Thursday, August 13, 2026
Thursday, August 13, 2026

Dinesh Gundurao ಜಿಲ್ಲೆಯಲ್ಲಿನ ಮಂಗನ ಕಾಯಿಲೆ ಪೀಡಿತ ಪ್ರದೇಶಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಭೇಟಿ

Date:

Dinesh Gundurao ಗುಂಡುರಾವ್‌ರವರು ನ.26 ಮತ್ತು 27 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ನ.26 ರಂದು ಮಧ್ಯಾಹ್ನ 1.55ಕ್ಕೆ ವಿಮಾನದ ಮೂಲಕ ಶಿವಮೊಗ್ಗಕ್ಕೆ ಆಗಮಿಸಿ, ಸಾಗರಕ್ಕೆ ರಸ್ತೆ ಮೂಲಕ ಪ್ರಯಾಣಿಸಲಿದ್ದಾರೆ. ಮ. 3.00ಕ್ಕೆ ಸಾಗರ ತಾಲೂಕಿನ ತಾಳಗುಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಹಿರೆಮನೆ ಹಾಗೂ ತಲವಾಟ ಗ್ರಾಮಗಳಲ್ಲಿ ಮಂಗನಕಾಯಿಲೆ (ಕೆ.ಎಫ್.ಡಿ) ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಮ. 4.00ಕ್ಕೆ ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ.

ಸಂಜೆ 5.00ಕ್ಕೆ ಸಾಗರದ ಪ್ರವಾಸಿ ಮಂದಿರದಲ್ಲಿ ಮಂಗನಕಾಯಿಲೆ ಕಂಡುಬAದಿರುವ ಜಿಲ್ಲೆಗಳಲ್ಲಿ ಕೈಗೊಂಡಿರುವ/ಕೈಗೊಳ್ಳಬೇಕಾಗಿರುವ ಸುರಕ್ಷಾ ಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 7.00 ಸಾಗರದಿಂದ ಶಿವಮೊಗ್ಗಕ್ಕೆ ಆಗಮಿಸಿ ಸರ್ಕ್ಯೂಟ್ ಹೌಸ್‌ನಲ್ಲಿ ತಂಗಲಿದ್ದಾರೆ.

Dinesh Gundurao ನ. 27ರಂದು ಬೆಳಗ್ಗೆ 8.20ಕ್ಕೆ ಭದ್ರಾವತಿ ತೆರಳಿ ಭದ್ರಾವತಿ ತಾಲೂಕು ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ. ಬೆ. 9.25 ಭದ್ರಾವತಿಯಿಂದ ಶಿವಮೊಗ್ಗ ಆಗಮಿಸಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.

ಮಧ್ಯಾಹ್ನ: 2.15ಕ್ಕೆ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಕೆ. ಎ. ಹಿದಾಯತ್ತುಲ್ಲರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...