Tuesday, March 24, 2026
Tuesday, March 24, 2026

Shimoga Roller Skating Association ಶಿವಮೊಗ್ಗದ ಆರು ಸ್ಕೇಟರ್ ಗಳು ರಾಷ್ಟ್ರಮಟ್ಟದ ಪಂದ್ಯಾವಳಿಗೆ ಆಯ್ಕೆ

Date:

Shimoga Roller Skating Association ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ರೋಲರ್ ಸ್ಕೇಟಿಂಗ್ ಪಂದ್ಯಾವಳಿಯಲ್ಲಿ ನಮ್ಮ ಶಿವಮೊಗ್ಗ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ನ ಆರು ಸ್ಕೇಟರ್‌ಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಮೊದಲ ಹಂತದಲ್ಲೇ ಐದರಿಂದ ಏಳು ವರ್ಷ ವಯೋಮಿತಿಯ ಕ್ರೀಡಾಕೂಟದಲ್ಲಿ ನಮ್ಮ ಶಿವಮೊಗ್ಗ ತಂಡದ ಹಿತಾ ಪ್ರವೀಣ್ ಎರಡು ಬೆಳ್ಳಿ ಪದಕ ಗೆಲ್ಲುವ ಮೂಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಅದೇ ರೀತಿ 17 ವರ್ಷ ವಯೋಮಿತಿಯ ಪಂದ್ಯಾವಳಿಯಲ್ಲಿ ನಮ್ಮ ಶಿವಮೊಗ್ಗ ತಂಡದ ರಾಗಶ್ರೀ ಎಸ್. ಅವರು ಒಂದು ಚಿನ್ನ ಹಾಗೂ ಎರಡು ಬೆಳ್ಳಿ ಪದಕಗಳನ್ನು ಗೆಲ್ಲುವ ಮೂಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದು ವಿಶೇಷವಾಗಿದೆ.
ಈ ಪಂದ್ಯಾವಳಿಯಲ್ಲಿ11-14 ವರ್ಷ ವಯೋಮಿತಿಯ ಸ್ಪರ್ಧೆಯಲ್ಲಿ ಸೈಯದ್ ಪೈಜಲ್ ಎರಡು ಕಂಚು ಹಾಗೂ ಒಂದು ಬೆಳ್ಳಿ ಪದಕವನ್ನು ಪಡೆದಿದ್ದು, ದಾನೇಶ್ ಎಚ್ ಶೆಟ್ಟಿ ಅವರು 14-17 ವರ್ಷ ವಯೋಮಿತಿಯ ಪಂದ್ಯದಲ್ಲಿ ಒಂದು ಕಂಚಿನ ಪದಕ ಪಡೆದಿದ್ದಾರೆ. 17ವರ್ಷ ವಯೋಮಿತಿಯ ಪಂದ್ಯದಲ್ಲಿ ಸಾಧನ ಎಸ್. ಒಂದು ಕಂಚಿನ ಪದಕ ಪಡೆದಿದ್ದರೆ 9-11 ವರ್ಷ ವಯೋಮಿತಿಯ ಪಂದ್ಯಾವಳಿಯಲ್ಲಿ ನೀಲಾಸಂಪತ್ ಒಂದು ಬೆಳ್ಳಿ ಪದಕ ಪಡೆಯುವ ಮೂಲಕ ರಾಷ್ಟ್ರಮಟ್ಟದ ಆಯ್ಕೆಗೆ ಪಾತ್ರರಾಗಿದ್ದಾರೆ.
Shimoga Roller Skating Association 11-14 ವರ್ಷ ವಯೋಮಿತಿಯ ಪಂದ್ಯದಲ್ಲಿ ವೇದಾಂಶ್ ಗಜೇಂದ್ರ ಪೆರಡಿ ಒಂದು ಬೆಳ್ಳಿ ಪದಕವನ್ನು ಪಡೆದಿದ್ದಾರೆ.
ನಮ್ಮ ಶಿವಮೊಗ್ಗ ಸ್ಟೇಟಿಂಗ್ ಅಸೋಸಿಯೇಷನ್‌ನ ಸ್ಕೇಟರ್ ಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವುದನ್ನು ಶಿವಮೊಗ್ಗ ಲೋಕಸಭಾ ಸದಸ್ಯರಾದ ಶ್ರೀ ಬಿ. ವೈ. ರಾಘವೇಂದ್ರ ಅವರು ಪ್ರಶಂಸಿಸಿ ಅವರ ಕ್ರೀಡಾ ಜಗತ್ತು ಇನ್ನಷ್ಟು ಉತ್ತಮವಾಗಲೆಂದು ಶುಭ ಹಾರೈಸಿದ್ದಾರೆ.
ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಜಿಲ್ಲೆಯ ಹಾಗೂ ಸಂಸ್ಥೆಯ ಗೌರವಕ್ಕೆ ಕಾರಣವಾದ ಎಲ್ಲಾ ಸ್ಟೇಟರ್‌ಗಳನ್ನು ಸಂಸ್ಥೆಯ ಅಧ್ಯಕ್ಷ ಮೋಹನ್ ಕುಮಾರ್ ಕೆ.ಎಚ್. ಹಾಗೂ ಪ್ರಧಾನ ಕಾರ್ಯದರ್ಶಿ ಎಂ. ರವಿ ಮತ್ತು ಪದಾಧಿಕಾರಿಗಳು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿ ಒಡ್ಡುವ ಆಸೆ ಆಮಿಷಗಳಿಗೆ ಒಳಗಾಗಬೇಡಿ- ಸಿದ್ಧರಾಮಯ್ಯ

CM Siddharamaih ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...