Wednesday, September 9, 2026
Wednesday, September 9, 2026

CM Siddhramaiah ಮೂಡಾ ಬಗ್ಗೆ ಲೋಕಾಯುಕ್ತ ವಿಚಾರಣೆಯಲ್ಲಿ ಸೀಎಂ ಸಿದ್ಧರಾಮಯ್ಯ ಹೇಳಿದ್ದೇನು?

Date:

CM Siddhramaiah ಮುಡಾ ಪ್ರಕರಣ ಸಂಬಂಧ ಇಂದು( ಬುಧವಾರ) ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದೆ, ಅವರ ಪ್ರಶ್ನೆಗಳಿಗೆ ಸೂಕ್ತ ಉತ್ತರವನ್ನು ನೀಡಿದ್ದೇನೆ. ನನ್ನ ಮೇಲೆ ದುರುದ್ದೇಶದಿಂದ ಕೂಡಿದ ಸುಳ್ಳು ಪ್ರಕರಣ ಇದಾಗಿದ್ದು, ವಿಚಾರಣೆಯ ಸಂದರ್ಭದಲ್ಲಿ ವಾಸ್ತವಾಂಶ ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ಸ್ನೇಹಮಯಿ ಕೃಷ್ಣ ಅವರು ಕೋರಿದಂತೆ, ರಾಜ್ಯಪಾಲರ ಆದೇಶದಂತೆ ಲೋಕಾಯುಕ್ತ ವಿಚಾರಣೆಯನ್ನು ನಡೆಸಲಾಗಿದೆ. ಈಗ ಬಿಜೆಪಿ ನಾಯಕರು ಲೋಕಾಯುಕ್ತ ವಿಚಾರಣೆ ಬೇಡ, ಸಿಬಿಐಗೆ ವಹಿಸಬೇಕು ಎಂದು ತಗಾದೆ ತೆಗೆದರೆ ಅದು ವಿಚಾರಣೆಯ ವಿರುದ್ಧವಾಗಿದ್ದಾರೆ ಎಂಬ ಅರ್ಥವಲ್ಲವೇ? ಇದರಿಂದಲೇ ಅವರ ಎಲ್ಲಾ ಆರೋಪ ಸುಳ್ಳು ಎಂದು ಸ್ಪಷ್ಟವಾಗುತ್ತದೆ.

ಕೇಂದ್ರ ಸರ್ಕಾರದ ಅಧೀನದಲ್ಲಿ ಸಿಬಿಐ ಇದೆ. ಬಿಜೆಪಿಯವರು ಇದುವರೆಗೆ ಯಾವುದಾದರೂ ಹಗರಣವನ್ನು ಸಿಬಿಐ ಗೆ ವಹಿಸಿದ್ದಾರೆಯೇ? ಲೋಕಾಯುಕ್ತ ಒಂದು ಸ್ವತಂತ್ರ ತನಿಖಾ ಸಂಸ್ಥೆ. ಲೋಕಾಯುಕ್ತದಲ್ಲಿ ನಂಬಿಕೆಯಿಲ್ಲದ ಬಿಜೆಪಿಯವರಿಗೆ ಕಾನೂನಿನ ಬಗ್ಗೆಯೂ ಗೌರವವಿಲ್ಲ. ರಾಜ್ಯಪಾಲರು ಕೂಡ ಲೋಕಾಯುಕ್ತದಲ್ಲಿಯೇ ತನಿಖೆಯಾಗಬೇಕೆಂದು ಸೂಚಿಸಿದ್ದು, ಅದರಂತೆ ವಿಚಾರಣೆ ನಡೆಯುತ್ತಿದೆ.

CM Siddhramaiah ಮುಡಾದಿಂದ 14 ನಿವೇಶನಗಳು ಕಾನೂನೂಬದ್ಧವಾಗಿಯೇ ಹಂಚಿಕೆ ಆಗಿದೆ. ಬಿಜೆಪಿ – ಜೆಡಿಎಸ್ ನವರು ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ಈ ಸಂಬಂಧ ಲೋಕಾಯುಕ್ತ ವಿಚಾರಣೆಯಲ್ಲಿ ಇಂದು ಉತ್ತರವನ್ನು ನೀಡಿದ್ದೇನೆ. ತನಿಖೆಯನ್ನು ಕಾನೂನುರೀತ್ಯಾ ಮುಂದುವರೆಸಲಿದ್ದಾರೆ.

ಮುಡಾ ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ದಾಖಲೆ ನನ್ನ ಬಳಿಯಿಲ್ಲ ಹಾಗೂ ನನ್ನಿಂದ ಯಾವುದೇ ದಾಖಲೆ ಕೇಳಲಾಗಿಲ್ಲ. ಇಡೀ ಪ್ರಕರಣವೇ ಒಂದು ಷಡ್ಯಂತ್ರವಾಗಿರುವುದರಿಂದ ನ್ಯಾಯಾಲಯದಲ್ಲಿ ತೀರ್ಮಾನವಾಗುವವರೆಗೆ ನನ್ನ ರಾಜಕೀಯ ಜೀವನಕ್ಕೆ ಯಾವುದೇ ಕಪ್ಪು ಮಸಿ ಇಲ್ಲ. ನನ್ನ ಮೇಲೆ ಮಾಡಲಾಗಿರುವ ಸುಳ್ಳು ಆರೋಪಗಳಿಗೆ ನ್ಯಾಯಾಲಯದಲ್ಲಿ ತಕ್ಕ ಉತ್ತರವನ್ನು ನೀಡಲಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...