Saturday, June 6, 2026
Saturday, June 6, 2026

code of conduct election ಜಿಲ್ಲೆಯ ವಿವಿಧ “ಗ್ರಾಪಂ” ಚುನಾವಣೆ ನಿಮಿತ್ತ ಜಿಲ್ಲಾಡಳಿತದಿಂದ ಚುನಾವಣಾ ನೀತಿ ಸಂಹಿತೆ ಜಾರಿ- ಗುರುದತ್ತ ಹೆಗಡೆ

Date:

code of conduct election ಶಿವಮೊಗ್ಗ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದ್ದು ಕೆಳಕಂಡ ಗ್ರಾಮ ಪಂಚಾಯ್ತಿ, ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿ ಶಸ್ತ್ರ/ಆಯುಧಗಳನ್ನು ಚುನಾವಣಾ ಪ್ರಕ್ರಿಯೆ ಪೂರ್ಣ ಗೊಳ್ಳುವವರೆಗೆ ಸಮೀಪದ ಪೊಲೀಸ್ ಠಾಣೆಯಲ್ಲಿ ಠೇವಣಿ ಇರಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚಿಸಿದ್ದಾರೆ.

ರಾಜ್ಯ ಚುನಾವಣಾ
ಆಯೋಗವು ಶಿವಮೊಗ್ಗ ತಾಲ್ಲೂಕಿನ 32- ಕೋಟೆಗಂಗೂರು, ಸಾಗರ ತಾಲ್ಲೂಕಿನ 23-ಕುದರೂರು, ಭದ್ರಾವತಿ ತಾಲ್ಲೂಕಿನ 34-ಬಾರಂದೂರು, 40- ಮೈದೊಳಲು, 10-ಅರಹತೊಳಲು, 17-ಅರಕೆರೆ, ತೀರ್ಥಹಳ್ಳಿ ತಾಲ್ಲೂಕಿನ 9-ತೀರ್ಥಮತ್ತೂರು, ಹೊಸನಗರ ತಾಲ್ಲೂಕಿನ
4-ಎಂ ಗುಡ್ಡೆಕೊಪ್ಪ, ಶಿಕಾರಿಪುರ ತಾಲ್ಲೂಕಿನ 1-ಮಾರವಳ್ಳಿ, 13-ಹಿತ್ತಲ, 18-ಸುಣ್ಣದಕೊಪ್ಪ, 11-ತರಲಘಟ್ಟ, ಸೊರಬ ತಾಲ್ಲೂಕಿನ 22-ಹೊಸಬಾಳೆ, 5-ಜಡೆ, 2-ಭಾರಂಗಿ ಗ್ರಾಮ ಪಂಚಾಯ್ತಿ, ಪಟ್ಟಣ ಪಂಚಾಯ್ತಿಗಳ ವ್ಯಾಪ್ತಿಗಳಲ್ಲಿ ಚುನಾವಣೆ ನಡೆಸಲು ವೇಳಾಪಟ್ಟಿಯನ್ನು ಪ್ರಕಟಿಸಿದೆ. ಚುನಾವಣೆ ನೀತಿ ಸಂಹಿತೆ ನ. 06 ರಿಂದ 26 ರ ವರೆಗೆ ಜಾರಿಯಲ್ಲಿರುತ್ತದೆ.

ಚುನಾವಣಾ ನೀತಿ ಸಂಹಿತೆ ಮುಕ್ತಾಯಗೊಳ್ಳುವವರೆಗೆ ಮೇಲ್ಕಂಡ ಗ್ರಾಮ ಪಂಚಾಯ್ತಿ, ಪಟ್ಟಣ ಪಂಚಾಯ್ತಿಗಳ ವ್ಯಾಪ್ತಿಗಳಲ್ಲಿ ಆಯುಧಗಳನ್ನು ಹೊಂದಿರುವವರು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಶಸ್ತ್ರ/ಆಯುಧಗಳನ್ನು ಸಮೀಪದ ಪೊಲೀಸ್ ಠಾಣೆಯಲ್ಲಿ ಠೇವಣಿ ಮಾಡಬೇಕು.

code of conduct election ಈ ಶಸ್ತ್ರ/ಆಯುಧಗಳನ್ನು ಚುನಾವಣಾ ಪ್ರಕ್ರಿಯೆ ಮುಕ್ತಾಯವಾದ ನಂತರ ಚುನಾವಣೆಯ ಫಲಿತಾಂಶವನ್ನು ಘೋಷಿಸಿದ ಮೇಲೆ ಡಿಪಾಸಿಟ್ ಮಾಡಿದ ಪರವಾನಿಗೆದಾರರಿಗೆ ಹಿಂದಿರುಗಿಸಲಾಗುವುದು. ಚುನಾವಣೆಯು ಮುಕ್ತ ಹಾಗೂ ನ್ಯಾಯಯುತವಾಗಿ ನಡೆಯಬೇಕಾಗಿರುವುದರಿಂದ ಜಿಲ್ಲಾಡಳಿತವು ಕೈಗೊಂಡ ಕ್ರಮಕ್ಕೆ ಸಾರ್ವಜನಿಕರು ಸಹಕರಿಸಬೇಕಾಗಿ ಕೋರಿದ್ದಾರೆ.

ಸರ್ಕಾರಿ ಕರ್ತವ್ಯದಲ್ಲಿ ನಿರತರಾದ ರಕ್ಷಣಾ ಸಿಬ್ಬಂದಿಗಳಿಗೆ ಎಂ.ಪಿ.ಎಂ/ವಿ.ಐ.ಎಸ್.ಎಲ್ ಮತ್ತು ರಾಷ್ಟ್ರೀಕೃತ ಬ್ಯಾಂಕ್ ಇತ್ಯಾದಿಗಳಲ್ಲಿ ಭದ್ರತಾ ಕರ್ತವ್ಯದಲ್ಲಿರುವ ಆಯುಧ ಪರವಾನಿಗೆ ಹೊಂದಿರುವ ಸಿಬ್ಬಂದಿಗಳಿಗೆ ಈ ಆದೇಶವು ಅನ್ವಯಿಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Akashavani Bhadravati ಜೂನ್ ತಿಂಗಳ ಪ್ರತೀ ಭಾನುವಾರ ಆಕಾಶವಾಣಿ ಭದ್ರಾವತಿ ಕೇಂದ್ರದ ಮೂಲಕ ” ಜೈಲು ಹಕ್ಕಿಗಳ ಗಾನಸುಧೆ” ಆಲಿಸಿ.

Akashavani Bhadravati ಭದ್ರಾವತಿ ಆಕಾಶವಾಣಿಯಲ್ಲಿ ಜೂನ್ 2026ರ ಪ್ರತಿ ಭಾನುವಾರ ಸಂಜೆ 4.00...

DK Shivakumar ಕೆಂಪೇಗೌಡ ದಿನಾಚರಣೆಯಂದು 15 ಲಕ್ಷ ಸಸಿನೆಡುವ ವಿಶೇಷ ಕಾರ್ಯಕ್ರಮ- ಸೀಎಂ ಡಿ.ಕೆ.ಶಿವಕುಮಾರ್

DK Shivakumar ಎಲ್ಲರೂ ಪರಿಸರವನ್ನು ಕಾಪಾಡುವ ಮೂಲಕ ರಾಜ್ಯವನ್ನು ಹಸಿರಾಗಿಸಬೇಕು. ಪ್ರತಿ ಮನೆಯಲ್ಲಿ...

World Environment Day ಪರಿಸರ ಮಾಲಿನ್ಯ ರಕ್ಷಣೆಗೆ ಕೃತಕ‌ ಬುದ್ಧಿಮತ್ತೆ ಬಳಕೆ ಅಗತ್ಯ- ಜಿ.ಎ.ಹಿರೇಮಠ್.

World Environment Day ಪರಿಸರ ಮಾಲಿನ್ಯದ ಮೂಲಗಳನ್ನು ಪತ್ತೆ ಹಚ್ಚಲು ಹಾಗೂ ನೈಜ,...