Tuesday, March 24, 2026
Tuesday, March 24, 2026

Bahumukhi Shivamogga ನ.16. ‘ಬಹುಮುಖಿ’ಯಿಂದ ನಿರ್ಮಲ ತುಂಗಭದ್ರ ಅಭಿಯಾನದ ಬಗ್ಗೆ ತಜ್ಞರೊಡನೆ ಸಂವಾದ ವ್ಯವಸ್ಥೆ

Date:

Bahumukhi Shivamogga ಶಿವಮೊಗ್ಗ ನಗರದ ಬಹುಮುಖಿ ವತಿಯಿಂದ ನಲವತ್ತೆರಡನೇ ಕಾರ್ಯಕ್ರಮವಾಗಿ ನಿರ್ಮಲ ತುಂಗ ಭದ್ರ ಅಭಿಯಾನ ಕುರಿತಾದ ಮಾಹಿತಿ- ಸಂವಾದ-ಚರ್ಚೆ ಅಯೋಜನೆಗೊಂಡಿದೆ. ನ. ,16ರಂದು ಸಂಜೆ 5:30ಕ್ಕೆ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ರಂಡ್ಸ್ ಸೆಂಟರ್ ಸಭಾಂಗಣದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಾಭಿಮಾನ ಅಭಿಯಾನದ ಅಧ್ಯಕ್ಷರಾದ ಬಸವರಾಜ ಪಾಟೀಲ್‌ರವರು ಮಾಹಿತಿ ನೀಡಲಿದ್ದು, ಪರಿಸರ ತಜ್ಞ ಡಾ. ಎಲ್.ಕೆ. ಶ್ರೀಪತಿಯವರು ಸಂವಾದ ನಡೆಸಿಕೊಡಲಿದ್ದಾರೆ.

ತುಂಗಾ ಭದ್ರಾ ನದಿಗಳು ಕಲುಷಿತಗೊಳ್ಳುತ್ತಿರುವ ಪ್ರಸ್ತುತ ಸಂದರ್ಭದಲ್ಲಿ, ಜನಜಾಗೃತಿ ಮೂಡಿಸಲು ಮಾಜಿ ಕೇಂದ್ರ ಸಚಿವ ಗೋವಿಂದನ್ ನಾಯಕತ್ವದ ರಾಷ್ಟ್ರೀಯ ಸ್ವಾಭಿಮಾನ್ ಅಂದೋಲನ, ಈಗಾಗಲೇ ಶೃಂಗೇರಿಯಿಂದ ಪಾದಯಾತ್ರೆ ಮೂಲಕ ಒಂದು ದೊಡ್ಡ ಆಂದೋಲನ ಆರಂಭ ಮಾಡಿದೆ. ಇದರ ಮೊದಲ ಹಂತ ನ.14ರಂದು ಹರಿಹರದಲ್ಲಿ ಮುಗಿಯಲಿದ್ದು, ಎರಡನೇ ಹಂತ ಕೊಪ್ಪಳ ಜಿಲ್ಲೆಯ ಕಿಷ್ಕಿಂದೆವರೆಗೆ ಮುಂದುವರೆಯಲಿದೆ.

Bahumukhi Shivamogga ಒಟ್ಟಾರೆ ಸುಮಾರು 430 ಕಿಮೀ ಪಾದಯಾತ್ರೆ ಕ್ರಮಿಸಲಿದೆ.
ಪವಿತ್ರ ತುಂಗಾ ತಟದಲ್ಲಿ ವಾಸಿಸುತ್ತಿರುವ ಎಲ್ಲರೂ ಈ ಆಂದೋಲನದಲ್ಲಿ ಕೈ ಜೋಡಿಸಬೇಕಿದೆ. ಈ ಆಂದೋಲನದ ರೂಪು ರೇಷೆ, ಮಾಹಿತಿ ಪಡೆದು ಚರ್ಚೆಯಲ್ಲಿ ಪಾಲ್ಗೊಂಡು ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶ.

ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಕೋರಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿ ಒಡ್ಡುವ ಆಸೆ ಆಮಿಷಗಳಿಗೆ ಒಳಗಾಗಬೇಡಿ- ಸಿದ್ಧರಾಮಯ್ಯ

CM Siddharamaih ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...