Friday, March 20, 2026
Friday, March 20, 2026

Indian Department of Posts ಪಿಂಚಣಿದಾರರಿಗೆ ಅಂಚೆ ಇಲಾಖೆಯಿಂದ ಮನೆಬಾಗಿಲಿನಲ್ಲೇ ಜೀವನ ಪ್ರಮಾಣ ಪತ್ರ ಸಲ್ಲಿಸುವ ಸೌಲಭ್ಯ

Date:

Indian Department of Posts ಭಾರತೀಯ ಅಂಚೆ ಇಲಾಖೆಯು ರಾಜ್ಯ ಸರ್ಕಾರದ ಖಜಾನೆಯೊಂದಿಗೆ ಕರ್ನಾಟಕ ರಾಜ್ಯ ಸರ್ಕಾರದ ಪಿಂಚಣಿದಾರರಿಗೆ/ ಕುಟುಂಬ ಪಿಂಚಣಿದಾರರು ವೈಯಕ್ತಿಕವಾಗಿ ಜೀವನ ಪ್ರಮಾಣ ಪತ್ರವನ್ನು ಸಲ್ಲಿಸುವ ಸಮಯದಲ್ಲಿ ಎದುರಿಸುತ್ತಿರುವ ತೊಂದರೆಗಳನ್ನು ತಪ್ಪಿಸಲು ಭಾರತೀಯ ಅಂಚೆ ಇಲಾಖೆಯು “ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್”, ಪಿಂಚಣಿದಾರರ ಮನೆಬಾಗಿಲಿನಲ್ಲಿ ಡಿಜಿಟಲ್ ಲೈಫ್ ಪ್ರಮಾಣ ಪತ್ರವನ್ನು ಸಲ್ಲಿಸುವ ವ್ಯವಸ್ಥೆಯನ್ನು ಮಾಡಿದೆ.

ಪಿಂಚಣಿದಾರರು ತಮ್ಮ ಡಿಜಿಟಲ್ ಲೈಫ್ ಪ್ರಮಾಣಪತ್ರವನ್ನು ಕೆಲವೇ ನಿಮಿಷಗಳಲ್ಲಿ ಪೋಸ್ಟ್ಮನ್ ಮೂಲಕ ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ, ಪಿಪಿಓ ಸಂಖ್ಯೆ ಮತ್ತು ಪಿಂಚಣಿದಾರರ ಬ್ಯಾಂಕ್ ಖಾತೆಯ ವಿವರಗಳೊಂದಿಗೆ ತಮ್ಮ ಬಯೋಮೆಟ್ರಿಕ್ (ಬೆರಳಚ್ಚು) ವೆರಿಫೈ ಮಾಡಿ ಸಲ್ಲಿಸಬಹುದಾಗಿದೆ.

Indian Department of Posts ತಮ್ಮಲ್ಲಿರುವ ಮೊಬೈಲ್ ಮುಖಾಂತರ ಜೀವನ ಪ್ರಮಾಣ ಪತ್ರ ಮಾಡಿ ಕೊಡುವ ವ್ಯವಸ್ಥೆಯಲ್ಲಿ ಯಾವುದೆ ಕಾಗದ ಪತ್ರವನ್ನು ಕೊಡಬೇಕಾಗಿಲ್ಲ. ಡಿಜಿಟಲ್ ಜೀವನ ಪ್ರಮಾಣ ಪತ್ರವು ಪಿಂಚಣಿ ಪಡೆಯುವ ಕಚೇರಿಗೆ ತಂತ್ರಾಂಶ ಮೂಲಕ ರವಾನೆಯಾಗುವುದು ಹಾಗೂ ಮೊಬೈಲ್ ಗೆ ಇದರ ವಿವರ ಸಂದೇಶದ ಮೂಲಕ ಬರುತ್ತದೆ.
ಕರ್ನಾಟಕ ಸರ್ಕಾರದ ಪಿಂಚಣಿದಾರರು/ಕುಟುಂಬ ಪಿಂಚಣಿದಾರರು ತಮ್ಮ ಹತ್ತಿರದ ಅಂಚೆ ಕಚೇರಿಯಲ್ಲಿ ಅಥವಾ ಪೋಸ್ಟ್ಮನ್ ಮೂಲಕ ಕೇವಲ ರೂ. 70/- (ಜಿಎಸ್‌ಟಿ ಸೇರಿದಂತೆ) ಶುಲ್ಕನೀಡಿ ಈ ಸೌಲಭ್ಯವನ್ನು ಪಡೆದು ತಮ್ಮ ಡಿಜಿಟಲ್ ಲೈಪ್ ಪ್ರಮಾಣ ಪತ್ರವನ್ನು ಸಲ್ಲಿಸುವಂತೆ ಶಿವಮೊಗ್ಗ ಅಂಚೆ ಇಲಾಖಾ ಕಚೇರಿಯ ಸೂಪರಿಟೆಂಡೆಂಟ್ ತಿಳಿಸಿದ್ದಾರೆ .

ಮಾಹಿತಿಗಾಗಿ ಹತ್ತಿರದ ವಿಭಾಗೀಯ ಕಚೇರಿಯನ್ನು ಅಥವಾ ಇಮೇಲ್ doshimoga.ka@indiapost.gov.in ಮೂಲಕ ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...