Sunday, May 17, 2026
Sunday, May 17, 2026

CM Siddhramaiah ನವದೆಹಲಿ ಮಾರುಕಟ್ಟೆ ಪ್ರವೇಶಿಸಿದ ರಾಜ್ಯದ ನಂದಿನಿ ಬ್ರಾಂಡ್. ಗ್ರಾಹಕರಿಂದ ಉತ್ತಮ ಸ್ಪಂದನೆ- ಸಿದ್ಧರಾಮಯ್ಯ

Date:

CM Siddhramaiah ದೇಶದ ಹಾಲು ಉತ್ಪಾದನೆಯಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದರೆ, ಕರ್ನಾಟಕ ಎರಡನೇ ಸ್ಥಾನದಲ್ಲಿದೆ.

ದೆಹಲಿ ನಗರದಲ್ಲಿ ಕೆ.ಎಂ.ಎಫ್ ಮತ್ತು ಮಂಡ್ಯ ಹಾಲು ಒಕ್ಕೂಟಗಳು ಸೇರಿಕೊಂಡು ವಿವಿಧ ಶ್ರೇಣಿಯ ಹಾಲನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿವೆ. ದೆಹಲಿಯ ನಿವಾಸಿಗಳಿಂದ ನಂದಿನಿ ಉತ್ಪನ್ನಗಳಿಗೆ ಅತ್ಯುತ್ತಮ ಸ್ಪಂದನೆ ದೊರೆಯಲಿದೆ ಎಂಬ ವಿಶ್ವಾಸ ನನಗಿದೆ.

ಇಡೀ ದೇಶದಲ್ಲಿ ರೈತರ ಉಪಕಸುಬು ಪಶುಸಂಗೋಪನೆ. ಗುಜರಾತ್ ನಲ್ಲಿ ಕುರಿಯನ್ ಅವರು ಹಾಲು ಉತ್ಪಾದಕರ ಸಂಘವನ್ನು ಪ್ರಾರಂಭ ಮಾಡಿದರು. ಹಿಂದೆ ನಾನೂ ಕೂಡ ಪಶುಸಂಗೋಪನಾ ಸಚಿವನಾಗಿದ್ದೆ, ಒಂದು ವರ್ಷ ಕಾಲ ಕರ್ನಾಟಕ ಹಾಲು ಮಹಾಮಂಡಲದ ಅಧ್ಯಕ್ಷನೂ ಆಗಿದ್ದೆ. ಪಶುಸಂಗೋಪನಾ ಸಚಿವನಾಗಿದ್ದಾಗಲೇ ಹಾಲು ಉತ್ಪಾದಕರಿಗೆ ಶೋಷಣೆಯಾಗುತ್ತಿದ್ದುದ್ದನ್ನು ಮನಗಂಡು ಶಾಶ್ವತ ಮಾರುಕಟ್ಟೆ ಕಲ್ಪಿಸಲು ಹಾಲು ಉತ್ಪಾದಕರ ಸಂಘಗಳನ್ನು ರಚಿಸಿದ್ದೆ.

CM Siddhramaiah ರಾಜ್ಯದಲ್ಲಿ ಪ್ರತಿದಿನ 92 ರಿಂದ 93 ಲಕ್ಷ ಲೀ. ಹಾಲು ಉತ್ಪಾದನೆಯಾಗುತ್ತಿದೆ. ರೈತರಿಂದ ಲೀ. ಗೆ 32 ರೂ.ಗಳಿಗೆ ಹಾಲು ಖರೀದಿಸಲಾಗುತ್ತಿದ್ದು, ರಾಜ್ಯ ಸರ್ಕಾರ ಕ್ಷೀರಧಾರೆ ಯೋಜನೆಯಡಿ ಹಾಲು ಉತ್ಪಾದಕರಿಗೆ ಪ್ರತಿ ಲೀಟರಿಗೆ 5 ರೂ.ಗಳ ಪ್ರೋತ್ಸಾಹಧನವನ್ನು ನೀಡುತ್ತಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾಲದಲ್ಲಿ 2 ರೂ. ಇದ್ದ ಪ್ರೋತ್ಸಾಹಧನ, ನಂತರ 3 ರೂ. ಆಯಿತು. ನಾನು ಮುಖ್ಯಮಂತ್ರಿಯಾದ ನಂತರ ಇದನ್ನು 5 ರೂ.ಗಳಿಗೆ ಹೆಚ್ಚಿಸಿದ್ದೆ. ಪ್ರೋತ್ಸಾಹಧನಕ್ಕಾಗಿ ಪ್ರತಿ ದಿನ 5 ಕೋಟಿ ರೂ.ಗಳನ್ನು ಸರ್ಕಾರ ವೆಚ್ಚ ಮಾಡುತ್ತಿದೆ.

ರಾಜ್ಯದಲ್ಲಿ ಒಟ್ಟು 16 ಮಿಲ್ಕ್ ಯೂನಿಯನ್‌ಗಳಿವೆ. ರಾಜ್ಯದಲ್ಲಿ ಅಂದಾಜು 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಆಂಧ್ರಪ್ರದೇಶ, ಮಹಾರಾಷ್ಟ್ರಕ್ಕೆ ನಿತ್ಯ ತಲಾ 2.5 ಲಕ್ಷ ಲೀ.ಟರ್ ಹಾಲು ಪೂರೈಕೆಯಾಗುತ್ತಿದೆ. ಇದೀಗ ಆರಂಭಿಕ ಹಂತದಲ್ಲಿ 2.5 ಲಕ್ಷ ಲೀಟರ್ ಹಾಲು ನವದೆಹಲಿಗೆ ಪೂರೈಸುವ ಯೋಜನೆ ರೂಪಿಸಲಾಗಿದೆ. ಇನ್ನು ಆರು ತಿಂಗಳೊಳಗೆ 5 ಲಕ್ಷ ಲೀಟರ್ ಗೆ ಏರಿಸುವ ಗುರಿ ನಮ್ಮದಾಗಿದೆ.

-ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇಂದು ಆಯೋಜಿಸಿದ್ದ ನಂದಿನಿ ವಿವಿಧ ಶ್ರೇಣಿಯ ಹಾಲಿನ ಪ್ಯಾಕೆಟ್‌ಗಳ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡು ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾತನಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...