Friday, March 20, 2026
Friday, March 20, 2026

Bharat Scouts and Guides ಸ್ಕೌಟ್ಸ್ & ಗೈಡ್ಸ್ ಶಿಸ್ತಿನ ಸಂಸ್ಥೆ. ಅದರ ಬೆಳವಣಿಗೆಗೆ ಎಲ್ಲರೂ ಶ್ರಮಿಸೋಣ- ಸಿಇಓ ಹೇಮಂತ್

Date:

Bharat Scouts and Guides ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ಶಿಸ್ತಿನ ಸಂಸ್ಥೆಯಾಗಿದ್ದು, ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಶ್ರಮಿಸುತ್ತಿರುವ ಸಂಸ್ಥೆಯಾಗಿದೆ ಎಂದು ಜಿಪಂ ಸಿಇಒ ಹೇಮಂತ್ ಹೇಳಿದರು.
ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಸಂಸ್ಥಾಪನಾ ದಿನಾಚರಣೆ ಹಿನ್ನೆಲೆಯಲ್ಲಿ ಧ್ವಜ ಚೀಟಿ ಬಿಡುಗಡೆಗೊಳಿಸಿ ಮಾತನಾಡಿ, ಸಂಸ್ಥೆಯು ಅನೇಕ ರೀತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಎತ್ತರಕ್ಕೆ ಬೆಳೆಯುತ್ತಿದ್ದು, ಅದರ ಬೆಳವಣಿಗೆಗೆ ನಾವೆಲ್ಲರೂ ಕೈ ಜೋಡಿಸೋಣ, ನಿಮ್ಮೊಂದಿಗೆ ನಾನು ಸದಾ ಇರುತ್ತೇನೆ ಎಂದು ತಿಳಿಸಿದರು.
ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವಿನಾಶ್.ಸಿ ಧ್ವಜ ಚೀಟಿ ಬಿಡುಗಡೆ ಮಾಡಿ ಮಕ್ಕಳನ್ನುದ್ದೇಶಿಸಿ ಮಾತನಾಡಿ, ಸಂಸ್ಥಾಪನಾ ದಿನಾಚರಣೆ ಮಹತ್ವವನ್ನು ತಿಳಿಸುತ್ತ ಸ್ಕೌಟ್ಸ್ ಇತಿಹಾಸದ ಬಗ್ಗೆ ವಿವರಿಸಿದರು.
ಭಾರತದಲ್ಲಿ ಸ್ಕೌಟಿಂಗ್ ಗೈಡಿಂಗ್ ಬೆಳೆದು ಬಂದ ದಾರಿ ತಿಳಿಸಿ ಭಾರತಕ್ಕೆ ಸ್ವಾತಂತ್ರ್ಯ ಬರುವ ಮುನ್ನ ನ್ಯಾಷನಲ್ ಸ್ಕೌಟ್ ಅಸೋಸಿಯೇಷನ್, ಹಿಂದೂಸ್ತಾನ ಸ್ಕೌಟ್ಸ್ ಅಸೋಸಿಯೇಷನ್, ಗರ್ಲ್ ಗೈಡ್ ಅಸೋಸಿಯೇಷನ್ ಹೀಗೆ ಅನೇಕ ಸಂಘಟನೆಗಳಿದ್ದು, ಇವೆಲ್ಲವನ್ನು ಒಂದುಗೂಡಿ ಒಂದೇ ಸಂಘಟನೆ ಆಗಬೇಕೆಂದು ನಿರ್ಧರಿಸಿ ಪ್ರತಿಫಲವಾಗಿ 1950 ನವೆಂಬರ್ 7 ರಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಅಸ್ತಿತ್ವಕ್ಕೆ ಬಂದಿತು ಎಂದು ತಿಳಿಸಿದರು.
Bharat Scouts and Guides ಡಿಡಿಪಿಯು ಚಂದ್ರಪ್ಪ ಗುಂಡಪಲ್ಲಿ, ಡಿಡಿಪಿಐ ಎಸ್.ಆರ್.ಮಂಜುನಾಥ್ ಅವರು ಇಲಾಖೆ ಕಚೇರಿ ಆವರಣದಲ್ಲಿ ಧ್ವಜ ಚೀಟಿ ಬಿಡುಗಡೆ ಮಾಡಿ ಮಾತನಾಡಿದರು. ಎ.ವಿ.ರಾಜೇಶ್ ಮಾತನಾಡಿದರು. ಜಿಲ್ಲಾ ಆಯುಕ್ತ(ಸ್ಕೌಟ್ಸ್) ಎಸ್.ಜಿ.ಆನಂದ್ ಮತ್ತು ಜಿಲ್ಲಾ ಆಯುಕ್ತ ಕೆ.ರವಿ, ಜಿಲ್ಲಾ ಕಾರ್ಯದರ್ಶಿ ಕೆ.ವಿ.ಚಂದ್ರಶೇಖರಯ್ಯ, ಸಹ ಕಾರ್ಯದರ್ಶಿ ವೈ.ಆರ್.ವೀರೇಶಪ್ಪ, ಜಿಲ್ಲಾ ಸಾರ್ವಜನಿಕ ಸಂಪರ್ಕಾಧಿಕಾರಿ ಜಿ.ವಿಜಯಕುಮಾರ, ಜಿಲ್ಲಾ ಸಹಾಯಕ ಆಯುಕ್ತರು ಮಲ್ಲಿಕಾರ್ಜುನ ಕಾನೂರು, ಕೃಷ್ಣಸ್ವಾಮಿ, ಮೀನಾಕ್ಷಮ್ಮ, ಶಾಂತಮ್ಮ, ದಾಕ್ಷಾಯಿಣಿ ರಾಜಕುಮಾರ್, ನಗರದ ವಿವಿಧ ಶಾಲೆಯ 200 ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...