Monday, December 15, 2025
Monday, December 15, 2025

DC Shivamogga ಜಿಲ್ಲೆಯ ಪಿಯು ವಿಜ್ಞಾನ ವಿಜ್ಞಾನ ವಿದ್ಯಾರ್ಥಿಗಳಿಗೆ ಜಿಲ್ಲಾ ಪಂಚಾಯತ್ ಸಿಇಓ ಎನ್.ಹೇಮಂತ್ ಮಾರ್ಗದರ್ಶನದಲ್ಲಿಎನ್ ಇಟಿ/ ಸಿಇಟಿ ಉಚಿತ ಕೋಚಿಂಗ್

Date:

DC Shivamogga ವಿದ್ಯಾರ್ಥಿ ಜೀವನದಲ್ಲಿ ಪಿಯುಸಿ ಎಂಬುದು ಒಂದು ಅತ್ಯಂತ ನಿರ್ಣಾಯಕ ಘಟ್ಟವಾಗಿದೆ. ಇನ್ನೊಂದು ರೀತಿಯಲ್ಲಿ ಪಿಯುಸಿ ಅಧ್ಯಯನವು ಹಗ್ಗದ ಮೇಲಿನ ನಡಿಗೆಯಂತೆ. ಹದಿಹರೆಯದ ಮಕ್ಕಳಲ್ಲಿ ನೂರೆಂಟು ಕನಸುಗಳು ತುಂಬಿರುತ್ತವೆ. ನಾನು ಡಾಕ್ಟರ್ ಆಗಬೇಕು, ಐಐಟಿಯಲ್ಲಿ ಓದಿ ಇಂಜಿನಿಯರ್ ಆಗಬೇಕು, ಇತ್ಯಾದಿ ನೂರೆಂಟು ಕನಸುಗಳನ್ನು ಮನದಲ್ಲಿ ತುಂಬಿಕೊಂಡು ವಿದ್ಯಾರ್ಥಿಗಳು ಪಿಯುಸಿ ವಿಜ್ಞಾನ ಸಂಯೋಜನೆಗೆ ಸೇರುತ್ತಾರೆ. ಆದರೆ ತರಬೇತಿ ರಹಿತ ಅಧ್ಯಯನವು ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳಿಗೆ ದೊಡ್ಡ ಸವಾಲಾಗಿ ಪರಿಣಮಿಸುತ್ತಿದೆ.

ಗ್ರಾಮಾಂತರ ಪ್ರದೇಶದ ಬಡ ಕುಟುಂಬದ ಹಿನ್ನೆಲೆಯಿಂದ ಬಂದ ವಿದ್ಯಾರ್ಥಿಗಳಿಗಂತೂ ಪಿಯುಸಿ ನಂತರದ ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿ ಗಗನಕುಸುಮವಾಗಿ ಪರಿಣಮಿಸಿದೆ. ಕೇಳಿದಷ್ಟು ಶುಲ್ಕ ಕೊಟ್ಟು ತರಬೇತಿ ಕೊಡಲು ಪೋಷಕರಿಗೂ ಕಷ್ಟವಾಗುತ್ತಿದೆ. ಕುಗ್ರಾಮಗಳಿಂದ ಬರುವ ರೈತ ಕಾರ್ಮಿಕರ ಮಕ್ಕಳಿಗಂತೂ ಕೆ-ಸಿಇಟಿ ನೀಟ್ ತರಬೇತಿಯಂತೂ ಕೈಗೆಟುಕದ ಸನ್ನಿವೇಶ ಸೃಷ್ಟಿಯಾಗುತ್ತಿದೆ.
ನಮ್ಮ ಜಿಲ್ಲೆಯ ಇಂತಹ ವಿದ್ಯಾರ್ಥಿಗಳ ಕನಸನ್ನು ನನಸಾಗಿಸಲು ಶಿವಮೊಗ್ಗ ಜಿಲ್ಲೆಯ ಜಿಲ್ಲಾ ಪಂಚಾಯತ್ ಮತ್ತು ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ಸಹಯೋಗದಲ್ಲಿ “LEAP-THE SMART WAY TO SUCCESS” ಎಂಬ ವಿನೂತನ ಸಿಇಟಿ-ನೀಟ್ ಪೂರ್ವ ಸಿದ್ಧತಾ ಕಾರ್ಯಕ್ರಮವನ್ನು ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ಎಲ್ಲ ವಿದ್ಯಾರ್ಥಿಗಳಿಗೆ ಉಚಿತವಾಗಿ ನಡೆಸಲು ಉದ್ದೇಶಿಸಲಾಗಿದೆ.

ಇದು ಶಿವಮೊಗ್ಗ ಜಿಲ್ಲೆಯ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಹೇಮಂತ್‌ ಎನ್‌ ರವರ ಕನಸಿನ ಕೂಸು. ಶ್ರೀ ಹೇಮಂತ್‌ ರವರು ಜಿಲ್ಲೆಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಪಿಯೂಸಿ ಅಧ್ಯಯನ ಮಾಡುತ್ತಿರುವ, ಸಿಇಟಿ ತರಬೇತಿಯಿಂದ ವಂಚಿತರಾದ ನೂರಾರು ವಿದ್ಯಾರ್ಥಿಗಳ ಸಂಕಟವನ್ನು ಸ್ವತಃ ಮನಗಂಡು ಈ ಸಾಹಸಕ್ಕೆ ಕೈ ಹಾಕಿದ್ದಾರೆ. ಶ್ರೀ ಹೇಮಂತ್‌ರವರು ಶಿವಮೊಗ್ಗದ ಡಿವಿಎಸ್‌ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ ಆಧ್ಯಯನ ಮಾಡಿದವರು.

DC Shivamogga ಜಿಲ್ಲೆಯ ವಿದ್ಯಾರ್ಥಿಗಳ ಅಧ್ಯಯನಕ್ಕೆ ಬೆಂಬಲವಾಗಿ ನಿಲ್ಲಬೇಕೆಂಬ ಅವರ ನಿರಂತರ ಪ್ರಯತ್ನವೇ ಈ ಉಚಿತ ತರಬೇತಿ ಕಾರ್ಯಕ್ರಮದ ಅನುಷ್ಟಾನದ ಮೂಲಕ ಸಾಕ್ಷಾತ್ಕರವಾಗುತ್ತಿದೆ. ಇವರ ಜೊತೆಗೆ ಜಿಲ್ಲೆಯಲ್ಲಿ ಪ್ರಸ್ತುತ ಪ್ರೊಬೇಷನರಿ ಐಎಎಸ್‌ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಕುಮಾರಿ ದೃಷ್ಟಿ ಜೈಸ್ವಾಲ್‌ ರವರ ಮಾರ್ಗದರ್ಶನವೂ ಈ ಕಾರ್ಯಕ್ರಮ ಸಾಕಾರಗೊಳ್ಳುವುದರಲ್ಲಿ ಮುಖ್ಯ ಪಾತ್ರ ವಹಿಸಿದೆ.
ಇದರಿಂದಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಕೆ-ಸಿಇಟಿ ನೀಟ್ ತರಬೇತಿಯನ್ನು ಉಚಿತವಾಗಿ ಪಡೆದು ಅತ್ಯುತ್ತಮ ಅಂಕ ಗಳಿಸಿ ಭವಿಷ್ಯದ ಪಿಯೂಸಿ ನಂತರದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸಮರ್ಥವಾಗಿ ಎದುರಿಸಿ ತಮ್ಮ ಕನಸನ್ನು ನಿಜವಾಗಿಸಬಹುದಾಗಿದೆ.

ಈ ಕಾರ್ಯಕ್ರಮದ ಲಾಭವನ್ನು ಶಿವಮೊಗ್ಗ ಜಿಲ್ಲೆಯ ವಿಜ್ಞಾನ ವ್ಯಾಸಂಗ ಮಾಡುತ್ತಿರುವ ನಾಲ್ಕು ಸಾವಿರಕ್ಕೂ ಅಧಿಕ ಪಿಯುಸಿಯ ವಿದ್ಯಾರ್ಥಿಗಳು ಪಡೆಯಲಿದ್ದಾರೆ.
ಈ ಕಾರ್ಯಕ್ರಮವು ನವೆಂಬರ್ ಎರಡನೇ ವಾರದಿಂದ ಆರಂಭವಾಗಲಿದ್ದು, ಪ್ರತಿ ತಿಂಗಳು ಇದರಲ್ಲಿ ಅಧ್ಯಾಯವಾರು ಅಭ್ಯಾಸ ಪರೀಕ್ಷೆಗಳು ಸಿಇಟಿ ನೀಟ್ ಮಾದರಿಯಲ್ಲಿ ನಡೆಯಲಿವೆ. ಶೈಕ್ಷಣಿಕ ವರ್ಷದ ಅಂತ್ಯದಲ್ಲಿ ಪೂರ್ಣ ಪಠ್ಯಕ್ರಮಕ್ಕೆ ಅಣಕು ಪರೀಕ್ಷೆಗಳು ನಡೆಯಲಿವೆ.

ಇದಕ್ಕೆ ಸಂಬಂಧಿಸಿದ ಪ್ರಶ್ನೆ ಪತ್ರಿಕೆಗಳನ್ನು ಜಿಲ್ಲೆಯ ಅನುಭವಿ, ಸಮರ್ಥ ಉಪನ್ಯಾಸಕರು ತಯಾರಿಸಲಿದ್ದಾರೆ. ವಿದ್ಯಾರ್ಥಿಗಳು ತಮ್ಮ ಕಾಲೇಜುಗಳಲ್ಲಿಯೇ ಸಿದ್ಧತಾ ಪರೀಕ್ಷೆಗಳನ್ನು, ಅಣುಕು ಪರೀಕ್ಷೆಗಳನ್ನು ಬರೆಯಬಹುದಾಗಿದೆ. ಹಾಗು ಪರೀಕ್ಷೆಗಳ ನಂತರ ಅನುಮಾನ ಪರಿಹಾರ ತರಗತಿಗಳು ಆನ್‌ಲೈನ್‌ನಲ್ಲಿ ನಡೆಯಲಿದ್ದು, ಇದರ ಮೂಲಕ ವಿದ್ಯಾರ್ಥಿಗಳು ತಜ್ಞ ಉಪನ್ಯಾಸಕರ ಜೊತೆ ಸಂವಾದ ನಡೆಸಿ ತಮ್ಮ ಸಂದೇಹಗಳನ್ನು ನಿವಾರಿಸಿಕೊಳ್ಳಬಹುದಾಗಿದೆ.

ಅತ್ಯುತ್ತಮ ಸಾಧನೆ ಮಾಡಿದವರಿಗೆ ಪ್ರತಿಭಾ ಪುರಸ್ಕಾರ ಆಯೋಜಿಸಲಾಗುತ್ತದೆ.
ಶಿವಮೊಗ್ಗ ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ವಿಜ್ಞಾನ ವ್ಯಾಸಂಗದ ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದು ತಮ್ಮ ಕನಸಿನ ಉನ್ನತ ಶಿಕ್ಷಣಕ್ಕೆ ಸೇರಬಯಸುವ ಪ್ರಯತ್ನವು ಯಶಸ್ವಿಯಾಗಲೆಂದು ಹಾರೈಸುತ್ತೇವೆ ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕರಾಜ ಚಂದ್ರಪ್ಪ ಎಸ್‌ ಗುಂಡಪಲ್ಲಿ ಅವರು ತಿಳಿಸಿದ್ದಾರೆ .

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 9448319982

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...