Thursday, March 19, 2026
Thursday, March 19, 2026

Department of Kannada and Culture ಶಿವಮೊಗ್ಗ ಜಿಲ್ಲೆ ಸಾಂಸ್ಕೃತಿಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ- ಉಮೇಶ್ ಹಾಲಾಡಿ

Date:

Department of Kannada and Culture ಸಾಂಸ್ಕೃತಿಕ ಕ್ಷೇತ್ರದಲ್ಲಿ ಶಿವಮೊಗ್ಗ ಜಿಲ್ಲೆ ಮುಂಚೂಣಿಯಲ್ಲಿದ್ದು, ಮೈಸೂರು ನಂತರ ಶಿವಮೊಗ್ಗದಲ್ಲಿ ಹೆಚ್ಚು ಹೆಚ್ಚು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಯುತ್ತವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್ ಹಾಲಾಡಿ ಹೇಳಿದರು.
ಭಾವಗಾನ 8ನೇ ವಾರ್ಷಿಕೋತ್ಸವದಲ್ಲಿ ದಂಪತಿಗಳ ಗಾಯನ ಸ್ಪರ್ಧೆ, ನಾರಾಯಣ ಗುರುಗಳ ಗೀತೆಗಳ ಸ್ಪರ್ಧೆ ಹಾಗೂ ವಿವಿಧ ಬಗೆಯ ಗಾಯನ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿ ಮಾತನಾಡಿ, ಸ್ಪರ್ಧೆಗಳಲ್ಲಿ ಸೋಲು ಗೆಲುವು ಮುಖ್ಯವಲ್ಲ. ಭಾಗವಹಿಸುವಿಕೆ ಮುಖ್ಯ. ನಿರಂತರ ಪರಿಶ್ರಮ ಸಾಧನೆ ಹಾಗೂ ಗುರುಗಳ ಮಾರ್ಗದರ್ಶನ ಅವಶ್ಯಕ ಎಂದು ತಿಳಿಸಿದರು.
ಮಥುರಾ ಪ್ಯಾರಾಡೈಸ್ ಹೋಟೆಲ್ ಕಲಾಪೋಷಕರಿಗೆ ಇಂತಹ ಕಾರ್ಯಕ್ರಮಗಳಿಗೆ ಹೆಚ್ಚು ಪ್ರೋತ್ಸಾಹ ನೀಡುವುದರ ಮೂಲಕ ಕಲೆಯನ್ನು ಉಳಿಸಿ ಬೆಳೆಸುವಲ್ಲಿ ಸಹಕಾರ ನೀಡುತ್ತ ಬಂದಿದ್ದಾರೆ ಎಂದರು.
Department of Kannada and Culture ದಂಪತಿಗಳ ಸ್ಪರ್ಧೆಯಲ್ಲಿ ಪ್ರಿಯಾಂಕ ಭರತ್ ಪ್ರಥಮ ಬಹುಮಾನ, ಸುಮಾ ಚಂದ್ರಶೇಖರ ಭಟ್ ದ್ವಿತೀಯ ಹಾಗೂ ಛಾಯಾ ನವೀನ್ ತೃತೀಯ ಬಹುಮಾನ ಪಡೆದರು. ನಗದು ಬಹುಮಾನ, ಪಾರಿತೋಷಕ ಹಾಗೂ ಪ್ರಶಸ್ತಿ ಪತ್ರ ನೀಡಲಾಯಿತು.
ತೀರ್ಪುಗಾರರಾಗಿ ಶಾಂತಾ ಶೆಟ್ಟಿ, ಉಮಾ ದಿಲೀಪ್, ಮಂಜುಳಾ ಡಿ.ಸಾಗರ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಗಾಯಕ ಜಿ.ವಿಜಯಕುಮಾರ್ ಅವರು 57ವರ್ಷದಿಂದ ಕಲಾಸೇವೆಯಲ್ಲಿ ತೊಡಗಿಸಿಕೊಂಡಿರುವ ಭದ್ರಾವತಿ ವಾಸು ಅವರಿಗೆ ಸನ್ಮಾನಿಸಿದರು. ನಂತರ ಮಾತನಾಡಿ, ಸಂಗೀತ ನಮ್ಮಲ್ಲಿನ ಖಿನ್ನತೆ ದೂರಗೊಳಿಸುತ್ತದೆ ಎಂದು ತಿಳಿಸಿದರು.
ನೂರು ಜನರು ಗಾಯಕರು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಇಡೀ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆಯಿತು. ಗಿರೀಶ್ ಬ್ಯಾಡ, ವಿಜಯಾ ಸತೀಶ್, ಬುಜಂಗಪ್ಪ, ಪ್ರಮೋದ್, ಪ್ರಶಾಂತ್, ಹೇಮಂತ್, ಚಂದ್ರಶೇಖರ್ ಭಟ್, ಬಿಂದು ವಿಜಯಕುಮಾರ್, ಸುಮಾ, ಶಶಿರೇಖಾ, ಆದ್ಯಾ, ರವಿ, ಬಸವರಾಜ್, ರವಿ ಚವ್ಹಾಣ್ ಹಾಗೂ ಕಲಾವಿದರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...