ಜಾಗೃತಾ ತಿಳುವಳಿಕೆ ಸಪ್ತಾಹ-೨೦೨೪ನ್ನು “ರಾಷ್ಟ್ರದ ಏಳಿಗೆಗಾಗಿ ಪ್ರಾಮಾಣಿಕತೆಯ ಸಂಸ್ಕೃತಿ“ ಎಂಬ ಧ್ಯೇಯವಾಕ್ಯದೊಂದಿಗೆ ೨೮ನೇ ಅಕ್ಟೋಬರ್ ೨೦೨೪ ರಿಂದ ೩ನೇ ನವೆಂಬರ್, ೨೦೨೪ರ ವರೆಗೆ ಆಚರಿಸಲಾಯಿತು.

ಜಾಗೃತಾ ತಿಳುವಳಿಕೆ ಸಪ್ತಾಹದ ಸಮಾರೋಪ ಸಮಾರಂಭವನ್ನು ೪ನೇ ನವೆಂಬರ್, ೨೦೨೪ ರಂದು ಶಾರದಾ ಮಂದಿರ, ಭದ್ರಾವತಿಯಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಶ್ರೀ ಬಿ.ಎಲ್. ಚಂದ್ವಾನಿ, ಕಾರ್ಯಪಾಲಕ ನಿರ್ದೇಶಕರು ಮತ್ತು ಗೌರವಾನ್ವಿತ ಅತಿಥಿಗಳಾದ ಶ್ರೀ ಕೆ.ಎಸ್. ಸುರೇಶ್, ಮುಖ್ಯ ಮಹಾಪ್ರಬಂಧಕರು (ಸ್ಥಾವರ), ಶ್ರೀ ರಘುನಾಥ ಬಿ. ಅಷ್ಟಪುತ್ರೆ, ಮಹಾಪ್ರಬಂಧಕರು (ವಿಜಿಲೆನ್ಸ್ ಮತ್ತು ಎ.ಸಿ.ವಿ.ಓ) ಶ್ರೀ ಕೆ.ಬಿ. ಮಲ್ಲಿಕಾರ್ಜುನ, ಉಪಾಧ್ಯಕ್ಷರು, ವಿಐಎಸ್‌ಎಲ್ ಕಾರ್ಮಿಕರ ಸಂಘ ಮತ್ತು ಶ್ರೀ ವಿಕಾಸ್ ಬಸೇರ್, ಪ್ರಧಾನ ಕಾರ್ಯದರ್ಶಿಗಳು, ವಿಐಎಸ್‌ಎಲ್ ಅಧಿಕಾರಿಗಳ ಸಂಘ ಇವರುಗಳು ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಶ್ರೀ ಸಿ. ಲಕ್ಷ್ಮಿಕಾಂತ, ಕಿರಿಯ ಪ್ರಬಂಧಕರು (ಮಿಲ್ಸ್ ಮತ್ತು ಆರ್.ಟಿ.ಎಸ್) ರವರು ಪ್ರಾರ್ಥನಾಗೀತೆಯನ್ನು ಹಾಡಿದರು. ಸೈಂಟ್ ಚಾರ್ಲ್ಸ್ ಶಾಲೆಯ ೩ನೇ ತರಗತಿ ವಿಧ್ಯಾರ್ಥಿನಿ ಕುಮಾರಿ ಪಾವನಿ ಎಮ್. ನಾಯಕ್ ತನ್ನ ಭರತನಾಟ್ಯದಿಂದ ಪ್ರೇಕ್ಷಕರನ್ನ ಬೆರಗುಗೊಳಿಸಿದಳು.

ವೃತ್ತಿ ಬದುಕು ಮತ್ತು ವೈಯುಕ್ತಿಕ ಬದುಕಿನಲ್ಲಿ ಪ್ರಾಮಾಣಿಕತೆ, ನೀತಿ ಮತ್ತು ಮೌಲ್ಯಗಳ ಮಹತ್ವ ಸಾರುವ “ಸತ್ಯ-ನಿಷ್ಠೆ” ಎಂಬ ನಾಟಕವನ್ನು ಅನನ್ಯ ಶಾಲೆಯ ಮಕ್ಕಳು ಅದ್ಭುತವಾಗಿ ಪ್ರದರ್ಶಿಸಿದರು.

ಶ್ರೀ ರಘುನಾಥ ಬಿ. ಅಷ್ಟಪುತ್ರೆ, ಮಹಾಪ್ರಬಂಧಕರು (ವಿಜಿಲೆನ್ಸ್ ಮತ್ತು ಎ.ಸಿ.ವಿ.ಓ) ರವರು ಈ ವರ್ಷದ ಜಾಗೃತಾ ತಿಳುವಳಿಕೆ ಸಪ್ತಾಹ-೨೦೨೪ ರ ಅಂಗವಾಗಿ ಹಮ್ಮಿಕೊಂಡಿದ್ದ ೧೮೨ ಉದ್ಯೋಗಿಗಳಿಗೆ ತರಬೇತಿ, ಮಾರುಕಟ್ಟೆ ಇಲಾಖೆ ಆಯೋಜಿಸಿದ್ದ ಗ್ರಾಹಕರ ಸಭೆ, ನೈತಿಕ ಉಧ್ಯಾನವನ ಸ್ವಚ್ಛತೆ ಮುಂತಾದ ಚಟುವಟಿಕೆಗಳ ವಿವರವಾದ ವರದಿಯನ್ನು ಮಂಡಿಸಿದರು. ಜಾಗೃತಾ ತಿಳುವಳಿಕೆ ಸಪ್ತಾಹ-೨೦೨೪ರ ಯಶಸ್ಸಿಗೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಕಾರಣರಾದ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದರು.

VISL Bhadravati ಶ್ರೀ ಕೆ.ಎಸ್. ಸುರೇಶ್ ತಮ್ಮ ಭಾಷಣದಲ್ಲಿ, ನಮ್ಮ ಬಾಲ್ಯದಿಂದಲೇ ರೂಢಿಸಿಕೊಳ್ಳಬೇಕಿರುವ, ಜೀವನದಲ್ಲಿ ಅತಿಮುಖ್ಯವಾದ ಪ್ರಾಮಾಣಿಕತೆ, ನೀತಿ, ಪಾರದರ್ಶಕತೆ ಮತ್ತು ಮೌಲ್ಯಗಳ ಮಹತ್ವ ಬಗ್ಗೆ ಒತ್ತಿಹೇಳಿದರು.

ವಿಐಎಸ್‌ಎಲ್‌ನ ಕಾರ್ಮಿಕರು, ಗುತ್ತಿಗೆ ಕಾರ್ಮಿಕರು ಭದ್ರಾವತಿಯ ಶಾಲಾ ವಿದ್ಯಾರ್ಥಿಗಳಿಗಾಗಿ ಪೊಸ್ಟರ್ ಡಿಜೈನ್, ಪ್ರಬಂಧ, ಆಶುಭಾಷಣ, ರಂಗೋಲಿ, ರಸಪ್ರಶ್ನೆ ಮತ್ತು ಚಿತ್ರಕಲೆಯಂತಹ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಶಸ್ತಿಗಳನ್ನು ನೀಡಲಾಯಿತು.

ವಿಐಎಸ್‌ಎಲ್ ಹಮ್ಮಿಕೊಂಡಿದ್ದ ಎಥಿಕ್ಸ್ ಕ್ಲಬ್ ಚಟುವಟಿಕೆಗಳಲ್ಲಿ ಅನನ್ಯ ಶಾಲೆಯ ಶ್ರೀ ಬಿ.ಎಸ್. ಅನಿಲ್ ಕುಮಾರ್, ಕಾರ್ಯದರ್ಶಿ, ಶ್ರೀ ವೇಣುಗೋಪಾಲ್, ಆಡಳಿತಾಧಿಕಾರಿ, ಶ್ರೀ ಕಲ್ಲೇಶ್ ಕುಮಾರ್.ಕೆ, ಮುಖೋಪಾಧ್ಯಾರು ಮತ್ತು ಸಿಬ್ಬಂದಿಗಳು ನೀಡಿದ ಅವಿಸ್ಮರಣೀಯ ಸಹಾಯಕ್ಕಾಗಿ ನೆನಪಿನ ಕಾಣಿಕೆಯನ್ನು ನೀಡಿ ಗೌರವಿಸಲಾಯಿತು. ವಿಐಎಸ್‌ಎಲ್‌ನ ಉದ್ಯೋಗಿಗಳು ಮತ್ತು ಗುತ್ತಿಗೆ ಕಾರ್ಮಿಕರು ಬರೆದ ಪೊಸ್ಟರ್ ಮತ್ತು ಚಿತ್ರಗಳನ್ನು ಪ್ರದರ್ಶಿಸಲಾಗಿತ್ತು.

ವಿಜಿಲೆನ್ಸ್ ಇಲಾಖೆಯ ಶ್ರೀ ಕೇದಾರನಾಥ್ ನೆರೆದವರನ್ನು ಸ್ವಾಗತಿಸಿ, ಶ್ರೀ ಚೇತನ್ ತಡ್ಕಲ್ ವಂದಿಸಿ ಹಾಗೂ ಶ್ರೀ ಎಲ್. ಕುತಲನಾಥನ್, ಸಹಾಯಕ ಮಹಾಪ್ರಬಂಧಕರು ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...