Thursday, March 19, 2026
Thursday, March 19, 2026

Karnataka Arya Vaishya Corporation ಕರ್ನಾಟಕ ಆರ್ಯವೈಶ್ಯ ನಿಗಮದಿಂದ ಅರಿವು ಶೈಶಕ್ಷಣಿಕ ಸಾಲಯೋಜನೆ ಆನ್ ಲೈನ್ ಅರ್ಜಿಗೆ ಆಹ್ವಾನ

Date:

Karnataka Arya Vaishya Corporation ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮವು 2024-25ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಿ.ಇ.ಟಿ/ಎನ್.ಇ.ಇ.ಟಿ. ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿ. ವ್ಯಾಸಂಗ ಮಾಡುವ ಆರ್ಯ ವೈಶ್ಯ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

ವಾರ್ಷಿಕ ರೂ. 1.00 ಲಕ್ಷಗಳ ಸಾಲವನ್ನು ಶೇ. 2ರ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುವುದು. ವ್ಯಾಸಂಗ ಪೂರ್ಣಗೊಂಡ ನಂತರ 4 ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು. ಅರ್ಜಿದಾರರು 18 ದಿಂದ 35 ವರ್ಷ ವಯೋಮಿತಿಯೊಳಗಿದ್ದು, ಕುಟುಂಬದ ವಾರ್ಷಿಕ ವರಮಾನ ರೂ. 6.00 ಲಕ್ಷಗಳ ಮಿತಿಯೊಳಗಿರಬೇಕು.

ಆಸಕ್ತರು ವೆಬ್‌ಸೈಟ್ www.kacdc.karnataka.gov.in ರಲ್ಲಿ ದಿ: 15/12/2024 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿರುತ್ತಾರೆ.

Karnataka Arya Vaishya Corporation ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ 9448451111 ನ್ನು ಅಥವಾ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ, ಭಾಗ್ಯನಿಲಯ, ಭಂಡಾರಿ ಗ್ಯಾಸ್ ಏಜೆನ್ಸಿ ಹತ್ತಿರ, 1ನೇ ಪ್ಯಾರಲಲ್ ರಸ್ತೆ, ಗಾಂಧಿನಗರ, ಶಿವಮೊಗ್ಗ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...