Saturday, June 6, 2026
Saturday, June 6, 2026

CM Siddhramaiah ಮೂಡಾ ಬಗ್ಗೆ ಲೋಕಾಯುಕ್ತ ವಿಚಾರಣೆಯಲ್ಲಿ ಸೀಎಂ ಸಿದ್ಧರಾಮಯ್ಯ ಹೇಳಿದ್ದೇನು?

Date:

CM Siddhramaiah ಮುಡಾ ಪ್ರಕರಣ ಸಂಬಂಧ ಇಂದು( ಬುಧವಾರ) ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದೆ, ಅವರ ಪ್ರಶ್ನೆಗಳಿಗೆ ಸೂಕ್ತ ಉತ್ತರವನ್ನು ನೀಡಿದ್ದೇನೆ. ನನ್ನ ಮೇಲೆ ದುರುದ್ದೇಶದಿಂದ ಕೂಡಿದ ಸುಳ್ಳು ಪ್ರಕರಣ ಇದಾಗಿದ್ದು, ವಿಚಾರಣೆಯ ಸಂದರ್ಭದಲ್ಲಿ ವಾಸ್ತವಾಂಶ ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ಸ್ನೇಹಮಯಿ ಕೃಷ್ಣ ಅವರು ಕೋರಿದಂತೆ, ರಾಜ್ಯಪಾಲರ ಆದೇಶದಂತೆ ಲೋಕಾಯುಕ್ತ ವಿಚಾರಣೆಯನ್ನು ನಡೆಸಲಾಗಿದೆ. ಈಗ ಬಿಜೆಪಿ ನಾಯಕರು ಲೋಕಾಯುಕ್ತ ವಿಚಾರಣೆ ಬೇಡ, ಸಿಬಿಐಗೆ ವಹಿಸಬೇಕು ಎಂದು ತಗಾದೆ ತೆಗೆದರೆ ಅದು ವಿಚಾರಣೆಯ ವಿರುದ್ಧವಾಗಿದ್ದಾರೆ ಎಂಬ ಅರ್ಥವಲ್ಲವೇ? ಇದರಿಂದಲೇ ಅವರ ಎಲ್ಲಾ ಆರೋಪ ಸುಳ್ಳು ಎಂದು ಸ್ಪಷ್ಟವಾಗುತ್ತದೆ.

ಕೇಂದ್ರ ಸರ್ಕಾರದ ಅಧೀನದಲ್ಲಿ ಸಿಬಿಐ ಇದೆ. ಬಿಜೆಪಿಯವರು ಇದುವರೆಗೆ ಯಾವುದಾದರೂ ಹಗರಣವನ್ನು ಸಿಬಿಐ ಗೆ ವಹಿಸಿದ್ದಾರೆಯೇ? ಲೋಕಾಯುಕ್ತ ಒಂದು ಸ್ವತಂತ್ರ ತನಿಖಾ ಸಂಸ್ಥೆ. ಲೋಕಾಯುಕ್ತದಲ್ಲಿ ನಂಬಿಕೆಯಿಲ್ಲದ ಬಿಜೆಪಿಯವರಿಗೆ ಕಾನೂನಿನ ಬಗ್ಗೆಯೂ ಗೌರವವಿಲ್ಲ. ರಾಜ್ಯಪಾಲರು ಕೂಡ ಲೋಕಾಯುಕ್ತದಲ್ಲಿಯೇ ತನಿಖೆಯಾಗಬೇಕೆಂದು ಸೂಚಿಸಿದ್ದು, ಅದರಂತೆ ವಿಚಾರಣೆ ನಡೆಯುತ್ತಿದೆ.

CM Siddhramaiah ಮುಡಾದಿಂದ 14 ನಿವೇಶನಗಳು ಕಾನೂನೂಬದ್ಧವಾಗಿಯೇ ಹಂಚಿಕೆ ಆಗಿದೆ. ಬಿಜೆಪಿ – ಜೆಡಿಎಸ್ ನವರು ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ಈ ಸಂಬಂಧ ಲೋಕಾಯುಕ್ತ ವಿಚಾರಣೆಯಲ್ಲಿ ಇಂದು ಉತ್ತರವನ್ನು ನೀಡಿದ್ದೇನೆ. ತನಿಖೆಯನ್ನು ಕಾನೂನುರೀತ್ಯಾ ಮುಂದುವರೆಸಲಿದ್ದಾರೆ.

ಮುಡಾ ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ದಾಖಲೆ ನನ್ನ ಬಳಿಯಿಲ್ಲ ಹಾಗೂ ನನ್ನಿಂದ ಯಾವುದೇ ದಾಖಲೆ ಕೇಳಲಾಗಿಲ್ಲ. ಇಡೀ ಪ್ರಕರಣವೇ ಒಂದು ಷಡ್ಯಂತ್ರವಾಗಿರುವುದರಿಂದ ನ್ಯಾಯಾಲಯದಲ್ಲಿ ತೀರ್ಮಾನವಾಗುವವರೆಗೆ ನನ್ನ ರಾಜಕೀಯ ಜೀವನಕ್ಕೆ ಯಾವುದೇ ಕಪ್ಪು ಮಸಿ ಇಲ್ಲ. ನನ್ನ ಮೇಲೆ ಮಾಡಲಾಗಿರುವ ಸುಳ್ಳು ಆರೋಪಗಳಿಗೆ ನ್ಯಾಯಾಲಯದಲ್ಲಿ ತಕ್ಕ ಉತ್ತರವನ್ನು ನೀಡಲಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Akashavani Bhadravati ಜೂನ್ ತಿಂಗಳ ಪ್ರತೀ ಭಾನುವಾರ ಆಕಾಶವಾಣಿ ಭದ್ರಾವತಿ ಕೇಂದ್ರದ ಮೂಲಕ ” ಜೈಲು ಹಕ್ಕಿಗಳ ಗಾನಸುಧೆ” ಆಲಿಸಿ.

Akashavani Bhadravati ಭದ್ರಾವತಿ ಆಕಾಶವಾಣಿಯಲ್ಲಿ ಜೂನ್ 2026ರ ಪ್ರತಿ ಭಾನುವಾರ ಸಂಜೆ 4.00...

DK Shivakumar ಕೆಂಪೇಗೌಡ ದಿನಾಚರಣೆಯಂದು 15 ಲಕ್ಷ ಸಸಿನೆಡುವ ವಿಶೇಷ ಕಾರ್ಯಕ್ರಮ- ಸೀಎಂ ಡಿ.ಕೆ.ಶಿವಕುಮಾರ್

DK Shivakumar ಎಲ್ಲರೂ ಪರಿಸರವನ್ನು ಕಾಪಾಡುವ ಮೂಲಕ ರಾಜ್ಯವನ್ನು ಹಸಿರಾಗಿಸಬೇಕು. ಪ್ರತಿ ಮನೆಯಲ್ಲಿ...

World Environment Day ಪರಿಸರ ಮಾಲಿನ್ಯ ರಕ್ಷಣೆಗೆ ಕೃತಕ‌ ಬುದ್ಧಿಮತ್ತೆ ಬಳಕೆ ಅಗತ್ಯ- ಜಿ.ಎ.ಹಿರೇಮಠ್.

World Environment Day ಪರಿಸರ ಮಾಲಿನ್ಯದ ಮೂಲಗಳನ್ನು ಪತ್ತೆ ಹಚ್ಚಲು ಹಾಗೂ ನೈಜ,...