Monday, February 2, 2026
Monday, February 2, 2026

Indira Gandhi ನಮ್ಮ ಪಂಚ ಗ್ಯಾರಂಟಿಗಳು ಶ್ರೀಮತಿ ಇಂದಿರಾ ಗಾಂಧಿಯವರಿಂದ ಪ್ರೇರಣೆ ಪಡೆದಿವೆ- ಸಿಎಂ ಸಿದ್ಧರಾಮಯ್ಯ

Date:

Indira Gandhi ಸರ್ವರಿಗೂ ಸಮಪಾಲು ನೀಡುವ ಸ್ವಾವಲಂಬಿ ಮತ್ತು ಜಾತ್ಯತೀತ ಭಾರತದ ರೂವಾರಿ ಶ್ರೀಮತಿ ಇಂದಿರಾಗಾಂಧಿಯವರನ್ನು ಅವರ ಹುಟ್ಟುಹಬ್ಬದ ದಿನ ಗೌರವದಿಂದ ನೆನೆಯುತ್ತೇನೆ. ಅವರ ಬಡವರ ಪರವಾದ ಕಾಳಜಿ ಮತ್ತು ಅಭಿವೃದ್ಧಿಯ ಮುನ್ನೋಟದಿಂದ ನಾನು ಪ್ರೇರಿತನಾಗಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯನವರು ಹೇಳಿದ್ದಾರೆ.

ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್ ಸೇರಿದಂತೆ ನಮ್ಮ ಪಂಚ ಗ್ಯಾರಂಟಿ ಯೋಜನೆಗಳು ಕೂಡಾ ಶ್ರೀಮತಿ ಇಂದಿರಾಗಾಂಧಿಯವರಿಂದ ಪ್ರೇರಣೆ ಪಡೆದಿವೆ. ಬಡವರ ಬಗ್ಗೆ ಅವರ ಹೃದಯ ಸದಾ ಮಿಡಿಯುತ್ತಿತ್ತು. ಗರೀಬಿ ಹಟಾವೋ ಎಂದು ಹೇಳುತ್ತಾ ಬಡತನದ ವಿರುದ್ಧ ಅವರು ಸಮರವನ್ನೇ ಸಾರಿದ್ದರು.

Indira Gandhi ಪ್ರಧಾನ ಮಂತ್ರಿಯಾಗಿ ಬ್ಯಾಂಕ್ ರಾಷ್ಟ್ರೀಕರಣ, ಭೂ ಸುಧಾರಣೆ, ಸಾರ್ವಜನಿಕ ಕ್ಷೇತ್ರದ ಉದ್ಯಮಗಳ ಸ್ಥಾಪನೆಯೂ ಸೇರಿದಂತೆ ಅವರು ದಿಟ್ಟತನದಿಂದ ಕಾರ್ಯರೂಪಕ್ಕೆ ತಂದಿದ್ದ ಜನಪರ ನೀತಿ-ನಿರ್ಧಾರಗಳು ನಮ್ಮ ಕಣ್ಣಮುಂದೆಯೇ ಬುಡಮೇಲು ಆಗುತ್ತಿದೆ. ಈ ಅನ್ಯಾಯದ ವಿರುದ್ಧದ ಹೋರಾಟಕ್ಕೆ ಶ್ರೀಮತಿ ಇಂದಿರಾಗಾಂಧಿಯವರ ಬದುಕು ಮತ್ತು ಚಿಂತನೆ ನಮಗೆಲ್ಲ ಪ್ರೇರಣೆಯಾಗಲಿ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...